Monday, September 9, 2013

ಮಹಾಕವಿ ಮಲಗಿದ್ದಾನೆ - ಬೇಲೂರು ರಘುನಂದನ


ಮಹಾಕವಿ ಮಲಗಿದ್ದಾನೆ
ಮುಂಜಾವಿನ ಹಸುರರವಿ
ಹೆಸರಿರದ ಉಸಿರನು
ಜಗಕೆ ಹಂಚಲು
ಇವನ ಬಳಿ ಕಳಿಸಿದ್ದಾನೆ

ಶ್ರೀ ಬೇಲೂರು ರಘುನಂದನ್
ಕಾಡಿನ ಉನ್ಮಾದಕೆ
ಭುವಿ ಗಗನದ ಮಿಲನಕ್ಕೆ
ಹೂಮಳೆಯ ಸ್ಕಲನ
ಜೀವ ಹುಟ್ಟುವ ನೆಲದಿ
ಗಟ್ಟಿಯಾಗಿ ಬದುಕ
ಗುಟ್ಟು ಹೇಳಲು
ಮಹಾ ಕವಿ ಮಲಗಿದ್ದಾನೆ

ಮಣ್ಣು ಕಣ್ಣಾಗಿ ಕಣ್ಣು ಹಣ್ಣಾಗಿ
ನೀರ ಹೀರಿ ನೆರನ್ನೇ ಕೊಡುವ
ಹಸುರ ಎಲೆಯಾಗಿ
ಕಲೆಯ ಹೊಳೆಯಾಗಿ
ಕಾರುಣ್ಯದ ಕತೆಯ ಹೇಳುವ
ಗುರುವಾಗಿ ಮಹಾಕವಿ ಮಲಗಿದ್ದಾನೆ

No comments:

Post a Comment

ನುಡಿಮುತ್ತು

ನಿಮ್ಮ ಮನಸ್ಸಿನ ಮೇಲೆ ನಿಮಗೆ ಅಧಿಕಾರವಿದೆ -  ಹೊರಗಿನ ಘಟನೆಗಳ ಮೇಲೆ ಅಲ್ಲ.  ಇದನ್ನು ಅರಿತುಕೊಳ್ಳಿ,  ಮತ್ತು ನೀವು ಶಕ್ತಿಯನ್ನು ಕಂಡುಕೊಳ್ಳುವಿರಿ.🪻 ರಣಾಂಗಣದಲ್ಲಿ ಸೋ...