ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Friday, October 12, 2018

ಸಂಗ್ರಹ

ಯಾರೋ ಪುಣ್ಯಾತ್ಮರು ಬಹಳ ಸುಂದರವಾಗಿ ಬರೆದಿದ್ದಾರೆ ತಪ್ಪದೇ ಓದಿ

ನಾನು ಜೀವನದಲ್ಲಿ ಗೆದ್ದೇ ಗೆಲ್ಲುವೇ ಎನ್ನುವವರು ದಯವಿಟ್ಟು ಓದಿ.
ಸಾಧಿಸುವ ಛಲ ಇದ್ದರೆ ಜಗತ್ತನ್ನೇ ಗೆಲ್ಲಬಹುದು.

ಒಂದು ಯುದ್ಧದಿಂದಾಗಿ  ತಿಮ್ಮಪ್ಪ ನಾಯಕ ಕನಕದಾಸ ನಾಗಿ ಬದಲಾದ.

ನಾರದ ನ  ಭೇಟಿಯಿಂದ ಕ್ರೂರನಾಗಿದ್ದ ವ್ಯಕ್ತಿ   ವಾಲ್ಮೀಕಿ ಯಾದ.

ಎಂಟನೆಯ ವಯಸ್ಸಿಗೆ ಉಪನಯನವನ್ನು ತಿರಸ್ಕರಿಸಿ
 ಬಸವಣ್ಣ ಜಗಜ್ಯೋತಿ ಯಾದ.

ಸತತ ಪ್ರಯತ್ನ ಪ್ರಾಮಾಣಿಕ ಪರಿಶ್ರಮದಿಂದ ಡಾ.ಬಿ.ಆರ್ ಅಂಬೇಡ್ಕರ್ ಸಂವಿಧಾನ ಶಿಲ್ಪಿ ಯಾದ.

ತನ್ನ ಅದ್ಬುತ ವಿಚಾರಧಾರೆಗಳಿಂದ ಜಗತ್ತನ್ನು ಗೆದ್ದ ನರೇಂದ್ರ ವಿವೇಕಾನಂದ ನಾದ.

ತನ್ನ ಮಗನಿಗೆ ಊಟ ಹಾಕಲಾಗದೆ ತನ್ನ ಮಗನನ್ನೇ ವಿಷ ಹಾಕಿ ಕೊಲ್ಲಲು ತಾಯಿ ನಿರ್ಧರಿಸಿದ್ದಳು.
ಅಂದು ಅಚಾನಕ್ ಬದುಕುಳಿದ ವ್ಯಕ್ತಿ ಇಂದು ಕನ್ನಡದ ಸೂಪರ್ ಸ್ಟಾರ್ ಉಪೇಂದ್ರ ನಾದ.

ತನ್ನ ಬಡತನ ಹಸಿವುಗಳನ್ನು ಮೆಟ್ಟಿ ನಿಂತು ಸತತ ಅಬ್ಯಾಸದಿಂದ ರವಿ ಡಿ ಚನ್ನಣ್ಣನವರ್ ಇಂದು ಐಪಿಎಸ್ ಅಧಿಕಾರಿಯಾದ.

ಅಧಿಕಾರದ ವ್ಯಾಮೋಹಕ್ಕೆ ಬಲಿಯಾಗದೆ ಎಸ್.ಆರ್.ಕಂಠಿ ಯವರು ಮುಖ್ಯಮಂತ್ರಿಯ ಸ್ಥಾನ ಬಿಟ್ಟು ಕೊಟ್ಟು ರಾಜಕೀಯದ "ಭರತ" ನಾದ.

ಇಳಿವಯಸ್ಸಿನಲ್ಲಿಯೂ ಸರ್ಕಾರದ ತಪ್ಪು ನಿರ್ಧಾರ,  ಭ್ರಷ್ಟಾಚಾರದ ವಿರುದ್ಧ ಚಾಟಿ ಬೀಸಿ ಸತ್ಯಾಗ್ರಹ ನಡೆಸಿದ ಅಣ್ಣಾ ಹಜಾರೆ ಆಧುನಿಕ ಗಾಂಧಿ ಯಾದರು.

ಬೀದಿ ದೀಪದಲ್ಲಿ ಓದಿದ ವಿಶ್ವೇಶ್ವರಯ್ಯ ಭಾರತ ರತ್ನ ನಾದ.

ಎಂಟನೇ ತರಗತಿ ಫೇಲ್ ಆದ ಸಚಿನ್ ಇಂದು ಕ್ರಿಕೆಟ್ ಲೋಕದ ದೇವರಾದ.

ಪೆಟ್ರೋಲ್ ಹಾಕುತ್ತಿದ್ದ ಅಂಬಾನಿ ಇಂದು ಭಾರತದ ನಂಬರ್ ಒನ್ ಶ್ರೀಮಂತನಾದ.

ಗೋಪಾಲ್ ಕೃಷ್ಣ ರೋಲಂಕಿ ಎಂಬ ಆಂಧ್ರದ ಯುವಕ ಇಂಗ್ಲಿಷ್ ಮತ್ತು
 ಹಿಂದಿ ಬರದಿದ್ದರೂ ಐಎಎಸ್ ಪರೀಕ್ಷೆಯಲ್ಲಿ ಮೂರನೇ Rank ಬಂದ.

ಚಪ್ಪಲಿ ಹೋಲಿಯುತ್ತಿದ್ದ ಕುಟುಂಬದಿಂದ ಬಂದ ಅಬ್ರಹಾಂ ಲಿಂಕನ್ ಸತತ ಸೋಲು ಕಂಡರು ಕೊನೆಗೆ ಅಮೆರಿಕದ ಅಧ್ಯಕ್ಷ ನಾದ.

ಎನ್. ಅಂಬಿಕಾ ಎಂಬ ಕಾನ್ಸ್ಟೇಬಲ್ ನ ಹೆಂಡತಿ ತನ್ನ ಗಂಡ ಐಪಿಎಸ್ ಅಧಿಕಾರಿಗೆ ಕೊಡುವ ಗೌರವವನ್ನು ಕಂಡು ತಾನು ಹಾಗೆಯೇ ಅಧಿಕಾರಿಯಾಗಬೇಕೆಂದು ಛಲಬಿಡದೆ ಗೆದ್ದ ಮಹಿಳೆ (ಈಕೆಯ ಬದುಕು ತುಂಬಾ ರೋಚಕವಾಗಿದೆ ಮಿಸ್ ಮಾಡದೆ ತಿಳಿದುಕೊಳ್ಳಿ).

ನಮ್ಮ ಜಿಲ್ಲೆಯವನೊಬ್ಬ
ಐಎಎಸ್ ಅಧಿಕಾರಿಯಾದ.
ನಮ್ಮ ತಾಲೂಕಿನವನೊಬ್ಬ
ಕೆ.ಎ.ಎಸ್ ಅಧಿಕಾರಿಯಾದ.
ನಮ್ಮ ಊರಿನವನೊಬ್ಬ
ಪಿ.ಎಸ್.ಐ. ಆದ.
ನಮ್ಮ ಓಣಿಯವನೊಬ್ಬ
ಎಫ್.ಡಿ.ಎ. ಆದ.
ನಮ್ಮ ಮನೆಯ ಪಕ್ಕದವನೊಬ್ಬ
ಎಸ್.ಡಿ.ಎ ಆದ.

ಇದೆಲ್ಲವನ್ನು ನೋಡಿದರೂ ನಾವು ಏನು ಆಗಲಿಲ್ಲ...? ಏಕೆಂದರೆ ನಮ್ಮಲ್ಲಿ ಸಾಧಿಸುವ ಛಲವೇ ಸತ್ತು ಹೋಗಿರಬಹುದೇನೋ ಅನ್ನಿಸುತ್ತಿದೆ ಮತ್ತೆ ಇನ್ನು ಮುಂದಾದರು ನಾವು ಓದಬೇಕೆನ್ನಿಸುತ್ತದೆ.

ಕಷ್ಟ ಯಾರಿಗಿಲ್ಲಾ...?
ಅವಮಾನ ಯಾರಿಗಾಗಿಲ್ಲ...??
ಸೋಲನ್ನ ಯಾರು ನೋಡಿಲ್ಲ...??

ಕಷ್ಟ ಗಳನ್ನ ಮನುಷ್ಯ ಮೌನ ವಾಗಿ ದಾಟಬೇಕು.
ಪರಿಶ್ರಮ ಸದ್ದಿಲ್ಲದೆ ಸಾಗುತ್ತಿರಬೇಕು.
ಆಗ ಸಿಗುವ ಯಶಸ್ಸಿನ ಫಲ ಜಗತ್ತಿಗೆ ಕೇಳಿಸುವಷ್ಟು ಜೊರಾಗಿರುತ್ತದೆ.
ಜಗತ್ತಿನಲ್ಲಿ ಯಾವುದು ಬೇಕಾದರು ಮೋಸ ಮಾಡಬಹುದು.
ಆದರೆ ಪುಸ್ತಕ ಎಂದಿಗೂ ಮಾಡಲಾರದು.

ಎದೆಗೆ ಬಿದ್ದ ಅಕ್ಷರ..
ಭೂಮಿಗೆ ಬಿದ್ದ ಬೀಜ.. ಮುಂದೊಂದು ದಿನ ಫಲ ಕೊಡುವುದು ಎಂಬುವುದುಂಟು.

ಪುಸ್ತಕ ಗಳನ್ನ ಪ್ರೀತಿಸುವವನಿಗೆ ಸ್ನೇಹಿತರ ಅಗತ್ಯವಿಲ್ಲ.

ಕಠಿಣ ಪರಿಶ್ರಮ,ದೃಢ ಸಂಕಲ್ಪ,ತಾಳ್ಮೆ ಯೊಂದಿದ್ದರೆ ಏನನ್ನಾದರೂ ಸಾದಿಸಬಹುದು.

ಇಂತಹ ಸಂದೇಶಗಳು ಹಲವರಿಗೆ ಸ್ಫೂರ್ತಿ ಯಾಗಬಹುದು.
ಕೆಲವರಿಗೆ ಅಸಡ್ಡೆಯಾಗಿ ಕಾಣಬಹುದು..!!
ಆದರೆ.
ಸಾಧನೆ ಮಾಡುವವನಿಗೆ ಸಾಧಿಸುವ ಛಲ ಬೇಕು ಅಷ್ಟೇ.

ಭವಿಷ್ಯದ ಬಗ್ಗೆ ಚಿಂತಿಸದ್ದರೆ ನಿಮಗೆ ಭವಿಷ್ಯವೇ ಇರುವುದಿಲ್ಲ ಎಂದು  ಗಾರ್ಲ ವರ್ದಿ ರವರು ಹೇಳುತ್ತಾರೆ.

ಯೋಚಿಸಿ ನಿರ್ಧರಿಸಿ.
ಯಾಕಂದ್ರೆ ಕಳೆದು ಹೋದ ಸಮಯ ಮತ್ತೆ ಬರುವುದಿಲ್ಲ

2 comments:

  1. ಉತ್ತಮ ಮಾಹಿತಿ. ಧನ್ಯವಾದ

    ReplyDelete
  2. ಒಬ್ಬರಿಗೆ ಸಾಧ್ಯವಾದುದು ಎಲ್ಲರಿಗೂ ಸಾಧ್ಯ
    ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ
    ಯಶಸ್ಸು ಪ್ರಯತ್ನದ ಕೂಸು
    ಸೋಲು ಶಕ್ತಿಯನ್ನೂ ಗೆಲುವು ಯಶಸ್ಸನ್ನೂ ತಂದು ಕೊಡುತ್ತದೆ

    ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ

    ReplyDelete