Thursday, March 10, 2016

ಚುಟುಕ - ರಘು ವಿ,

ವರುಷವಿಡೀ ನಡೆವಂಗೆ
ಎಡವುದೇಂ ಹೊಸದೆ?
ರಘು ವಿ
ಉರಿವ ದೀಪಕ್ಕೆ ಕಿಟ್ಟ
ಕಟ್ಟುವುದೇಂ ಹೊಸದೆ?
ಜನುಮವಿಡೀ ಉರಿವ
ನಿರಂತರದ ದಿನಕರಗೆ 
ಗ್ರಹಣವಿದು ಹೊಸದೆ?
ನೆರಳಾಟಕ್ಕೆ ಅಂಜುವೊಡೆ
ಬಾಳನಂಜುಗಳ ಹೇಗೆ
ಅರಗಿಪೆಯೊ ಮನುಜ?
ಮನದ ಗ್ರಹಣವ ಕಳೆದು
ನಡೆ ಬೆಳಕಿನೆಡೆಗೆ!
[ ಕಿಟ್ಟ ಕಟ್ಟುವುದು = ಬತ್ತಿ ಉರಿದು ಕಪ್ಪಾಗುವುದು. Carbonization]




No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...