ನಿನ್ನೊಲುಮೆಯಿಂದಲೇ ಬಾಳು ಬೆಳಕಾಗಿರಲು
ಚಂದ್ರಮುಖಿ ನೀನೆನಲು ತಪ್ಪೇನೆ?
ನಿನ್ನ ಸೌಜನ್ಯವೇ ದಾರಿನೆರಳಾಗಿರಲು
ನಿತ್ಯಸುಖಿ ನೀನೆನಲು ಒಪ್ಪೇನೆ?
ನಿನ್ನ ನಗೆಮಲ್ಲಿಗೆಯ ಪರಿಮಳದ ಪಾತ್ರೆಯಲಿ
ಚೆಲ್ಲಿಸೂಸುವ ಅಮೃತ ನೀನೇನೆ!
ನನ್ನ ಕನಸುಗಳೆಲ್ಲ ಕೈಗೊಳುವ ಯಾತ್ರೆಯಲಿ
ಸಿದ್ಧಿಸುವ ಧನ್ಯತೆಯು ನೀನೇನೆ!
ನಿನ್ನ ಕಿರುನಗೆಯಿಂದ, ನಗೆಯಿಂದ, ನುಡಿಯಿಂದ
ಎತ್ತರದ ಮನೆ ನನ್ನ ಬದುಕೇನೆ!
ಚಂದ್ರನಲಿ ಚಿತ್ರಿಸಿದ ಚೆಲುವಿನೊಳಗುಡಿಯಿಂದ
ಗಂಗೆ ಬಂದಳು ಇದ್ದ ಕಡೆಗೇನೆ!
- ಕೆ.ಎಸ್. ನರಸಿಂಹಸ್ವಾಮಿ
"ಅನಿರೀಕ್ಷಿತ"(1970) ಎನ್ನುವ ಚಲನಚಿತ್ರದಲ್ಲಿ ವಿಜಯಭಾಸ್ಕರ್ ಸಂಗೀತದಲಿ, ಪಿ.ಬಿ. ಶ್ರೀನಿವಾಸ್ ಅವರು ತುಂಬ ಸೊಗಸಾಗಿ ಹಾಡಿದ್ದಾರೆ.
ಹಾಗೆ ಸಿ. ಅಶ್ವಥ್ ಅವರು ಕೂಡ ತಮ್ಮದೇ ಧಾಟಿಯಲ್ಲಿ ಈ ಕವನವನ್ನು ತುಂಬ ಸೊಗಸಾಗಿ ಹಾಡಿದ್ದಾರೆ.
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Showing posts with label ಕೆ.ಎಸ್. ನರಸಿಂಹಸ್ವಾಮಿ. Show all posts
Showing posts with label ಕೆ.ಎಸ್. ನರಸಿಂಹಸ್ವಾಮಿ. Show all posts
Thursday, June 23, 2011
Subscribe to:
Posts (Atom)
ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ
ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
-
Krupe : http://azsmarane.blogspot.in/2012/01/blog-post_21.html ಕನ್ನಡ ಪುಸ್ತಕ ಪ್ರೀತಿಯುಳ್ಳ ಮಿತ್ರರೆಲ್ಲರಿಗೂ... ಇಲ್ಲಿದೆ ಕನ್ನಡ ಕಾದಂಬರಿ ಹಾ...