Wednesday, July 15, 2015

ವೇಣಿ ಮಾಧವನ ತೋರಿಸೆ – ವಾದಿರಾಜರು

ವೇಣಿ ಮಾಧವನ ತೋರಿಸೆ ಜಾಣೆ ತ್ರಿವೇಣಿ
ಕಾಣದೆ ನಿಲ್ಲಲಾರೆನೆ||ಪಲ್ಲವಿ||

ಕಾಣುತ ಭಕ್ತರ ಕರುಣದಿ ಸಲಹುವ
ಜಾಣೆ ತ್ರಿವೇಣಿ ಸಾರೆ ಸುಖವಾಣಿ||ಅನುಪಲ್ಲವಿ||

ಬಂದೆನೆ ಬಹಳ ದೂರದಿ ಭವಸಾಗರ ತರಣಿ
ನಿಂದೆನೆ ನಿನ್ನ ತೀರದಿ
ಒಂದು ಗಳಿಗೆ ಹರಿಯ ಅಗಲಿ ನಾನಿರಲಾರೆ
ಮಂದಗಮನೆ ಎನ್ನ ಮುಂದಕೆ ಕರೆಯೆ ||೧||

ಶರಣಾಗತರ ಪಾಲಿಪುದು ತರಳೆ ನಿನ್ನ ಬಿರುದು
ಕರುಣದಿಂದೆನ್ನ ಪೊರೆಯೆ
ಸ್ಮರಣೆ ಮಾತ್ರದಿ ಭವತಾಪವ ಹರಿಸುವ
ಸ್ಮರನ ಪಿತ ಮುರಹರನ ಕರುಣದಿ ||೨||

ಸುಜನರಿಗೆಲ್ಲಾಧರಳೆ ಸುಖಶೀಲೆ ಕೇಳೆ
ಕುಜನ ಸಂಗವನು ಕೀಳೆ
ನಿಜಪದವಿಯನೀವ ಹಯವದನನ
ಪದ ರಜವ ತೋರಿಸೆ ಮದಗಜಗಮನೆ ||೩||

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...