Thursday, November 21, 2013

ಸತ್ಯವಂತರ ಸಂಗವಿರಲು ತೀರ್ಥವೇತಕೆ

ಸತ್ಯವಂತರ ಸಂಗವಿರಲು ತೀರ್ಥವೇತಕೆ
ನಿತ್ಯ ಜ್ಞಾನಿಯಾದ ಮೇಲೆ ಚಿಂತೆ ಯಾತಕೆ||ಪ||

ತಾನು ಉಣ್ಣದ ಪರರಿಗಿಕ್ಕದ ಧನವಿದ್ದೇತಕೆ
ಮಾನ ಹೀನನಾಗಿ ಬಾಳ್ವ ಮನುಜನೇತಕೆ
ಜ್ಞಾನವಿಲ್ಲದೇ ನೂರು ಕಾಲ ಬದುಕಲೇತಕೆ
ಮಾನಿನಿಯ ತೊರೆದವಗೆ ಭೋಗವೇತಕೆ||೧||

ಮಾತು ಕೇಳದೆ ಮಲತು ನಡೆವ ಮಕ್ಕಳೇತಕೆ
ಪ್ರೀತಿ ಇಲ್ಲದೆ ಎಡೆಯನಿಕ್ಕಿದ ಅನ್ನವೇತಕೆ
ನೀತಿಯರಿತು ನಡೆಯದಿರುವ ಬಂಟನೇತಕೆ
ಸೋತು ಹೆಣ್ಣಿಗೆ ಹೆದರಿ ನಡೆವ ಪುರುಷನೇತಕೆ||೨||

ಸಂಜ್ಞೆಯರಿತು ನಡೆಯದಿರುವ ಸತಿ ಇದ್ದೇತಕೆ
ಮುನ್ನ ಕೊಟ್ಟು ಪಡೆಯದನ್ನು ಬಯಸಲೇತಕೆ
ಮನ್ನಣೆಯ ನಡೆಸದಿರುವ ದೊರೆಯು ಏತಕೆ
ಚೆನ್ನ ಆದಿ ಕೇಶವನಲ್ಲದ ದೈವವೇತಕೆ ||೩||


Krupe : http://bhakthigeetha.blogspot.in/


No comments:

Post a Comment

“ಇಗೋ, ಬೆಂಗಳೂರು ಹೀಗಿತ್ತು”ಜಿ. ವೆಂಕಟಸುಬ್ಬಯ್ಯ -

“ ಇಗೋ , ಬೆಂಗಳೂರು ಹೀಗಿತ್ತು ” ಜಿ . ವೆಂಕಟಸುಬ್ಬಯ್ಯ   ಅರವತ್ತು ವರ್ಷಗಳ ಹಿಂದೆ ಬೆಂಗಳೂರು ಇಷ್ಟು ದೊಡ್ಡದಾಗಿರಲಿಲ್ಲ . ಆಗ ಎರಡು ಬೆಂಗಳೂರು ಇತ್ತು ...