ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Thursday, December 29, 2022
ಶಿಕಾರಿ ಕಾದಂಬರಿ - ಯಶವಂತ ಚಿತ್ತಾಲ - 2
ನಸುಕಿನ ಮಬ್ಬು ಹಾಗೂ ತಂಪು ಎರಡೂ ಬರವಣಿಗೆಗೆ ಸ್ಫೂರ್ತಿ ನೀಡುವಂತವುಗಳು. ಬೆಳಗಿನ ಜಾವದ ಮುಹೂರ್ತ ಸೃಜನಶೀಲತೆಗೆ ಅತ್ಯಂತ ಉತ್ತೇಜಕವಾದದ್ದು. ನಿತ್ಯವ್ಯವಹಾರಗಳಲ್ಲಿ, ಅವುಗಳಿಂದಾಗಿ ಹುಟ್ಟುವ ರಾಗದ್ವೇಷಗಳಲ್ಲಿ, ಆತಂಕ ದುಗುಡಗಳಲ್ಲಿ ತೊಡಕಿಕೊಂಡಿರದ ಮನಸ್ಸಿನ ಯಾವುದೋ ಭಾಗ ಇಂತಹ ಹೊತ್ತಿನಲ್ಲಿ ಜಾಗೃತವಾಗಿರುತ್ತದೆ. ಸೃಷ್ಟಿ ಕಾರ್ಯದಲ್ಲಿ ತೊಡಗಿರುವ ಮನಸ್ಸಿನ ಅಂಶ ನಿತ್ಯ ವ್ಯವಹಾರದಲ್ಲಿ ತೊಡಗಿರುವ ಮನಸ್ಸಿನಿಂದ ತೀರ ಬೇರೆಯಾದದ್ದು.
✍ ಯಶವಂತ ಚಿತ್ತಾಲ
{'ಶಿಕಾರಿ' ಕಾದಂಬರಿ}
ಶಿಕಾರಿ ಕಾದಂಬರಿ - ಯಶವಂತ ಚಿತ್ತಾಲ
ಬರೇ ಅವಿತುಕೊಳ್ಳುವ ತಾಣ ಹುಡುಕುತ್ತ ಓಡುತ್ತಿರಬೇಡ. ಎಲ್ಲ ಪರಾರಿಗೂ ಕೊನೆಯೆಂಬುದಿರಬೇಕು. ಒಮ್ಮೆಯಾದರೂ ಸ್ವಸ್ಥಾನಕ್ಕೆ ಮರಳುವ ಧೈರ್ಯ ಮಾಡಬೇಕಪ್ಪಾ. ರಾತ್ರಿ ಮಾಡಿಕೊಂಡ ನಿರ್ಧಾರವನ್ನು ದಿನಬೆಳಗಾಗುವುದರಲ್ಲಿ ಸಡಿಲುಗೊಳ್ಳಲು ಬಿಡಬಾರದು. ಬಿಗಿ ಹಿಡಿ. ಬಿಗಿಯಾಗು. ಗಟ್ಟಿಯಾಗು. ಕವಚ ಕುಂಡಲಗಳನ್ನು ಕಳಚು. ನೀನೇ ನಿನ್ನ ಸುತ್ತ ಬೆಳೆಯಿಸಿಕೊಂಡ ಚಿಪ್ಪನ್ನೊಡೆದು ಹೊರಕ್ಕೆ ಬರಬೇಕು. ತೆರೆ. ತೆರೆದುಕೋ....
✍ ಯಶವಂತ ಚಿತ್ತಾಲ
{'ಶಿಕಾರಿ' ಕಾದಂಬರಿ}
Subscribe to:
Posts (Atom)
ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ
ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...