Sunday, March 17, 2013

ಬದುಕು ಮಾಯೆಯ ಮಾಟ - ದ ರಾ ಬೇಂದ್ರೆ


ಬದುಕು ಮಾಯೆಯ ಮಾಟ  -
ಮಾತು ನೊರೆ-ತೆರೆಯಾಟ
ಜೀವ ಮೌನದ ತುಂಬ ಗುಂಭ ಮುನ್ನೀರು
ಕರುಣೋದಯದ ಕೂಡ
ಅರುಣೋದಯವು ಇರಲು
ಎದೆಯ ತುಂಬುತ್ತಲಿದೆ ಹೊಚ್ಚ ಹೊನ್ನೀರು!

ನಿಜದಲ್ಲೆ ಒಲವಿರಲಿ
ಚೆಲುವಿನಲೆ ನಲಿವಿರಲಿ
ಒಳಿತಿನಲೆ ಬಲವಿರಲಿ ಜೀವಕೆಳೆಯಾ!
ದೇವ ಜೀವನ ಕೇಂದ್ರ
ಒಬ್ಬೊಬ್ಬನು ಇಂದ್ರ
ಏನಿದ್ದರು ಎಲ್ಲ ಎಲ್ಲೆ ತಿಳಿಯಾ.

ಆತನಾಕೆಯೆ ನಮ್ಮ
ಜೀವನೌಕೆಯ ತಮ್ಮ
ಧ್ರುವ ಮರೆಯದಂತೆ ನಡೆಸುತ್ತಲಿರಲಿ
ಈ ನಾನು ಆ ನೀನು
ಒಂದೆ ತಾನಿನ ತಾನು
ತಾಳಲಯ ರಾಗಗಳು ಸಹಜ ಬರಲಿ

ಸಾಹಿತ್ಯ – ದ ರಾ ಬೇಂದ್ರೆ
ಸಂಗೀತ / ಗಾಯನ – ಸಿ ಅಶ್ವಥ್

No comments:

Post a Comment

ನುಡಿಮುತ್ತು

ನಿಮ್ಮ ಮನಸ್ಸಿನ ಮೇಲೆ ನಿಮಗೆ ಅಧಿಕಾರವಿದೆ -  ಹೊರಗಿನ ಘಟನೆಗಳ ಮೇಲೆ ಅಲ್ಲ.  ಇದನ್ನು ಅರಿತುಕೊಳ್ಳಿ,  ಮತ್ತು ನೀವು ಶಕ್ತಿಯನ್ನು ಕಂಡುಕೊಳ್ಳುವಿರಿ.🪻 ರಣಾಂಗಣದಲ್ಲಿ ಸೋ...