Monday, October 26, 2015

ಚುಟುಕ - ಸಂತೋಷ್ ಕುಮಾರ್ ಎಲ್. ಎಂ.

---1 ---

ಬತ್ತಿಯ ಬಾಯಿಗೆ
ಬೆಂಕಿಯಿಟ್ಟವನ ಆಶಯ
ಬೆಳಕಷ್ಟೇ!
ಮುಗಿಯುವ
ಅದರ ಆಯಸ್ಸಲ್ಲ

---2---------


ಗೂಡು ಕಟ್ಟಿದ್ದ ಮರವ
ಧರೆಗುರುಳಿಸಿದ ಕಾರಣ
ಹುಡುಕುತ್ತಿದ್ದ ಹಕ್ಕಿಗೆ
ವಿಳಾಸವಿಲ್ಲ...
ಹಕ್ಕಿಯೂ ಶಪಿಸಿತು,
ಉರುಳಿಸಿದ ದುರುಳನಿಗೂ
ಮುಂದೊಂದು ದಿನ
ವಿಳಾಸವಿಲ್ಲ!

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...