Saturday, April 13, 2013

ಆನಂದಮಯ ಈ ಜಗಹೃದಯ ಏತಕೆ ಭಯ ಮಾಣೋ- ಕುವೆಂಪು


ಆನಂದಮಯ ಈ ಜಗಹೃದಯ ಏತಕೆ ಭಯ ಮಾಣೋ
ಸೂರ್ಯೋದಯ ಚಂದ್ರೋದಯ ದೇವರ ದಯ ಕಾಣೋ
ಆನಂದಮಯ ಈ ಜಗಹೃದಯ

ಬಿಸಿಲಿದು ಬರಿ ಬಿಸಿಲಲ್ಲವೋ ಸೂರ್ಯನ ಕೃಪೆ ಕಾಣೋ
ಸೂರ್ಯನು ಬರಿ ರವಿಯಲ್ಲವೋ ಆ ಭ್ರಾಂತಿಯ ಮಾಣೋ
ಆನಂದಮಯ ಈ ಜಗಹೃದಯ.

ರವಿವದನವೇ ಶಿವಸದನವೊ ಬರಿ ಕಣ್ಣದು ಮಣ್ಣೋ
ಶಿವನಿಲ್ಲದೆ ಸೌಂದರ್ಯವೇ ಶವ ಮುಖದ ಕಣ್ಣೋ
ಆನಂದಮಯ ಈ ಜಗಹೃದಯ.

ಉದಯದೊಳೇನ್ ಹೃದಯವ ಕಾಣ್, ಅದೇ ಅಮೃತದ ಹಣ್ಣೋ
ಶಿವಕಾಣದೆ ಕವಿ ಕುರುಡನೋ ಶಿವ ಕಾವ್ಯದ ಕಣ್ಣೋ
ಆನಂದಮಯ ಈ ಜಗಹೃದಯ.

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...