Thursday, July 14, 2011

ಇರುಳ ಸಮಯ

ಇರುಳ ಸಮಯ ಸುರಿಮಳೆಯೊಳಗೆ
ದೋಣಿಗಳಿಳಿದಿವೆ ಹೊಳೆಯೊಳಗೆ

ಶ್ಯಾಮಲ ಸಾಗರವೇ ಗುರಿಯೆನ್ನುತ
ಸಾಗಿವೆ ಸಾವಿರ ದೋಣಿಗಳು |
ಸೆರಗೇ ಹಾಯಿ ! ಹೃದಯವೆ ಹುಟ್ಟು !
ದೋಣಿ ಹಿಂದೆ ಜಲವೇಣಿಗಳು ||

ಏರಿಳಿಯುವ ಅಲೆ! ಮುಂದೆ ಇದಿರು ಹೊಳೆ !
ಜಗ್ಗುವುವೇ ಈ ಹಾಯಿಗಳು ?
ಎದೆಯನೆ ಸೀಳುವ ಹೋಳು ಬಂಡೆಗಳು
ಆ ಎನ್ನುವ ಸುಳಿಬಾಯಿಗಳು ||

ಮುಳುಗಿಸೊ ಅಥವಾ ತೇಲಿಸೊ ರಥವ
ಧೃತಿಯೊಂದೇ ಗತಿ ಹಾಡುತಿವೆ |
ಮುಳುಗುವ ಹೊರತೂ ತೇಲದು ದೋಣಿ
ಹಾಯಿ ವಿದಾಯವ ಹೇಳುತಿವೆ ||

-ಹೆಚ್. ಎಸ್. ವೆಂಕವೇಶಮೂರ್ತಿ

No comments:

Post a Comment

ಶ್ರೀ ರಾಮ ನವಮಿಯ ಶುಭಾಶಯಗಳು

 ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಗೆ ಪ್ರಭುವಾಗದೆ ಪ್ರತಿನಿಧಿಯಾಗಿ ಸಾಮಾನ್ಯರಿಗೂ ಬೆಲೆ ಕೊಟ್ಟು , ಸ್ವಂತದ್ದಾಗಲಿ, ಸಂಸಾರದ್ದಾಗಲಿ, ಸಮಾಜದ್ದಾಗಲಿ, ಹೆಣ್ಣಾಗಲಿ, ಗಂಡಾಗ...