Thursday, November 21, 2013

ಸತ್ಯವಂತರ ಸಂಗವಿರಲು ತೀರ್ಥವೇತಕೆ

ಸತ್ಯವಂತರ ಸಂಗವಿರಲು ತೀರ್ಥವೇತಕೆ
ನಿತ್ಯ ಜ್ಞಾನಿಯಾದ ಮೇಲೆ ಚಿಂತೆ ಯಾತಕೆ||ಪ||

ತಾನು ಉಣ್ಣದ ಪರರಿಗಿಕ್ಕದ ಧನವಿದ್ದೇತಕೆ
ಮಾನ ಹೀನನಾಗಿ ಬಾಳ್ವ ಮನುಜನೇತಕೆ
ಜ್ಞಾನವಿಲ್ಲದೇ ನೂರು ಕಾಲ ಬದುಕಲೇತಕೆ
ಮಾನಿನಿಯ ತೊರೆದವಗೆ ಭೋಗವೇತಕೆ||೧||

ಮಾತು ಕೇಳದೆ ಮಲತು ನಡೆವ ಮಕ್ಕಳೇತಕೆ
ಪ್ರೀತಿ ಇಲ್ಲದೆ ಎಡೆಯನಿಕ್ಕಿದ ಅನ್ನವೇತಕೆ
ನೀತಿಯರಿತು ನಡೆಯದಿರುವ ಬಂಟನೇತಕೆ
ಸೋತು ಹೆಣ್ಣಿಗೆ ಹೆದರಿ ನಡೆವ ಪುರುಷನೇತಕೆ||೨||

ಸಂಜ್ಞೆಯರಿತು ನಡೆಯದಿರುವ ಸತಿ ಇದ್ದೇತಕೆ
ಮುನ್ನ ಕೊಟ್ಟು ಪಡೆಯದನ್ನು ಬಯಸಲೇತಕೆ
ಮನ್ನಣೆಯ ನಡೆಸದಿರುವ ದೊರೆಯು ಏತಕೆ
ಚೆನ್ನ ಆದಿ ಕೇಶವನಲ್ಲದ ದೈವವೇತಕೆ ||೩||


Krupe : http://bhakthigeetha.blogspot.in/


No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...