ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Friday, June 24, 2016
"ಕೋರಿಕೆ" - ಈಶ್ವರ ಸಣಕಲ್ಲ
ಜಗವೆಲ್ಲ ನಗುತಿರಲಿ!
ಜಗದಳುವು ನನಗಿರಲಿ!
ನಾನಳಲು, ಜಗವೆನ್ನನೆತ್ತಿಕೊಳದೇ?
ನಾ ನಕ್ಕು, ಜಗವಳಲು ನೋಡಬಹುದೇ?
ತೆರವಾಗಿ ನನ್ನೆದೆಯು,
ಧರೆಯೆದೆಯು ಉಕ್ಕಿರಲಿ!
ಧರೆಯೊಳಗೆ ತೇಲಿಸುವೆನೆನ್ನೆದೆಯನು!
ಧರೆ ಬತ್ತಿ, ಎನ್ನೆದೆಯು ಉಕ್ಕಲೇನು?
ಪೊಡವಿಯೈಸಿರಿವಡೆದು,
ಬಡತನವು ನನಗಿರಲಿ
ಕೈಯೊಡ್ಡೆ ಪೊಡವಿಯೆನಗಿಕ್ಕದೇನು?
ಪೊಡವಿಯೇ ಮೈಯಳಿಯೆ, ಮಾಡಲೇನು?
ವಿಶ್ವವನು ತುಂಬಿರುವ
ಈಶ್ವರನೆ ಅಳತೊಡಗೆ,
ಸೈತಿಡಲು, ಸೈಪಿಡಲು ಬರುವನಾವಂ?
’ಹೇ ತಂದೆ’,ಎನಲೆನ್ನನವನೆ ಕಾವಂ!
Subscribe to:
Post Comments (Atom)
ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ
ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...
No comments:
Post a Comment