ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು
ಸ್ವಾಮೀ ನನ್ನಯ್ಯ ರಥವೇರಿ
ಬರುವಾಗ ನಾವೆದ್ದು ಕೈಯ್ಯ ಮುಗುದೇವು
ಮಕ್ಕಳಾಟವು ಚಂದ ಮತ್ತೆ ಯೌವನ ಚಂದ
ಮುಪ್ಪಿನಲಿ ಚಂದ ನರೆಗಡ್ಡ
ಜಗದೊಳಗೆ ಎತ್ತ ನೋಡಿದರೂ ನಗು ಚಂದ
ಹಾಲ್ಬೇಡಿ ಅತ್ತಾನ ಕೊಲ್ಬೇಡಿ ಕುಣುದಾನ
ಮೊಸರ್ಬೇಡಿ ಕೆಸರಾ ತುಳುದಾನ
ಕಂದನ ಕುಸುರಾದ ಗೆಜ್ಜೆ ಕೆಸರಾಯ್ತು
ಕಪ್ಪೆಂದು ಜನರನ್ನು ಎತ್ಯಾಡದಿರು ಕಂಡ್ಯ
ಕಪ್ಪಾದ ಹಸುವು ಕರೆದಾರೆ
ಆ ಹಾಲು ಒಪ್ಪೀತು ಶಿವನ ಪೂಜೆಗೆ
ಎಲ್ಲಾದರು ಇರಲವ್ವ ಹುಲ್ಲಾಗಿ ಬೆಳೆಯಾಲಿ
ನೆಲ್ಲಿ ಬುಡ್ಯಾಗಿ ಚಿಗಿಯಾಲಿ
ನನ ಕಂದ ಜಯವನ್ತನಾಗಿ ಮೆರೆಯಾಲಿ
* * * *
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Subscribe to:
Post Comments (Atom)
ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ
ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
-
Krupe : http://azsmarane.blogspot.in/2012/01/blog-post_21.html ಕನ್ನಡ ಪುಸ್ತಕ ಪ್ರೀತಿಯುಳ್ಳ ಮಿತ್ರರೆಲ್ಲರಿಗೂ... ಇಲ್ಲಿದೆ ಕನ್ನಡ ಕಾದಂಬರಿ ಹಾ...
👌🏻
ReplyDeleteKanada
ReplyDelete