Monday, March 19, 2012

ಜಾರುಬೆಣ್ಣೆಯಿದೆ ಕೈಯೊಳಗೆ

ಜಾರುಬೆಣ್ಣೆಯಿದೆ ಕೈಯೊಳಗೆ
ಅಂಬೆಗಾಲನಡೆ! ಧೂಳಡರಿದ ಮೈ!
ಮೊಸರಿನ ಕೊಸರಿದೆ ಮುಖದೊಳಗೆ!


ಕನ್ನಡಿ ಕೆನ್ನೆ! ನೇರಿಲೆ ಕಣ್ಣು !
ಹಣೆಯಲಿ ಗೋರೋಚನ ತಿಲಕ !
ನೊಸಲಿನ ತುಂಬ ಗುಂಗುರಿನುಂಗುರ
ಮುಖಕಮಲಕೆ ಕವಿದಿವೆ ಭೃಂಗ ||


ಕೊರಳಲಿ ತಾಯತಿ! ಹುಲಿಯುಗುರಿನ ಸರ !
ಬರುತಿದೆ ಶ್ಯಾಮಾಂಗನ ಡೋಲಿ |
ಗಾಳಿಗಾಡುತಿದೆ ಸಿರಿ ಮುಂಗುರುಳು
ಮಧು ಹೀರಿದ ದುಂಬಿಯ ಹೋಲಿ || 


-ಹೆಚ್. ಎಸ್ ವೆಂಕಟೇಶ ಮೂರ್ತಿ (ಉತ್ತರಾಯಣ ಮತ್ತು.... ಕವನ ಸಂಕಲನದಿಂದ)

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...