Monday, October 26, 2015

ಚುಟುಕ - ಸಂತೋಷ್ ಕುಮಾರ್ ಎಲ್. ಎಂ.

---1 ---

ಬತ್ತಿಯ ಬಾಯಿಗೆ
ಬೆಂಕಿಯಿಟ್ಟವನ ಆಶಯ
ಬೆಳಕಷ್ಟೇ!
ಮುಗಿಯುವ
ಅದರ ಆಯಸ್ಸಲ್ಲ

---2---------


ಗೂಡು ಕಟ್ಟಿದ್ದ ಮರವ
ಧರೆಗುರುಳಿಸಿದ ಕಾರಣ
ಹುಡುಕುತ್ತಿದ್ದ ಹಕ್ಕಿಗೆ
ವಿಳಾಸವಿಲ್ಲ...
ಹಕ್ಕಿಯೂ ಶಪಿಸಿತು,
ಉರುಳಿಸಿದ ದುರುಳನಿಗೂ
ಮುಂದೊಂದು ದಿನ
ವಿಳಾಸವಿಲ್ಲ!

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...