Tuesday, August 9, 2011

ಕುಂಬಾರಕಿ ಈಕಿ ಕುಂಬಾರಕಿ

ಕುಂಬಾರಕಿ ಈಕಿ ಕುಂಬಾರಕಿ ಈ
ಬ್ರಂಹಾಂಡವೆಲ್ಲ ತುಂಬಿಕೊಂಡಿರುವ

ಚಿನ್ನ ಎಂಬುವ ಮಣ್ಣನು ತರಿಸಿ
ತನು ಎಂಬುವ ನೀರನು ಹಣಿಸಿ
ಮನ ಎಂಬುವ ಹುದಲನು ಕಲಸಿ
ಗುಣ ಎಂಬುವ ಸೂಸನು ಹಾಕಿ

ಭಕ್ತಿ ಎಂಬುವ ತಿಗರಿಯ ಮಾಡಿ
ಧ್ಯಾನ ಎಂಬುವ ಬಡಗಿಯ ಊರಿ
ಮುನ್ನೂರರವತ್ತ ಸುತ್ತನು ತಿರಗಿ
ಗಡಗಿ ತಯಾರು ಮಾಡೂವಾಕಿ

ಆಚಾರ ಎಂಬುವ ಆವಿಗೆ ಮುಚ್ಚಿ
ಅರಿವು ಎಂಬುವ ಬೆಂಕಿಯ ಹಚ್ಚಿ
ಸಾವಿರ ಕೊಡಗಳ ಸುಟ್ಟು ಇಂದು
ಸಂತಿಗಿ ಓಯ್ದು ಮಾರುವಾಕಿ

ಮೂರು ಕಾಸಿಗೊಂದು ಕುಡಕಿಯ ಮಾರಿ
ಆರು ಕಾಸಿಗೊಂದು ಗಡಗಿಯ ಮಾರಿ
ವಸುಧೆಯೊಳು ಶಿಶುನಾಳಧೀಶನ ಮುಂದೆ
ಧ್ಯಾನದ ಮುಗಿಯೊಂದು ಇಡುವಾಕಿ

-ಶಿಶುನಾಳ ಶರೀಫ್

(ಕಾರಂಜಿ ಸಿನಿಮಾದಲ್ಲಿ ಈ ಹಾಡು ತುಂಬ ಸೊಗಸಾಗಿ ಮೂಡಿಬಂದಿದೆ.)

No comments:

Post a Comment

ಒಂದು ಸಂಕೀರ್ಣ ವಿಷಯದ ಬಗ್ಗೆ ಸರಳವಾಗಿ ತಿಳಿದುಕೊಳ್ಳೋಣ ಬನ್ನಿ! -ರೋಹಿತ್ ಚಕ್ರತೀರ್ಥ

ಇಂದು ಪ್ರಧಾನಿ ಮೋದಿಯವರು ಮಾನ್ಯ ಜನರಿಗೆ ಸಾಮಾನ್ಯವಾಗಿ ಅರ್ಥವಾಗದ ಅಥವಾ ತಲೆಯ ಮೇಲಿಂದ ಹಾರಿಹೋಗುವ ಒಂದು ವಿಷಯದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಮೂರು ಸಂಗತಿಗಳು...