ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು
ಸ್ವಾಮೀ ನನ್ನಯ್ಯ ರಥವೇರಿ
ಬರುವಾಗ ನಾವೆದ್ದು ಕೈಯ್ಯ ಮುಗುದೇವು
ಮಕ್ಕಳಾಟವು ಚಂದ ಮತ್ತೆ ಯೌವನ ಚಂದ
ಮುಪ್ಪಿನಲಿ ಚಂದ ನರೆಗಡ್ಡ
ಜಗದೊಳಗೆ ಎತ್ತ ನೋಡಿದರೂ ನಗು ಚಂದ
ಹಾಲ್ಬೇಡಿ ಅತ್ತಾನ ಕೊಲ್ಬೇಡಿ ಕುಣುದಾನ
ಮೊಸರ್ಬೇಡಿ ಕೆಸರಾ ತುಳುದಾನ
ಕಂದನ ಕುಸುರಾದ ಗೆಜ್ಜೆ ಕೆಸರಾಯ್ತು
ಕಪ್ಪೆಂದು ಜನರನ್ನು ಎತ್ಯಾಡದಿರು ಕಂಡ್ಯ
ಕಪ್ಪಾದ ಹಸುವು ಕರೆದಾರೆ
ಆ ಹಾಲು ಒಪ್ಪೀತು ಶಿವನ ಪೂಜೆಗೆ
ಎಲ್ಲಾದರು ಇರಲವ್ವ ಹುಲ್ಲಾಗಿ ಬೆಳೆಯಾಲಿ
ನೆಲ್ಲಿ ಬುಡ್ಯಾಗಿ ಚಿಗಿಯಾಲಿ
ನನ ಕಂದ ಜಯವನ್ತನಾಗಿ ಮೆರೆಯಾಲಿ
* * * *
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Subscribe to:
Post Comments (Atom)
ಶ್ರೀ ರಾಮ ನವಮಿಯ ಶುಭಾಶಯಗಳು
ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಗೆ ಪ್ರಭುವಾಗದೆ ಪ್ರತಿನಿಧಿಯಾಗಿ ಸಾಮಾನ್ಯರಿಗೂ ಬೆಲೆ ಕೊಟ್ಟು , ಸ್ವಂತದ್ದಾಗಲಿ, ಸಂಸಾರದ್ದಾಗಲಿ, ಸಮಾಜದ್ದಾಗಲಿ, ಹೆಣ್ಣಾಗಲಿ, ಗಂಡಾಗ...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
👌🏻
ReplyDeleteKanada
ReplyDelete