Showing posts with label ಕಥೆ. Show all posts
Showing posts with label ಕಥೆ. Show all posts

Monday, December 11, 2023

ರಾಜನ ಮೂರು ಪ್ರಶ್ನೆಗಳು... ⁉ ( ಸಂಗ್ರಹ)

 - ರಾಜನ ಮೂರು ಪ್ರಶ್ನೆಗಳು... ⁉

ಪ್ರತಿದಿನವೂ ಶ್ರದ್ಧೆಯಿಂದ ಭಗವಂತನನ್ನು ಪೂಜಿಸುವವರೂ ಕೂಡಾ ಭಗವಂತ ನೆಂದರೆ ಏನು? ಯಾರು? ಎನ್ನುವ ಪ್ರಶ್ನೆಗೆ ಉತ್ತರಿಸಲಾರರು(ಬಹುಶಃ ಈ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು)

ಈ ಕಥೆಯನ್ನು ಕೇಳಿ --

ಒಬ್ಬ ರಾಜನಿಗೆ ಮೂರು ಅರ್ಥವಾಗದ ಪ್ರಶ್ನೆಗಳು ಬಹುವಾಗಿ ಕಾಡುತ್ತಿದ್ದವು --

೧  - ದೇವರು ಯಾವ ಕಡೆ ನೋಡುತ್ತಾನೆ?

೨  - ದೇವರು ಎಲ್ಲಿರುತ್ತಾನೆ?

೩  - ದೇವರು ಏನು ಮಾಡುತ್ತಾನೆ?

ಈ ಮೂರು ಪ್ರಶ್ನೆಗಳಿಗೆ ಎಷ್ಟು ಯೋಚಿಸಿದರು ಸರಿಯಾದ ಉತ್ತರ ದೊರಕಲಿಲ್ಲ ದರ್ಬಾರಿನಲ್ಲಿ ರಾಜನು ಎಲ್ಲರೊಡನೆ  ಸಮಾವೇಶಗೊಂಡು ಅಲ್ಲಿ ಹಾಜರಿದ್ದ ಎಲ್ಲ ಪಂಡಿತರು ಮೇಧಾವಿಗಳನ್ನುದ್ದೇಷಿಸಿ ಈ ಎಲ್ಲಾ ಪ್ರಶ್ನೆಗಳಿಗೆ

ಸರಿಯಾದ ಉತ್ತರ ಕೊಟ್ಟವರಿಗೆ ಸೂಕ್ತವಾದ ಬಹುಮತಿಯನ್ನು ಕೊಡುವುದಾಗಿಯೂ ತಪ್ಪಿದರೆ/ ತಪ್ಪಿದ್ದಲ್ಲಿ ಉಗ್ರವಾದ ಶಿಕ್ಷೆಯನ್ನು ನೀಡುವುದಾಗಿಯೂ ತಿಳಿಸುತ್ತಾನೆ.ರಾಜನ ಶಿಕ್ಷೆಯ  ಭಯದಿಂದ ಉತ್ತರ ಕೊಡಲು ಯಾರು ಮುಂದೆ ಬರಲಿಲ್ಲ.ಇದೇ ವಿಷಯವಾಗಿ ರಾಜ್ಯದಲ್ಲೆಲ್ಲಾ ಡಂಗುರ ಸಾರಿಸಲಾಯಿತು.ಇದನ್ನು ಕೇಳಿಸಿಕೊಂಡ ದನಗಾಹಿ ಒಬ್ಬನು ಉತ್ತರ ಕೊಡುವುದಾಗಿ ಒಪ್ಪಿ

ಮುಂದೆ ಬಂದನು ಅವನನ್ನು ರಾಜನ ಆಸ್ಥಾನಕ್ಕೆ ಕರೆಸಲಾಯಿತು ಅವನು ಉತ್ತರಿಸುವ ಮೊದಲು ರಾಜನಿಗೆ ಒಂದು ವಿಷಯವನ್ನು ಹೇಳುತ್ತಾನೆ-- 

"ಹೇಳುವವನು ಗುರು ಅವನು ಮೇಲಿರಬೇಕು ಅದರಂತೆ ಕೇಳುವವನು ಶಿಷ್ಯ ಅವನು ಕೆಳಗಿರಬೇಕು"

-- ಅದಕ್ಕೆ ರಾಜನು ಸಮ್ಮತಿಸಿ ಸಿಂಹಾಸನದಿಂದ ಕೆಳಗಿಳಿದು ಕುಳಿತನು ದನಗಾಹಿ ಸಿಂಹಾಸನದ ಮೇಲೆ ಕೂರುತ್ತಾನೆ.

ನಂತರ ದನಗಾಹಿ ರಾಜನಿಗೆ ಪ್ರಶ್ನೆಗಳನ್ನು ಕೇಳಲು ಸೂಚಿಸುತ್ತಾನೆ* 


(1) - ಮೊದಲನೇ ಪ್ರಶ್ನೆ -ದೇವರು ಯಾವ ಕಡೆ ನೋಡುತ್ತಾನೆ?

- ಕೂಡಲೇ ದನಗಾಹಿ ಒಂದು ಉರಿಯುತ್ತಿರುವ ದೀಪವನ್ನು ತರಿಸಲು ಹೇಳುತ್ತಾನೆ ಅದರಂತೆ ಸಭೆಯ ಮಧ್ಯದಲ್ಲಿ ಉರಿಯುತ್ತಿರುವ ದೀಪವನ್ನು ತಂದಿಡಲಾಗುತ್ತದೆ. ರಾಜರೇ ಹೇಳಿ -ಈ ದೀಪ ಯಾವ ಕಡೆಗೆ ನೋಡುತ್ತಿದೆ- ನನ್ನ ಕಡೆಗೋ,

ನಿಮ್ಮ ಕಡೆಗೋ, ಮೇಲೆಯೋ, ಕೆಳಗಡೆಯೋ, ಪೂರ್ವಕ್ಕೋ , ಪಶ್ಚಿಮಕ್ಕೋ ಎನ್ನುತ್ತಾನೆ*

ಆಗ ರಾಜನು  - "ಎಲ್ಲ ಕಡೆಗೂ" ಎಂದು ಉತ್ತರಿಸುತ್ತಾನೆ ಆಗ ದನಗಾಹಿ ಇಷ್ಟು ಸಣ್ಣ ಜ್ಯೋತಿ ಎಲ್ಲಾ ಕಡೆಗೂ ನೋಡುತ್ತಿದೆಯಾದರೆ ಪರಂಜ್ಯೋತಿ ಸ್ವರೂಪನಾದ ಭಗವಂತನು ಎಲ್ಲ ಕಡೆಗೂ ನೋಡಲಾರನಾ, ಸಮಸ್ತ ಜೀವಿಗಳ ಕಣ್ಣಲ್ಲಿ ಬೆಳಕಾಗಿರುವ ಪರಂಜ್ಯೋತಿಯೇ ಪರಮಾತ್ಮ...!!🪔🙏

 (2) - ಎರಡನೇ ಪ್ರಶ್ನೆ "ದೇವರು ಎಲ್ಲಿರುವನು?"

ಆಗ ದನಗಾಹಿ ಒಂದು ಪಾತ್ರೆಯಲ್ಲಿ ಹಾಲನ್ನು ತರುವಂತೆ ಹೇಳುತ್ತಾನೆ ಹಾಲನ್ನು ತಂದಿರಿಸಿದಾಗ ರಾಜರೇ ಈ ಹಾಲಿನಲ್ಲಿ ತುಪ್ಪ ಎಲ್ಲಿರುವುದು ತೋರಿಸುವಿರಾ ಎನ್ನುವನು ಆಗ ರಾಜನು ಹಾಲನ್ನು ಕುದಿಸಿ, ಹೆಪ್ಪಿಟ್ಟು ಅದು ಮೊಸರಾದ ನಂತರ ಅದನ್ನು ಚೆನ್ನಾಗಿ ಕಡೆದರೆ ಬೆಣ್ಣೆ ಸಿಗುತ್ತೆ ನಂತರ ಅದನ್ನು ಹದವಾಗಿ ಕಾಯಿಸಿದಾಗ ತುಪ್ಪ ಸಿಗುತ್ತದೆ.

ಆಗ ದನಗಾಹಿ - ಸರಿಯಾಗಿ ಹೇಳಿದಿರಿ ರಾಜರೇ- ಅದೇ ರೀತಿ ಹೃದಯವೆಂಬ "ಹಾಲ"ನ್ನು "ಗುರು" ಎನ್ನುವ "ಬೆಂಕಿ"ಯಿಂದ ಚೆನ್ನಾಗಿ ಕಾಯಿಸಿ "ಮನಸ್ಸು" ಎನ್ನುವ ಹೆಪ್ಪನ್ನಿಟ್ಟು ಬರುವ ಮೊಸರನ್ನು "ಸಾಧನೆ" ಎಂಬ ಕಡಗೋಲಿನಿಂದ ಚೆನ್ನಾಗಿ ಕಡೆದರೆ "ಜ್ಞಾನ" ಎನ್ನುವ ಬೆಣ್ಣೆ ಸಿಗುತ್ತದೆ...!

ಆ ಬೆಣ್ಣೆಯನ್ನು "ಅಂತರಾತ್ಮ" ಎನ್ನುವ ಬೆಂಕಿಯಿಂದ ಹದವಾಗಿ ಕಾಯಿಸಿದರೆ "ಪರಮಾತ್ಮ' ಎನ್ನುವ ತುಪ್ಪ ಸಿಗುತ್ತದೆ*

(3) - ಮೂರನೇ ಪ್ರಶ್ನೆ- ದೇವರು ಏನು ಮಾಡುತ್ತಾನೆ?

ಆಗ ದನಗಾಹಿ ನಾನೊಬ್ಬ ದನಗಾಹಿ, ನೀವು ಈ ರಾಜ್ಯದ ಮಹಾರಾಜರು- ಕೆಳಗಿದ್ದ ನನ್ನನ್ನು ಸಿಂಹಾಸನದ ಮೇಲೆ ಕೂಡಿಸಿ,  ಸಿಂಹಾಸನದಲ್ಲಿದ್ದ

ನಿಮ್ಮನ್ನು ಕೆಳಗಿಳಿಸಿದ್ದು..!, ಇದೇ ಪರಮಾತ್ಮನ ಲೀಲೆ, ಸತ್ಕರ್ಮಗಳನ್ನು ಮಾಡುವ ಜೀವಿಗಳಿಗೆ ಮುಂದಿನ  ಜನ್ಮದಲ್ಲಿ ಉತ್ತಮ ಜನ್ಮವನ್ನು ನೀಡುವ,  ದುಷ್ಕರ್ಮ ಮಾಡುವವರಿಗೆ ಮುಂದಿನ ಜನ್ಮದಲ್ಲಿ ದುಸ್ತರ ಜೀವನ ನೀಡುವುದು ಪರಮಾತ್ಮನ ಕೆಲಸ...!🙏

ಈ ಉತ್ತರಗಳನ್ನು ಕೇಳುತ್ತಿದ್ದಂತೆ ಇಡೀ ಸಭೆಯು ಅಲ್ಲಿ ನೆರದಿದ್ದವರ ಕರತಾಡನದಿಂದ ಮಾರ್ಮೊಳಗಿತು

🕉 ಸರ್ವೇ ಜನಾಃ ಸುಖಿನೋ ಭವಂತು🕉


Friday, December 9, 2016

ಒಂದು ಸಣ್ಣ ಕಥೆ - ಕೃಪೆ ವಾಟ್ಸಪ್

ಒಂದು ಸಣ್ಣ ಕಥೆ : ( ಓದಿ ಚೆನ್ನಾಗಿದೆ )

ಒಬ್ಬ ರಾಜ.. ಅವನ ಸೇನೆಯಲ್ಲಿ ನೂರಾರು ಕುದುರೆ, ಒಂಟೆ, ಆನೆ, ಕಾಲಾಳುಗಳು..

ರಾಜನಿಗೆ ಒಂದು ಆನೆಯ ಮೇಲೆ ಬಲು ಪ್ರೀತಿ. ಪ್ರತಿ ಯುದ್ಧವೇ ಆಗಲಿ ಮತ್ತೇನೇ ಆಗಲಿ ತಾಳ್ಮೆಯಿಂದ ಶ್ರದ್ಧೆಯಿಂದ ತನ್ನ ಕೆಲಸ ಮಾಡಿಕೊಂಡು ಬರುತ್ತಾ ಇತ್ತು..

ಹೀಗೆ ಇರುವಾಗ ಆನೆಗೆ ಕೂಡ ವಯಸ್ಸಾಗ್ತಾ ಬಂತು.. ಕೆಲ್ಸ ಮಾಡೋ ಕ್ಷಮತೆ ಕುಂದಿದಂತೆ ಕಾಣ ತೊಡಗಿತು. 

ರಾಜ ಇನ್ನು ಈ ಆನೆಗೆ ತೊಂದರೆ ಕೊಡುವುದು ಬೇಡ ಎಂದು ಅದನ್ನ ಕೆಲಸಕ್ಕೆ ಹಚ್ಚುವುದ ನಿಲ್ಲಿಸಲು ಹೇಳಿದ. ಆನೆ ಮಂಕಾಗತೊಡಗಿತು.. 
ಒಮ್ಮೆ ನೀರು ಕುಡಿಯಲು ಹೋದ ಆನೆ ಕೆಸರಿನಲ್ಲಿ ಸಿಕ್ಕಿಕೊಂಡು ಬಿಟ್ಟಿತು.. ಎಷ್ಟೇ ಪ್ರಯತ್ನ ಪಟ್ಟರೂ ಹೊರ ಬರಲು ಸಾಧ್ಯವಾಗದೆ ಘಿಳಿಡಲು ತೊಡಗಿತು.. ರಾಜ ಸೈನಿಕರ ಜೊತೆ ಬಂದು ಎಷ್ಟೇ ಪ್ರಯತ್ನ ಪಟ್ಟರೂ ಆನೆ ಕೆಸರಲ್ಲಿ ಹೂತುಕೊಳ್ಳುತ್ತಲೇ ಹೋಯ್ತು .. ರಾಜ ನೊಂದುಕೊಂಡ .. ಮಂತ್ರಿಗಳ ಮುಖ ನೋಡಿದ .. ಒಬ್ಬ ಮಂತ್ರಿ ಸೈನಿಕರ ಕರೆದು ಯುದ್ಧ ಕಹಳೆಯ ದನಿ ಹೊರಡಿಸಲು ಹೇಳಿದ .. ಕಹಳೆಯ ದನಿ ಮೊಳಗಿದಂತೆಲ್ಲಾ ಆನೆ ಕಿವಿ ನಿಮಿಸಿರಿ ಕಣ್ಣರಳಿಸಿ ನೋಡಿ ತನ್ನೆಲ್ಲ ಶಕ್ತಿಯನ್ನು ಹಾಕಿ ಹೊರ ಬಂತು ..ಎಲ್ಲರೂ ಹರ್ಷೋದ್ಘಾರ ಮಾಡಿದರು ... 

ಮಂತ್ರಿ ಹೇಳಿದ *'ಶರೀರ ಬಲವೊಂದೇ ಬದುಕಲ್ಲ ಪ್ರಭು, ಬದುಕಲು ಒಳಗಿನಿಂದ ಒಂದು ಸ್ಪೂರ್ತಿ ಬೇಕು.. ನನ್ನ ಅವಶ್ಯಕತೆ ಈ ಜಗತ್ತಿಗಿದೆ ಎಂಬ ಭಾವದ ಪ್ರೇರಣೆ ಬೇಕು...ಆ ಸ್ಪೂರ್ತಿ ಬದುಕಲು ಪ್ರೇರೇಪಿಸಿದಾಗ ಮಾತ್ರ ಬದುಕಲು ಛಲ ಬರುತ್ತದೆ . ಆ ಸ್ಫೂರ್ತಿ    ನಮ್ಮ ಮೇಲೆ ನಮ್ಮವರು ಇಟ್ಟಿರುವ ಭರವಸೆ, ಪ್ರೀತಿಗಳಿಂದ ಸಿಗುತ್ತದೆ ..... '*

*ಒಂದು ಸಣ್ಣ ಒಳ್ಳೆಯ ಮಾತು,ಸ್ಪರ್ಶ, ನಗು ಬದುಕಿನ ಹಾದಿಯ ಬದಲಿಸಬಲ್ಲುದು...*

*ಪ್ರೀತಿ ಅಷ್ಟೇ ಸಾಕು....... ಬದುಕಲು, ಬದುಕಿಸಲು, ಬದುಕನ್ನ ಬದುಕಿಸಲು.*😊

ಕೃಪೆ ವಾಟ್ಸಪ್

“ಇಗೋ, ಬೆಂಗಳೂರು ಹೀಗಿತ್ತು”ಜಿ. ವೆಂಕಟಸುಬ್ಬಯ್ಯ -

“ ಇಗೋ , ಬೆಂಗಳೂರು ಹೀಗಿತ್ತು ” ಜಿ . ವೆಂಕಟಸುಬ್ಬಯ್ಯ   ಅರವತ್ತು ವರ್ಷಗಳ ಹಿಂದೆ ಬೆಂಗಳೂರು ಇಷ್ಟು ದೊಡ್ಡದಾಗಿರಲಿಲ್ಲ . ಆಗ ಎರಡು ಬೆಂಗಳೂರು ಇತ್ತು ...