Showing posts with label ಕೃಪೆ ವಾಟ್ಸಪ್. Show all posts
Showing posts with label ಕೃಪೆ ವಾಟ್ಸಪ್. Show all posts

Thursday, August 22, 2024

ಹಬ್ಬಗಳು ಹೆಚ್ಚಾಗಿ ಪ್ರಾರಂಭವಾಗುತ್ತಿರುವ ಈ ಸಂದರ್ಭದಲ್ಲಿ. ಎರಡು ರೀತಿಯ ಜೀವನ ಶೈಲಿಯ ಒಂದು ತುಲನಾತ್ಮಕ ನೋಟ........ 1990 ಕ್ಕಿಂತ ಮೊದ - ಕೃಪೆ ವಾಟ್ಸಪ್,

ಹಬ್ಬಗಳು ಹೆಚ್ಚಾಗಿ ಪ್ರಾರಂಭವಾಗುತ್ತಿರುವ ಸಂದರ್ಭದಲ್ಲಿ. ಎರಡು ರೀತಿಯ ಜೀವನ ಶೈಲಿಯ ಒಂದು ತುಲನಾತ್ಮಕ ನೋಟ........ 

1990 ಕ್ಕಿಂತ ಮೊದಲಿನ ಸಾಮಾನ್ಯ ವರ್ಗದ ಜನರ ಜೀವನ ಬಹಳ ಕುತೂಹಲಕಾರಿ. ಇಂದಿನ ಜನರಿಗೆ ಅದನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಗಬಹುದು..... 

ಆಗ ದೇಶದ ಸುಮಾರು ಶೇಕಡಾ 75% ರಷ್ಟು ಜನ ಬಡತನದಲ್ಲಿಯೇ ಇದ್ದರು. ಎರಡು ಹೊತ್ತಿನ ಹೊಟ್ಟೆ ತುಂಬಾ ಊಟ ಸಹ ಕಷ್ಟವಾಗಿತ್ತು. ಬೆಳಗ್ಗೆ ಮತ್ತು ರಾತ್ರಿ ಮಾತ್ರ ಊಟ ಮಾಡುತ್ತಿದ್ದರು. ಕೆಲವರಿಗೆ ಅದೂ ಸಿಗುತ್ತಿರಲಿಲ್ಲ.

 ಬಡವರು ಅಂದಿನ ಕೂಲಿ ಹಣದಲ್ಲಿ ಅಂದೇ ರಾಗಿ ಜೋಳ ಗೋದಿ ತಂದು ಅದನ್ನು ಪುಡಿ ಮಾಡಿಸಿ ಊಟ ಮಾಡಬೇಕಿತ್ತು......

 

ಗಮನಿಸಿ ,

ಅಂದಿನ ಕಾಲದಲ್ಲಿ ಒಂದು ಮಾತು ಚಾಲ್ತಿಯಲ್ಲಿತ್ತು.

" ಹಬ್ಬದಲ್ಲಿ ಅನ್ನ ಊಟ ಮಾಡಿದಂತೆ "   ಅಂದರೆ ಹಬ್ಬಗಳಲ್ಲಿ ಮಾತ್ರ ಅನ್ನ ತಿನ್ನುತ್ತಿದ್ದರು. ಉಳಿದಂತೆ ಮುದ್ದೆ ರೊಟ್ಟಿ ಮತ್ತು ಗೊಜ್ಜು.

ತರಕಾರಿಗಳು, ಬೇಳೆಗಳು, ಹಣ್ಣುಗಳು ಕೇವಲ ಕೆಲವೇ ಶ್ರೀಮಂತರು ಮಾತ್ರ ಉಪಯೋಗಿಸುತ್ತಿದ್ದರು. ಒಣ ದ್ರಾಕ್ಷಿ, ಗೋಡಂಬಿ, ಬಾದಾಮಿ, ಕರ್ಜೂರ ಬಹಳ ಜನ ನೋಡೇ ಇರಲಿಲ್ಲ. ಬನ್ನು, ಬ್ರೆಡ್ಡು ಕೇವಲ ಜ್ವರ ಬಂದಾಗ ಮಾತ್ರ ಕೊಡುತ್ತಿದ್ದರು. ಬನ್ನು ತಿನ್ನುವ ಸಲುವಾಗಿ ಜ್ವರ ಬರಲಿ ಎಂದು ಎಷ್ಟೋ ಜನ ಬಯಸುತ್ತಿದ್ದುದು ಉಂಟು..... 

ಒಂದು ಕೆಜಿ ಕಡಲೆಕಾಯಿ ಎಣ್ಣೆ, ಒಂದು ಕೆಜಿ ಸಕ್ಕರೆ ಇಡೀ ತಿಂಗಳಲ್ಲಿ ಖರ್ಚು ಮಾಡಿದರೆ ಅದೇ ಹೆಚ್ಚು. ಇನ್ನು ಶುಗರ್, ಬಿಪಿ, ಕೊಲೆಸ್ಟರಾಲ್ಇರುವುದಾದರೂ ಎಲ್ಲಿಂದ.

ಬೊಂಡ, ಬಜ್ಜಿ, ವಡೆ, ಚಕ್ಕುಲಿಗಳೇ ಭಕ್ಷ್ಯ ಭೋಜನ. ಹೋಳಿಗೆ, ಪಾಯಸ, ಕಜ್ಜಾಯ, ಕಡುಬು ಮುಂತಾದ ಸಿಹಿ ತಿನಿಸುಗಳು ಕೆಲವೇ ವಿಶೇಷ ಹಬ್ಬಗಳಿಗೆ ಮಾತ್ರ ಸೀಮಿತವಾಗಿತ್ತು. ಹಾಲು, ತುಪ್ಪ ಹಳ್ಳಿಯಲ್ಲೇ ತಯಾರಾದರೂ ಸ್ವಂತಕ್ಕೆ ಉಪಯೋಗಿಸುತ್ತಿದ್ದುದು ತುಂಬಾ ಕಡಿಮೆ. ಅದನ್ನು ಮಾರಿ ಜೀವನ ಸಾಗಿಸುತ್ತಿದ್ದರು. ಇದು ಸಾಮಾನ್ಯ ಜನರ ಜೀವನ ಶೈಲಿ.

ಇನ್ನು ಬಡವರ ಸ್ಥಿತಿ ವರ್ಣಿಸಲು ಹೋದರೆ ಅಳು ತಡೆಯಲಾಗುವುದಿಲ್ಲ. ಅದನ್ನು ಮತ್ತೊಮ್ಮೆ ಹೇಳುತ್ತೇನೆ.... 

ಈಗಿನ ಜೀವನ ಶೈಲಿ ಅಂದರೆ 1990 ನಂತರ ಹುಟ್ಟಿದವರದು ಹೇಗಿದೆ ನೋಡೋಣ... 

ಬೆಳಗ್ಗೆ ಬೆಡ್ ಕಾಫಿಯಿಂದ ಶುರುವಾಗಿ breakfast - lunch - evening snack - dinner ಮತ್ತು ಆಗಾಗ ಕುರುಕಲು ತಿಂಡಿ ಅವರ ದಿನನಿತ್ಯದ ಆಹಾರ.

ಇಂದು ಸಿಹಿ ತಿನಿಸುಗಳು - ಮಾಂಸಾಹಾರ - ವಿವಿಧ ರೀತಿಯ ಪಾನೀಯಗಳು ಮುಂತಾದವು ಬಯಸಿದಾಗ ತಿನ್ನಬಹುದು.   ದ್ರಾಕ್ಷಿ - ಗೋಡಂಬಿ - ಬಾದಾಮಿ ಮುಂತಾದ ಪದಾರ್ಥಗಳನ್ನು ಉಪ್ಪಿಟ್ಟು, ಕೇಸರಿಬಾತ್, ವಾಂಗಿಬಾತ್, ಚಿತ್ರಾನ್ನ, ಪಾಯಸ ಎಲ್ಲದರಲ್ಲೂ ಉಪಯೋಗಿಸುತ್ತಾರೆ.

ಅಂದಿನ ಬಹುದೊಡ್ಡ ಸಮಾರಂಭಗಳೆಂದರೆ ಕೇವಲ ಮದುವೆ ಮಾತ್ರ ಆಗಿತ್ತು.....

 

ಆದರೆ ಈಗ,

1.       Engagement,

2.       Marriage,

3.       Reception,

4.       Naming ceremony,

5.       Birthday party,

6.       Kitty party,

7.       Bachelor party,

8.       Marriage anniversary,

9.       Get together.

ಅಬ್ಬಾ,

party ಗೊಂದು ನೆಪ ಸಿಕ್ಕರೆ ಸಾಕು ಮತ್ತು ಅದರಲ್ಲಿ ಎಲ್ಲಾ ರೀತಿಯ ಭಕ್ಷ್ಯ ಭೋಜನ ಮತ್ತು ಪಾನೀಯ ಕಡ್ಡಾಯ. ಕಾರಣಕ್ಕಾಗಿ ದೈಹಿಕ ಶ್ರಮ ಕಡಿಮೆಯಾಗಿ ಸಹಜವಾಗಿ ಖಾಯಿಲೆಗಳು ಹೆಚ್ಚಾಗುತ್ತಿದೆ.....

 ಎಷ್ಟೊಂದು ವ್ಯತ್ಯಾಸ. ಅಂದಿಗೂ ಇಂದಿಗೂ. ಇದನ್ನು ಹೊರತುಪಡಿಸಿ ಇನ್ನೂ ಹಲವಾರು ಬದಲಾವಣೆಗಳು ನಿಮ್ಮ ಮನದಲ್ಲಿ ಮೂಡುತ್ತದೆ.....

ಬದಲಾವಣೆಗಳನ್ನು ಒಪ್ಪಿಕೊಳ್ಳುತ್ತಾ ಅದರ ದಿಕ್ಕನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗುತ್ತಾ ಜೀವನಮಟ್ಟ ಸುಧಾರಿಸಿಕೊಳ್ಳೋಣ ಎಂದು ಆಶಿಸುತ್ತಾ..... 

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ,


Monday, July 24, 2017

ಕೃಪೆ ವಾಟ್ಸಪ್

ನವಯುಗದ ಸೊಸೆಯ ಹೊಸಾ ಒಪ್ಪಂದ !
ತಾನು ಶಾಪಿಂಗ್ ಗೆ ಅಥವಾ ವಿಹಾರಕ್ಕೆ ಹೋದಾಗ ನನ್ನ ಮಗುವನ್ನು ಅತ್ತೆ ನೋಡಿಕೊಳ್ಳಲಿ. ಅವರ ಮಗುವನ್ನು ನಾನು ನೋಡಿಕೊಳ್ತೇನೇ....

*****

ಗಂಡ ಹೆಂಡತಿ ಸೀರೆ ಶಾಪಿಂಗ್ ಹೋದರು. ಹೆಂಡತಿ ಹೆಚ್ಚೂಕಮ್ಮಿ ನೂರು ಸೀರೆ ತೆಗೆದು, ಅದರಲ್ಲಿ 25 ಶಾರ್ಟ್ಲಿಸ್ಟ್ ಮಾಡಿ, ಗಂಡನಿಗೆ ಅದರಿಂದ ಐದು ಸೀರೆ ಆರಿಸಲು ಹೇಳಿ. ಕಡೆಯಲ್ಲಿ ಒಂದು ಸೀರೆ ಆರಿಸ್ತಾಳೆ.

ಉಫ್ ಅಂತ ಉಸಿರುಬಿಟ್ಟ ಗಂಡ ಹೇಳಿದ:

"ಹಿಂದಿನ ಕಾಲದಲ್ಲಿ ಸೀರೆ ಇರಲಿಲ್ಲ ನೋಡು. ಬರೀ ಎಲೆಗಳಿಂದ ಮೈ ಮುಚ್ಕೊಳ್ತಾ ಇದ್ರಂತೆ. ಅವನೇ ಪುಣ್ಯವಂತ"

ಹೆಂಡತಿ ತಣ್ಣಗೆ ಉತ್ತರಿಸಿದಳು.

"ಯಾರಿಗೊತ್ತು? ಈ ಎಲೆ ಬೇಡ, ಆ ಎಲೆ ಬೇಕು,  ಈ ಮರದ್ದು ಬೇಡ, ಆ ಮರದ್ದು ತಗೊಂಬಾ, ಈ ಕಲರ್ ಚೆನ್ನಾಗಿಲ್ಲ ಅಂತ ಅವನ್ನ ಎಷ್ಟು ಮರ ಹತ್ತಿ ಇಳಿಸಿದ್ಲೋ ನೀವೇನು ನೋಡಿದ್ರಾ?"

ನೀತಿ: ಶಾಪಿಂಗ್ ಮಾಡುವಾಗ ಹೆಣ್ಣುಮಕ್ಕಳ ಜೊತೆ ವಾದಿಸಬಾರದು.

*****

ಗಂಡ : ಏನೇ ಇದು! ನನಗೆ ಬೆಂಡೇಕಾಯಿ ಆಗದು ಅಂತ ಗೊತ್ತಿದ್ದೂ ಬೆಂಡೆಕಾಯಿಯದ್ದೇ ಎಂಟ್ಹತ್ತು ಐಟಂ ಮಾಡಿದೀ? ನಾನು ಊಟ ಮಾಡೋದು ಬೇಡವಾ??

ಹೆಂಡತಿ : ಆಹಾಹಾ...ಬೆಂಡೆಕಾಯಿ ಆಗದಾ? ಮತ್ತ್ಯಾಕೋ ಅವಳು ಯಾರೋ ಮಿಟುಕಲಾಡಿ ಎಫ್ಬಿಯಲ್ಲಿ ಬೆಂಡೆಕಾಯಿ ಪಲ್ಯದ ಫೋಟೋ ಹಾಕಿದ್ರೆ "ವಾವ್...ಬಾಯಿಯಲ್ಲಿ ನೀರು ಬರ್ತಾ ಇದೆ. ನಿಮ್ಮಡುಗೆ ಅಂದ್ರೆ ಕೇಳ್ಬೇಕಾ? ಊಟಕ್ಕೆ ಬರಲಾ.." ಎಂದು ಕಾಮೆಂಟ್ ಮಾಡಿದ್ದು!! ಇಲ್ಲಿ ತಿನ್ರಿ ಈಗ...ನಾನೂ ನೋಡ್ತೀನಿ...!!

*****

ಗಂಡ : ಏನೇ ಇದು! ನನಗೆ ಬೆಂಡೇಕಾಯಿ ಆಗದು ಅಂತ ಗೊತ್ತಿದ್ದೂ ಬೆಂಡೆಕಾಯಿಯದ್ದೇ ಎಂಟ್ಹತ್ತು ಐಟಂ ಮಾಡಿದೀ? ನಾನು ಊಟ ಮಾಡೋದು ಬೇಡವಾ??

ಹೆಂಡತಿ : ಆಹಾಹಾ...ಬೆಂಡೆಕಾಯಿ ಆಗದಾ? ಮತ್ತ್ಯಾಕೋ ಅವಳು ಯಾರೋ ಮಿಟುಕಲಾಡಿ ಎಫ್ಬಿಯಲ್ಲಿ ಬೆಂಡೆಕಾಯಿ ಪಲ್ಯದ ಫೋಟೋ ಹಾಕಿದ್ರೆ "ವಾವ್...ಬಾಯಿಯಲ್ಲಿ ನೀರು ಬರ್ತಾ ಇದೆ. ನಿಮ್ಮಡುಗೆ ಅಂದ್ರೆ ಕೇಳ್ಬೇಕಾ? ಊಟಕ್ಕೆ ಬರಲಾ.." ಎಂದು ಕಾಮೆಂಟ್ ಮಾಡಿದ್ದು!! ಇಲ್ಲಿ ತಿನ್ರಿ ಈಗ...ನಾನೂ ನೋಡ್ತೀನಿ...!!


*****

ಹೆಂಡತಿ:-ಎಲ್ಲಿಗೆ ಹೋಗಿ ಬರ್ತ ಇದೀರಿ
ಗಂಡ:-ಕಾಲು ನೋವು ಕಣೆ ಅದಕ್ಕೆ ಹಾಸ್ಪಿಟಲ್ಗೆ ಹೋಗಿ ಬರ್ತ ಇದೀನಿ
ಹೆಂಡತಿ:-ಅಯ್ಯೊ ಒಬ್ರೆ ಹೋಗಿದಿರಾ ನನ್ನ ಕರ್ದ್ರಿದ್ರೆ ಬರ್ತ ಇರ್ಲಿಲ್ವಾ
ಗಂಡ:-ಅಲ್ರೆಡಿ ಕಾಲ್ ನೋವು ಇದೆ ಅದರ ಜೊತೆಗೆ ತಲೆನೋವು ಯಾಕೆ ಅಂತ ಕರಿಲಿಲ್ಲ ಕಣೆ ಅಷ್ಟೇ😔😫😏

ಹೆಂಡತಿ:-ರೀ

*****

ಬೇರೆಯವರು ನಮ್ಮನ್ನು ಪ್ರೀತಿಸುವಂತೆ ಮಾಡಲು ಸಾಧ್ಯವಿಲ್ಲದಿರಬಹುದು ಆದರೆ ಎಲ್ಲರೂ ಇಷ್ಟಪಡಬಹುದಾದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ನಮ್ಮ ಕೈಯಲ್ಲೆ ಇದೆ...
ಪ್ರೀತಿಸುವುದು, ದ್ವೇಷಿಸುವುದು ಪರರಿಗೆ ಬಿಟ್ಟಿದ್ದು......

*****


ಬದುಕಿದ್ದಾಗ ನಮಸ್ಕಾರ ಮಾಡದ ಜನ
ಸತ್ತಾಗ
ಪಾದ ಮುಟ್ಟಿ ಕೈ ಮುಗಿದರು.
•••
ಉಸಿರಿರುವಾಗ
ನೀ ಸತ್ತಿದ್ದರೇ ಚೆನ್ನಾಗಿರುತಿತ್ತು ಎಂದವರು
ಸತ್ತಾಗ
ಬದುಕಿರಬೇಕಿತ್ತೆಂದರು.
•••
ಬದುಕಿದ್ದಾಗ ಪಾಪಿಯೆಂದರು
ಸತ್ತಾಗ ಪಾಪ ಎಂದರು.
•••
ಹೊಟ್ಟೆಗಾಗಿ ಬೇಡುವಾಗ
ಕುತ್ತಿಗೆಹಿಡಿದು ತಳ್ಳಿದರು
ಸತ್ತಾಗ ಅತ್ತು ಹೆಗಲಾದರು.

ಇದೆ ನಮ್ಮ ಜೀವನ
ಜೀವನ ಅರಿತು  ನೀ ಬಾಳು





Monday, July 17, 2017

ವಯಸ್ಸಾದ ತಂದೆಯನ್ನು ಮಗ ಊರಿನ ಪ್ರಸಿದ್ಧ ಹೋಟೆಲಿಗೆ... -ಕೃಪೆ ವಾಟ್ಸಪ್,

ವಯಸ್ಸಾದ ತಂದೆಯನ್ನು ಮಗ ಊರಿನ ಪ್ರಸಿದ್ಧ ಹೋಟೆಲಿಗೆ ಊಟಕ್ಕೆಂದು ಕರೆದೊಯ್ದಿದ್ದ. ಹೋಟೆಲ್ ಜನಸಂದಣಿಯಿಂದ ತುಂಬಿತ್ತು. ಮಗ ಹೇಗೂ ಜಾಗ ಗಿಟ್ಟಿಸಿದ. ಇವರ ಟೇಬಲ್ಲಿನ ಮತ್ತೊಂದು ಭಾಗದಲ್ಲಿ ನವದಂಪತಿಗಳು ಕುಳಿತಿದ್ದರು. ಊಟ ಪ್ರಾರಂಭವಾಯಿತು. ಈ ವ್ಯಕ್ತಿಯ ತಂದೆ ತುತ್ತನ್ನು ಬಾಯಿಗೆ ಇಡುವಾಗ ಕೈ ನಡುಗಿ ಬಿಳಿ ಅಂಗಿಯ ಮೇಲೆ ಚೆಲ್ಲಿ ಹೋಯಿತು. ಎದುರಿಗೆ ಕುಳಿತಿದ್ದ ಯುವಕ,
"'ಛೆ! ಇಷ್ಟು ವಯಸ್ಸಾದವರನ್ನು ಯಾಕಾದರೂ ಇಂತಹ ಹೋಟೆಲಿಗೆ ಕರೆದುಕೊಂಡು ಬರಬೇಕು..? ಅಂಗಿಯೆಲ್ಲಾ ಕೊಳೆ ಮಾಡಿಕೊಂಡರು ನೋಡಿ. ಹೊರಗೆ ಹೇಗೆ ಕರೆದುಕೊಂಡು ಹೋಗ್ತೀರಿ'"
ಎಂದು ಕೇಳಿದ. ಆದರೆ ಈ ಮಾತುಗಳು 'ಕೇಳಿಯೋ ಇಲ್ಲವೇನೋ 'ಎಂಬಂತೆ ಆ ವ್ಯಕ್ತಿ ತಾನೇ ತುತ್ತು ಮಾಡಿ ಉಣ್ಣಿಸಿದ. ನಂತರ ವಾಷ್ ರೂಮಿನಲ್ಲಿ ತಂದೆಯ ಅಂಗಿಯ ಕಲೆಯನ್ನು ತಿಕ್ಕಿ ತೊಳೆದು ತನ್ನ ಅಂಗಿಯನ್ನು ತಂದೆಗೆ ಹಾಕಿ, ಆತನ ಅಂಗಿಯನ್ನು ತಾನು ಹಾಕಿಕೊಂಡು ಮೇಲೆ ಕೋಟು ಕೋಟುಹಾಕಿಕೊಂಡ. ತಂದೆಯ ಕೆದರಿದ ಕೂದಲನ್ನು ಸರಿಪಡಿಸಿ ಬೆವರಿದ ಮುಖ ಒರೆಸಿ ಬಿಲ್ ಪಾವತಿಸಿ ಹೊರಡುವಷ್ಟರಲ್ಲಿ ರೆಸ್ಟೊರೆಂಟ್ ಗದ್ದಲ ಸ್ವಲ್ಪ ಕಡಿಮೆಯಾಗಿತ್ತು. ಇನ್ನೇನು ಹೊರ ನಡೆಯಬೇಕೆನ್ನುವಾಗ ಆ ಘಟನೆಯನ್ನು ವೀಕ್ಷಿಸಿದ್ದ ಪಕ್ಕದ ಟೇಬಲಿನಲ್ಲಿದ್ದ ಓರ್ವ ವ್ಯಕ್ತಿ
"'ಹಲೋ ಜಂಟಲ್ ಮ್ಯಾನ್ ನೀವೇನೋ ಬಿಟ್ಟು ಹೊರಟಿದ್ದೀರಿ'"
ಎಂದು ಜೋರಾಗಿ ಕೂಗಿದ. ಆ ಮಾತು ಕೇಳಿ ಹೋಟೆಲಲ್ಲಿದ್ದವರ ಚಿತ್ತ ಇವರತ್ತ ನೆಟ್ಟಿತು. 'ಇಲ್ಲ ನಾನೇನು ಬಿಟ್ಟು ಹೋಗಿಲ್ಲವಲ್ಲ' ಎಂದ ಮಗ. ಅದಕ್ಕೆ ಆ ವ್ಯಕ್ತಿ
'ಮಗನಾದವನು ತನ್ನ ವಯಸ್ಸಾದ ತಂದೆಯನ್ನು ಹೇಗೆ ನೋಡಿಕೊಳ್ಳಬೇಕೆಂಬ ಅಮೂಲ್ಯ ಪಾಠವನ್ನು ನಮಗೆ ಬಿಟ್ಟು ಹೊರಟಿದ್ದೀರಿ'
ಎಂದ, ಮುಂಚೆ ಕೊಂಕು ನುಡದಿದ್ದ
ಆ ಯುವ ದಂಪತಿಗೆ ನಾಚಿಕೆಯಾಗಿ ಕ್ಷಮೆ ಕೇಳಿದರು.
"ನಾನು ಸಣ್ಣವನಿರುವಾಗ ಅಪ್ಪನನ್ನು ಅದೆಷ್ಟು ಗೋಳು ಹೊಯ್ದುಕೊಂಡಿರಲಿಲ್ಲ. ಆಗೆಲ್ಲಾ ಆತ ಕೋಪಿಸಿಕೊಳ್ಳದೆ ನನ್ನನ್ನು ಮುದ್ದು ಮಾಡಿರಲಿಲ್ವ..? ಈಗ ಅವನು ಮಗು ನಾನು ತಂದೆ"
ಎಂದು ಹೇಳಿದ. ಅಲ್ಲಿದ್ದವರ ಕಣ್ಣಾಲಿ ತುಂಬಿತು. ಮಗ ತಂದೆಯ ಕೈ ಹಿಡಿದುಕೊಂಡು ಮೆಲ್ಲನೆ ಕಾರಿನತ್ತ ಕರೆದೊಯ್ದ.

ಹೌದು,
ವಯಸ್ಸಾದ ಮೇಲೆ ಮನುಷ್ಯ ಮಗುವಿನಂತಾಗುತ್ತಾನೆ. ಮೊದಲು ತನ್ನ ಮಕ್ಕಳನ್ನು ಕೈ ಹಿಡಿದು ಬೆಳೆಸಿದ ಆತನಿಗೆ/ಳಿಗೆ
ನಾವೆಲ್ಲ ಅವರನ್ನು ಮಕ್ಕಳಂತೆ ನೋಡಿಕೊಂಡಾಗ ಬದುಕಿಗೆ ಒಂದು ಅರ್ಥ...

Friday, December 9, 2016

ಒಂದು ಸಣ್ಣ ಕಥೆ - ಕೃಪೆ ವಾಟ್ಸಪ್

ಒಂದು ಸಣ್ಣ ಕಥೆ : ( ಓದಿ ಚೆನ್ನಾಗಿದೆ )

ಒಬ್ಬ ರಾಜ.. ಅವನ ಸೇನೆಯಲ್ಲಿ ನೂರಾರು ಕುದುರೆ, ಒಂಟೆ, ಆನೆ, ಕಾಲಾಳುಗಳು..

ರಾಜನಿಗೆ ಒಂದು ಆನೆಯ ಮೇಲೆ ಬಲು ಪ್ರೀತಿ. ಪ್ರತಿ ಯುದ್ಧವೇ ಆಗಲಿ ಮತ್ತೇನೇ ಆಗಲಿ ತಾಳ್ಮೆಯಿಂದ ಶ್ರದ್ಧೆಯಿಂದ ತನ್ನ ಕೆಲಸ ಮಾಡಿಕೊಂಡು ಬರುತ್ತಾ ಇತ್ತು..

ಹೀಗೆ ಇರುವಾಗ ಆನೆಗೆ ಕೂಡ ವಯಸ್ಸಾಗ್ತಾ ಬಂತು.. ಕೆಲ್ಸ ಮಾಡೋ ಕ್ಷಮತೆ ಕುಂದಿದಂತೆ ಕಾಣ ತೊಡಗಿತು. 

ರಾಜ ಇನ್ನು ಈ ಆನೆಗೆ ತೊಂದರೆ ಕೊಡುವುದು ಬೇಡ ಎಂದು ಅದನ್ನ ಕೆಲಸಕ್ಕೆ ಹಚ್ಚುವುದ ನಿಲ್ಲಿಸಲು ಹೇಳಿದ. ಆನೆ ಮಂಕಾಗತೊಡಗಿತು.. 
ಒಮ್ಮೆ ನೀರು ಕುಡಿಯಲು ಹೋದ ಆನೆ ಕೆಸರಿನಲ್ಲಿ ಸಿಕ್ಕಿಕೊಂಡು ಬಿಟ್ಟಿತು.. ಎಷ್ಟೇ ಪ್ರಯತ್ನ ಪಟ್ಟರೂ ಹೊರ ಬರಲು ಸಾಧ್ಯವಾಗದೆ ಘಿಳಿಡಲು ತೊಡಗಿತು.. ರಾಜ ಸೈನಿಕರ ಜೊತೆ ಬಂದು ಎಷ್ಟೇ ಪ್ರಯತ್ನ ಪಟ್ಟರೂ ಆನೆ ಕೆಸರಲ್ಲಿ ಹೂತುಕೊಳ್ಳುತ್ತಲೇ ಹೋಯ್ತು .. ರಾಜ ನೊಂದುಕೊಂಡ .. ಮಂತ್ರಿಗಳ ಮುಖ ನೋಡಿದ .. ಒಬ್ಬ ಮಂತ್ರಿ ಸೈನಿಕರ ಕರೆದು ಯುದ್ಧ ಕಹಳೆಯ ದನಿ ಹೊರಡಿಸಲು ಹೇಳಿದ .. ಕಹಳೆಯ ದನಿ ಮೊಳಗಿದಂತೆಲ್ಲಾ ಆನೆ ಕಿವಿ ನಿಮಿಸಿರಿ ಕಣ್ಣರಳಿಸಿ ನೋಡಿ ತನ್ನೆಲ್ಲ ಶಕ್ತಿಯನ್ನು ಹಾಕಿ ಹೊರ ಬಂತು ..ಎಲ್ಲರೂ ಹರ್ಷೋದ್ಘಾರ ಮಾಡಿದರು ... 

ಮಂತ್ರಿ ಹೇಳಿದ *'ಶರೀರ ಬಲವೊಂದೇ ಬದುಕಲ್ಲ ಪ್ರಭು, ಬದುಕಲು ಒಳಗಿನಿಂದ ಒಂದು ಸ್ಪೂರ್ತಿ ಬೇಕು.. ನನ್ನ ಅವಶ್ಯಕತೆ ಈ ಜಗತ್ತಿಗಿದೆ ಎಂಬ ಭಾವದ ಪ್ರೇರಣೆ ಬೇಕು...ಆ ಸ್ಪೂರ್ತಿ ಬದುಕಲು ಪ್ರೇರೇಪಿಸಿದಾಗ ಮಾತ್ರ ಬದುಕಲು ಛಲ ಬರುತ್ತದೆ . ಆ ಸ್ಫೂರ್ತಿ    ನಮ್ಮ ಮೇಲೆ ನಮ್ಮವರು ಇಟ್ಟಿರುವ ಭರವಸೆ, ಪ್ರೀತಿಗಳಿಂದ ಸಿಗುತ್ತದೆ ..... '*

*ಒಂದು ಸಣ್ಣ ಒಳ್ಳೆಯ ಮಾತು,ಸ್ಪರ್ಶ, ನಗು ಬದುಕಿನ ಹಾದಿಯ ಬದಲಿಸಬಲ್ಲುದು...*

*ಪ್ರೀತಿ ಅಷ್ಟೇ ಸಾಕು....... ಬದುಕಲು, ಬದುಕಿಸಲು, ಬದುಕನ್ನ ಬದುಕಿಸಲು.*😊

ಕೃಪೆ ವಾಟ್ಸಪ್

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...