Wednesday, March 20, 2013

ಮುಚ್ಚು ಮರೆ ಇಲ್ಲದೆಯೇ - ಕುವೆಂಪು


ಮುಚ್ಚು ಮರೆ ಇಲ್ಲದೆಯೇ ನಿನ್ನಮುಂದೆಲ್ಲವನು ಬಿಚ್ಚಿಡುವೇ ಓ ಗುರುವೇ ಅಂತರಾತ್ಮ
ಪಾಪವಿದೆ ಪುಣ್ಯವಿದೆ , ನರಕವಿದೆ ನಾಕವಿದೆ, ಸ್ವೀಕರಿಸು ಓ ಗುರುವೇ ಅಂತರಾತ್ಮ
|| ಮುಚ್ಚು ಮರೆ ಇಲ್ಲದೆಯೇ ||

ರವಿಗೆ ಕಾಂತಿಯನೀವ ನಿನ್ನ ಕಣ್ಣೀಕ್ಷಿಸಲು, ಪಾಪ ತಾನುಳಿಯುವುದೇ ಪಾಪವಾಗಿ
ಗಂಗೆ ತಾನುದ್ಭವಿಪ ನಿನ್ನಡಿಯ ಸೋಂಕಿಂಗೇ, ನರಕ ತಾನುಳಿಯುವುದೇ ನರಕವಾಗಿ
|| ಮುಚ್ಚು ಮರೆ ಇಲ್ಲದೆಯೇ ||

ಸಾಂತ ರೀತಿಯನೆಮ್ಮೀ ಕದಡಿರುವುದೆನ್ನಾತ್ಮ, ನಾಂತರೀತಿಯು ಅದೆಂತೋ ಓ ಅನಂತ
ನನ್ನ ನೀತಿಯ ಕುರುಡಿನಿಂದೆನ್ನ ರಕ್ಶಿಸಯ್, ನಿನ್ನ ಪ್ರೀತಿಯ ಬೆಳಕಿನ ಆನಂದಕೆ
|| ಮುಚ್ಚು ಮರೆ ಇಲ್ಲದೆಯೇ ||

No comments:

Post a Comment

“ಇಗೋ, ಬೆಂಗಳೂರು ಹೀಗಿತ್ತು”ಜಿ. ವೆಂಕಟಸುಬ್ಬಯ್ಯ -

“ ಇಗೋ , ಬೆಂಗಳೂರು ಹೀಗಿತ್ತು ” ಜಿ . ವೆಂಕಟಸುಬ್ಬಯ್ಯ   ಅರವತ್ತು ವರ್ಷಗಳ ಹಿಂದೆ ಬೆಂಗಳೂರು ಇಷ್ಟು ದೊಡ್ಡದಾಗಿರಲಿಲ್ಲ . ಆಗ ಎರಡು ಬೆಂಗಳೂರು ಇತ್ತು ...