Saturday, April 13, 2013

ಆನಂದಮಯ ಈ ಜಗಹೃದಯ ಏತಕೆ ಭಯ ಮಾಣೋ- ಕುವೆಂಪು


ಆನಂದಮಯ ಈ ಜಗಹೃದಯ ಏತಕೆ ಭಯ ಮಾಣೋ
ಸೂರ್ಯೋದಯ ಚಂದ್ರೋದಯ ದೇವರ ದಯ ಕಾಣೋ
ಆನಂದಮಯ ಈ ಜಗಹೃದಯ

ಬಿಸಿಲಿದು ಬರಿ ಬಿಸಿಲಲ್ಲವೋ ಸೂರ್ಯನ ಕೃಪೆ ಕಾಣೋ
ಸೂರ್ಯನು ಬರಿ ರವಿಯಲ್ಲವೋ ಆ ಭ್ರಾಂತಿಯ ಮಾಣೋ
ಆನಂದಮಯ ಈ ಜಗಹೃದಯ.

ರವಿವದನವೇ ಶಿವಸದನವೊ ಬರಿ ಕಣ್ಣದು ಮಣ್ಣೋ
ಶಿವನಿಲ್ಲದೆ ಸೌಂದರ್ಯವೇ ಶವ ಮುಖದ ಕಣ್ಣೋ
ಆನಂದಮಯ ಈ ಜಗಹೃದಯ.

ಉದಯದೊಳೇನ್ ಹೃದಯವ ಕಾಣ್, ಅದೇ ಅಮೃತದ ಹಣ್ಣೋ
ಶಿವಕಾಣದೆ ಕವಿ ಕುರುಡನೋ ಶಿವ ಕಾವ್ಯದ ಕಣ್ಣೋ
ಆನಂದಮಯ ಈ ಜಗಹೃದಯ.

No comments:

Post a Comment

ಒಂದು ಸಂಕೀರ್ಣ ವಿಷಯದ ಬಗ್ಗೆ ಸರಳವಾಗಿ ತಿಳಿದುಕೊಳ್ಳೋಣ ಬನ್ನಿ! -ರೋಹಿತ್ ಚಕ್ರತೀರ್ಥ

ಇಂದು ಪ್ರಧಾನಿ ಮೋದಿಯವರು ಮಾನ್ಯ ಜನರಿಗೆ ಸಾಮಾನ್ಯವಾಗಿ ಅರ್ಥವಾಗದ ಅಥವಾ ತಲೆಯ ಮೇಲಿಂದ ಹಾರಿಹೋಗುವ ಒಂದು ವಿಷಯದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಮೂರು ಸಂಗತಿಗಳು...