Showing posts with label ಕೆ.ಎಸ್. ನರಸಿಂಹಸ್ವಾಮಿ. Show all posts
Showing posts with label ಕೆ.ಎಸ್. ನರಸಿಂಹಸ್ವಾಮಿ. Show all posts

Thursday, June 23, 2011

ನಿನ್ನೊಲುಮೆಯಿಂದಲೇ ಬಾಳು ಬೆಳಕಾಗಿರಲು

ನಿನ್ನೊಲುಮೆಯಿಂದಲೇ ಬಾಳು ಬೆಳಕಾಗಿರಲು
ಚಂದ್ರಮುಖಿ ನೀನೆನಲು ತಪ್ಪೇನೆ?
ನಿನ್ನ ಸೌಜನ್ಯವೇ ದಾರಿನೆರಳಾಗಿರಲು
ನಿತ್ಯಸುಖಿ ನೀನೆನಲು ಒಪ್ಪೇನೆ?

ನಿನ್ನ ನಗೆಮಲ್ಲಿಗೆಯ ಪರಿಮಳದ ಪಾತ್ರೆಯಲಿ
ಚೆಲ್ಲಿಸೂಸುವ ಅಮೃತ ನೀನೇನೆ!
ನನ್ನ ಕನಸುಗಳೆಲ್ಲ ಕೈಗೊಳುವ ಯಾತ್ರೆಯಲಿ
ಸಿದ್ಧಿಸುವ ಧನ್ಯತೆಯು ನೀನೇನೆ!

ನಿನ್ನ ಕಿರುನಗೆಯಿಂದ, ನಗೆಯಿಂದ, ನುಡಿಯಿಂದ
ಎತ್ತರದ ಮನೆ ನನ್ನ ಬದುಕೇನೆ!
ಚಂದ್ರನಲಿ ಚಿತ್ರಿಸಿದ ಚೆಲುವಿನೊಳಗುಡಿಯಿಂದ
ಗಂಗೆ ಬಂದಳು ಇದ್ದ ಕಡೆಗೇನೆ!

- ಕೆ.ಎಸ್. ನರಸಿಂಹಸ್ವಾಮಿ

"ಅನಿರೀಕ್ಷಿತ"(1970) ಎನ್ನುವ ಚಲನಚಿತ್ರದಲ್ಲಿ ವಿಜಯಭಾಸ್ಕರ್ ಸಂಗೀತದಲಿ, ಪಿ.ಬಿ. ಶ್ರೀನಿವಾಸ್ ಅವರು ತುಂಬ ಸೊಗಸಾಗಿ ಹಾಡಿದ್ದಾರೆ.
ಹಾಗೆ ಸಿ. ಅಶ್ವಥ್ ಅವರು ಕೂಡ ತಮ್ಮದೇ ಧಾಟಿಯಲ್ಲಿ ಈ ಕವನವನ್ನು ತುಂಬ ಸೊಗಸಾಗಿ ಹಾಡಿದ್ದಾರೆ.

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...