Showing posts with label ಗಣೇಶ ಕೊಪ್ಪಲತೋಟ. Show all posts
Showing posts with label ಗಣೇಶ ಕೊಪ್ಪಲತೋಟ. Show all posts

Friday, July 24, 2015

ಶ್ರೀ ಗಣೇಶಭಟ್ಟ ಕೊಪ್ಪಲತೋಟರ ಮೂರನೆಯ ಅಷ್ಟಾವಧಾನಕಾರ್ಯಕ್ರಕೆ ಅಮಂತ್ರಣ

ಆತ್ಮೀಯಮಿತ್ರರಿಗೆಲ್ಲ ನಮಸ್ಕಾರ,
ಇದೇ ತಿಂಗಳು ಇಪ್ಪತ್ತೈದನೆಯ ತಾರೀಖು ಶನಿವಾರದಂದು ಬೆಳಗ್ಗೆ ಹತ್ತುಗಂಟೆಗೆ ಬಸವನಗುಡಿ ರಸ್ತೆಯಲ್ಲಿರುವ ಗೋಖಲೆ ಸಾರ್ವಜನಿಕವಿಚಾರಸಂಸ್ಥೆಯಲ್ಲಿ ನಮ್ಮ ಯುವಮಿತ್ರರೂ ಸಾಹಿತ್ಯರಸಿಕರೂ ಆದ
ಶ್ರೀ ಗಣೇಶಭಟ್ಟ ಕೊಪ್ಪಲತೋಟರ ಮೂರನೆಯ ಅಷ್ಟಾವಧಾನಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದಕ್ಕೆ ಪ್ರಾಯೋಜಕರಾಗಿ ಒದಗಿ ಬಂದವರು ನಮ್ಮ ಪದ್ಯಪಾನ ಬಳಗದವರೇ ಆದ ಶ್ರೀ.ಸೋಮಶೇಖರಶರ್ಮ, ಶ್ರೀ.ರವಿಶಂಕರ್ ಮತ್ತು ಶ್ರೀ.ಶ್ರೀಧರ್ ಸಾಲಿಗ್ರಾಮ ಅವರ ಪೂಜ್ಯಮಾತಾಪಿತರು.ಇದಕ್ಕಾಗಿ ಅವರಿಗೆ ವಿಶೇಷಕೃತಜ್ಞತೆಗಳು.
ಶ್ರೀ ಗಣೇಶಭಟ್ಟ ಕೊಪ್ಪಲತೋಟ
ಈ ಅವಧಾನದಲ್ಲಿ ಪೃಚ್ಛಕರಾಗಿ ಪಾಲ್ಗೊಳ್ಳಲು ಪ್ರೀತಿಯಿಂದ ಒಪ್ಪಿದವರು :
ಶ್ರೀ. ಎಮ್ ಆರ್ ಚಂದ್ರಮೌಳಿ (ನಿಷೇಧಾಕ್ಷರಿ)
ಶ್ರೀ. ಮಂಜುನಾಥ ಕೊಳ್ಳೇಗಾಲ (ಸಮಸ್ಯಾಪೂರಣ)
ಶ್ರೀ. ಬಿ ಆರ್ ಪ್ರಭಾಕರ್ (ದತ್ತಪದೀ)
ಶ್ರೀಮತಿ. ಉಷಾ ಉಮೇಶ್ (ನ್ಯಸ್ತಾಕ್ಷರೀ)
ಶ್ರೀ. ಸುಧೀರ್ ಕೃಷ್ಣಸ್ವಾಮಿ (ಆಶುಕವಿತೆ)
ಶ್ರೀಮತಿ. ಶ್ರೀಲಲಿತಾ ರೂಪನಗುಡಿ (ಕಾವ್ಯವಾಚನ)
ಶ್ರೀ. ರಂಗನಾಥ ಪ್ರಸಾದ್ (ಸಂಖ್ಯಾಬಂಧ)
ಶ್ರೀ. ಆರ್ ಗಣೇಶ್ (ಅಪ್ರಸ್ತುತಪ್ರಸಂಗ)

ಅಷ್ಟಾವಧಾನಿ ಕೊಪ್ಪಲತೋಟರು ಕೇವಲ ಇಪ್ಪತ್ತಾರು ವರ್ಷಗಳ ಕಿರಿಯ ಹರೆಯದಲ್ಲಿಯೇ ಮಾಡಿರುವ ಸಾಹಿತ್ಯಸಾಧನೆ ಸ್ತುತ್ಯವಾಗಿದೆ. ಅವರು ಈಗಾಗಲೇ ಕಥೆ, ಕಾದಂಬರಿ, ಕವಿತೆ, ಖಂಡಕಾವ್ಯ ಮುಂತಾದ ಪ್ರಕಾರಗಳಲ್ಲಿ ದುಡಿದಿದ್ದಾರೆ. ಅಲ್ಲದೆ ಹಳಗನ್ನಡ, ನಡುಗನ್ನಡ ಮತ್ತು ಹೊಸಗನ್ನಡ ಸಾಹಿತ್ಯಗಳಲ್ಲಿ ಒಳ್ಳೆಯ ಅಧ್ಯಯನವನ್ನೂ ಮಾಡಿದ್ದಾರೆ. ಜೊತೆಗೆ ಒಳ್ಳೆಯ ಧಾರೆ, ಧಾರಣ ಮತ್ತು ಪ್ರತಿಭೆ-ಪಾಂಡಿತ್ಯಗಳ ಹದವುಳ್ಳ ತಮ್ಮ ಮೊದಲ ಅವಧಾನದ ಮೂಲಕವೇ ವಿದ್ವದ್ರಸಿಕರಲ್ಲಿ ಹೊಸಭರವಸೆಯನ್ನೂ ಮೂಡಿಸಿದ್ದಾರೆ. ಇಂಥ ಮೇಧಾವಿಗಳಾದ ತರುಣರ ವಿಶಿಷ್ಟಕಲೆಯನ್ನು ಮೆಚ್ಚಿ ಆದರಿಸಲು ಕನ್ನಡಸಾಹಿತ್ಯರಸಿಕರೂ ಅವಧಾನಕಲಾಪ್ರೇಮಿಗಳೂ ಬರಬೇಕೆಂದು ವಿನಂತಿ. ಎಲ್ಲ ಕಾವ್ಯರಸಿಕರಿಗೂ ಆದರದ ಸ್ವಾಗತ.



Monday, July 20, 2015

ತಬ್ಬಲಿಯು ನೀನಾದೆ ಮಗನೆ - ಗಣೇಶ ಕೊಪ್ಪಲತೋಟ



   ಹೆಸರನ್ನು ಓದಿ ತಕ್ಷಣ ಭೈರಪ್ಪನವರ ಕಾದಂಬರಿಯ ಬಗ್ಗೆ ಬರೆಯುತ್ತಿದ್ದೇನೆ ಎಂದು ತಿಳಿದುಕೊಳ್ಳಬೇಡಿ. ಪುಣ್ಯಕೋಟಿಯ ಹಾಡಿನಲ್ಲಿ ಬರುವ ಈ ಸಾಲಿನಿಂದ ಭೈರಪ್ಪನವರು ಒಂದು ಕಾದಂಬರಿಯನ್ನು ಬರೆದದ್ದಂತೂ ಹೌದು. ಇತ್ತೀಚಿಗೆ ಸ್ವರ್ಣವಲ್ಲಿ ಮಠದಲ್ಲಿ ಅವರ 'ಕವಲು' ಕಾದಂಬರಿಯ ಕುರಿತು ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದಾಗ ಅದರಲ್ಲಿ "ಪುಣ್ಯಕೋಟಿಯಂತಹ ಮೌಲ್ಯಯುತ ಕಥೆಗಳು ಇಂದಿನ ಪಟ್ಯಪುಸ್ತಕಗಳಲ್ಲಿ  ಕಾಣುತ್ತಿಲ್ಲ.ಹಸು ಮಾತನಾಡುವುದೆಲ್ಲ unscientific ಎಂದು ಹೇಳಿಬಿಡುತ್ತಾರೆ. ಅದರ ಮೌಲ್ಯವನ್ನು ಅರಿತುಕೊಳ್ಳುತ್ತಿಲ್ಲ" ಎಂದು ವಿಷಾದ ವ್ಯಕ್ತಪಡಿಸಿದರು.


ಮೌಲ್ಯ ಶಿಕ್ಷಣ ಎಂಬುದು ಬೋಧಿಸಿ ಅದಕ್ಕೊಂದು ಪರೀಕ್ಷೆ ಇಟ್ಟು ಅದರಿಂದ ತಿಳಿದುಕೊಳ್ಳುವಂತಹದ್ದಲ್ಲ.' ಎಂದೂ ಹೇಳಿದರು.ಆಗ ನನಗೆ ಅನ್ನಿಸಿದ್ದು ಮೌಲ್ಯ ಶಿಕ್ಷಣದ ಮೌಲ್ಯವನ್ನು ಮಕ್ಕಳು ಚಿಕ್ಕವರಾಗಿದ್ದಾಗಿನಿಂದಲೇ ತಿಳಿಸಿ ಹೇಳಬೇಕು ಎಂದು.ಹಿರಿಯರು ತಂದೆತಾಯಿಯರು ನಡೆದಂತೆ ಮಕ್ಕಳು ಅನುಸರಿಸುತ್ತಾರೆ.
ನಿತ್ಯವೂ ದೇವರಿಗೆ ಕೈಮುಗಿಯುವ ತಾಯಿಯೊಡನೆ ಮಗಳೂ ಕೈ ಮುಗಿಯುತ್ತಾಳೆ. ಅಪ್ಪ ಸಿಗರೇಟು ಸೇದುವುದನ್ನು  ನೋಡಿದ ಮಗ ಅದನ್ನೇ ಅನುಕರಿಸುತ್ತಾನೆ. ಹೀಗಾಗಿ ತಮ್ಮ ಮಕ್ಕಳ ಉನ್ನತಿಗೆ ಹಾಗು ಮೌಲ್ಯಯುತ ಜೀವನಕ್ಕೆ ತಂದೆತಾಯಿಯರೂ ಮೌಲ್ಯಯುತವಾಗಿ ಬದುಕುವುದು ಅವಶ್ಯಕ.


          ಹಠಮಾರಿ ಮಗನೊಬ್ಬನ ತಾಯಿಗೆ ಏನು ಮಾಡಿದರೂ ಮಗನನ್ನು ತಿದ್ದಲಾಗಲಿಲ್ಲ. ಶಾಲೆಯಿಂದ ಸಣ್ಣ ಪುಟ್ಟ ವಸ್ತುಗಳನ್ನು ಕದ್ದು ತರುತ್ತಿದ್ದ. ಅವನು ದೊಡ್ಡವನಾದಾಗ ತಾಯಿ ಒಂದು ದಿನ ನಿಶ್ಚಯ ಮಾಡಿ ಹೇಳಿದಳು "ಮಗೂ ಕದಿಯುವುದು ಕೆಟ್ಟ ಕೆಲಸ ಎಂದು ನಿನಗೆ ಗೊತ್ತಿಲ್ಲವೇ? " ಎಂದು. ಆಗ ಮಗ "ನನಗೆ ಬೇಕಾದ್ದನ್ನು ನಾನೂ ಮಾಡುತ್ತೀನಿ" ಎಂದ. ಅದಕ್ಕೆ ತಾಯಿ "ಸರಿ ಹಾಗಾದರೆ ನೀನು ಒಂದೊಂದು ಕಳ್ಳತನ ಮಾಡಿದಾಗಲೂ ನಾನೂ ಒಂದೊಂದು ಮೊಳೆ ತಂದು ಈ ಗೋಡೆಗೆ ಹೊಡೆಯುತ್ತೇನೆ" ಎಂದಳು. ಅವನು ಅದರಿಂದ ತನ್ನ ಗಂಟೇನು ಹೋಗುವುದಿಲ್ಲ ಎಂದು ಸುಮ್ಮನಿದ್ದ. ಕೆಲವು ತಿಂಗಳು ಕಳೆದ ನಂತರ ಗೋಡೆಯ ಮೇಲೆಲ್ಲಾ ಮೊಳೆಗಳಿದ್ದವು. ಮತ್ತೂ ಕೆಲವು ಕಾಲ ಕಳೆದ ನಂತರ ಒಮ್ಮೆ ಮಗ ಆ ಗೋಡೆಯನ್ನು ನೋಡಿ "ಛೆ.. ಎಷ್ಟೊಂದು ಕಳ್ಳತನ ಮಾಡಿಬಿಟ್ಟೆ.ತಪ್ಪು ಮಾಡಿಬಿಟ್ಟೆ." ಎಂದು ಪಶ್ಚಾತ್ತಾಪ ಪಟ್ಟು ತಾಯಿಯ ಬಳಿ ಕ್ಷಮೆ ಯಾಚಿಸಿದ.ತನು ಕದ್ದದ್ದೆಲ್ಲವನ್ನು ಹಿಂತಿರುಗಿಸುವುದಾಗಿ ಹೇಳಿದ. ಅವನ ತಾಯಿ ಆಗ ಗೋಡೆಯ ಮೇಲಿದ್ದ ಮೊಳೆಗಳನ್ನೆಲ್ಲ ಕಿತ್ತು ಹಾಕಿದಳು. ಗೋಡೆಯ ಮೇಲಿದ್ದ ಕಲೆಗಳನ್ನು ತೋರಿಸಿ " ನೋಡಿದೆಯಾ? ಒಂದು ಬಾರಿ ಕೆಟ್ಟ ಕೆಲಸ ಮಾಡಿದರೂ ಅಳಿಸಲಾಗದ ಕಲೆ ಬಿದ್ದು ಹೋಗುತ್ತದೆ. ಈಗ ನೀನು ಸುಮ್ಮನಿದ್ದರೆ ಆ ಕಲೆಗಳು ಹಾಗೆ ಇರುತ್ತವೆ.ಅದನ್ನು ಹೋಗಲಾಡಿಸಲು ಒಳ್ಳೆ ಕೆಲಸಗಳನ್ನು ಮಾಡು. ಸುಣ್ಣ ತುಂಬಿಸಿ ಅದನ್ನು ಮುಚ್ಚು." ಎಂದಳು.  ಎಷ್ಟು ಅರ್ಥವತ್ತಾದ ಮಾತು. ಕೆಟ್ಟ ಕೆಲಸದಿಂದ ಕಳಂಕ ಬರುತ್ತದೆ ಅದನ್ನು ಹೋಗಲಾಡಿಸಲು ಒಳ್ಳೆ ಕೆಲಸಗಳನ್ನು ಮಾಡಬೇಕು. ಅದೇ ಒಳ್ಳೆ ಕೆಲಸಗಳಲ್ಲೇ ತೊಡಗಿಕೊಂಡಿದ್ದರೆ ಎಂತಹ ಸುಂದರವಾಗುತ್ತದೆ ಈ ಜೀವನ!

                 ಆದರೆ ಈಗಿನ ಪರಿಸ್ಥಿತಿ ಹೇಗಾಗುತ್ತಿದೆ ಎಂದರೆ ಅಪ್ಪ ಅಮ್ಮ ಇಬ್ಬರೂ ಕೆಲಸಕ್ಕೆ ಹೋಗುತ್ತಾರೆ, ಅಜ್ಜ ಅಜ್ಜಿ ಇಬ್ಬರೂ ವೃದ್ಧಾಶ್ರಮದಲ್ಲಿದ್ದಾರೆ.ಮಕ್ಕಳು ಭಾರವಾದ ಪುಸ್ತಕದ ಹೊರೆ ಹೊತ್ತು ಕಾನ್ವೆಂಟ್ ಗೆ ಹೋಗುತ್ತಾರೆ ಅಥವಾ ಇನ್ನು ಚಿಕ್ಕವರಾದರೆ ತಂದೆ ತಾಯಿಯರು ಮಕ್ಕಳನ್ನು ನೋಡಿಕೊಳ್ಳುವ ದಾದಿಯರಿಗೆ  ಸಾವಿರಾರು ರೂಪಾಯಿ ತೆತ್ತು ಅವರ ಬಳಿ ಬಿಟ್ಟು ಹೋಗುತ್ತಾರೆ. ಇಂತಹ ಮಕ್ಕಳಿಗೆ ಎಲ್ಲಿಂದ ಸಿಗಬೇಕು ನೈತಿಕ ಅಥವಾ ಮೌಲ್ಯ ಶಿಕ್ಷಣ? ಅಜ್ಜ ಅಜ್ಜಿಯರು ಮೊಮ್ಮಕ್ಕಳ ಜೊತೆ ಕಾಲ ಕಳೆಯುತ್ತಿದ್ದರೆ ಅವರು ಅಲ್ಪ ಸ್ವಲ್ಪ ಮೌಲ್ಯಯುತ ಜ್ಞಾನವನ್ನು ಮಕ್ಕಳಿಗೆ ಉಣಿಸಬಹುದು. ಅನವರತ " ಓದು ಓದು ಓದು" ಎಂದು ಹೇಳುತ್ತಿದ್ದಾರೆ ಮಕ್ಕಳಲ್ಲಿರುವ ಉಳಿದ ಪ್ರತಿಭೆಗಳು ಬೆಳಕಿಗೆ ಬರುವುದಿಲ್ಲ, ಓದೂ ಅಷ್ಟು ಪರಿಣಾಮಕಾರಿಯಾಗಿರುವುದಿಲ್ಲ. ಮಕ್ಕಳು ಆಟವಾಡಿಕೊಂಡು ನಲಿದಾಡುತ್ತಾ ಕಲಿಯಬೇಕು.ಇಲ್ಲದಿದ್ದರೆ ಜೀವನ ಕೇವಲ ಯಾಂತ್ರಿಕವಾಗುತ್ತದೆ. ಹಿಂದೆ ಸಮಾಜದಲ್ಲಿದ್ದ ಎಲ್ಲ ಸಮಸ್ಯೆಗಳಿಗಿಂತ ಭೀಕರವಾಗಿ ಇಂದು ಈ ಸಮಸ್ಯೆ ನಮ್ಮೆಲ್ಲರ ಮುಂದೆ ನಿಂತಿದೆ. ಅದನ್ನು ಸಮರ್ಥವಾಗಿ ಎದುರಿಸುವ ಉಪಾಯವೂ ನಮ್ಮ ಬಳಿಯಲ್ಲೇ ಇದೆ.
             ತಂದೆ ತಾಯಿಯರಿದ್ದೂ ತಬ್ಬಲಿಗಳಂತಾಗಿರುವ ಇಂದಿನ ಮಕ್ಕಳನ್ನು 'ಕಿಡ್ಸ್ ಗಾರ್ಡಿಂಗ್ ಹೋಂ' ನಲ್ಲೋ ಅಥವಾ ಮತ್ತೆಲ್ಲೋ ಬಿಡುವಾಗಲಾದರೂ ತಾಯಂದಿರಿಗೆ ಎಂದೋ ಕೇಳಿದ "ತಬ್ಬಲಿಯು ನೀನಾದೆ ಮಗನೆ" ಹಾಡು ನೆನಪಿಗೆ ಬರಲಿ..

       ಸರ್ವೇ ಭವಂತು ಸುಖಿನಃ


 ಗಣೇಶ ಕೊಪ್ಪಲತೋಟ  


ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...