ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Monday, June 27, 2011
ಕಾಣದ ಕಡಲಿಗೆ ಹಂಬಲಿಸಿದೆ ಮನ
Sunday, June 26, 2011
ದೀಪವಿರದ ದಾರಿಯಲ್ಲಿ
ದೀಪವಿರದ ದಾರಿಯಲ್ಲಿ
ತಡವರಿಸುವ ನುಡಿಗಳೆ
ಕಂಬನಿಗಳ ತಲಾತಲದಿ
ನಂದುತಿರುವ ಕಿಡಿಗಳೆ
ಉಸಿರನ್ನಿಡುವೆ ಹೆಸರ ಕೊಡುವೆ
ಬನ್ನಿ ನನ್ನ ಹೃದಯಕೆ
ನೀಲಿಯಲ್ಲಿ ಮೈಯಿಲ್ಲದೆ
ತೇಲಾಡುವ ಹನಿಗಳೆ
ಬಾಯಿಲ್ಲದ ಮೌನದಲ್ಲಿ
ಅಲೆಯುತಿರುವ ದನಿಗಳೆ
ಉಸಿರನ್ನಿಡುವೆ ಹೆಸರ ಕೊಡುವೆ
ಬನ್ನಿ ನನ್ನ ಹೃದಯಕೆ
ಜಲವಿಲ್ಲದ ನೆಲಗಳಲ್ಲಿ
ಕಮರುತಿರುವ ಕುಡಿಗಳೆ
ಬಿರು ಬಿಸಿಲಿನ ತುಳಿತದಲ್ಲಿ
ಸೊರಗಿ ಹೋದ ಮಿಡಿಗಳೆ
ಉಸಿರನ್ನಿಡುವೆ ಹೆಸರ ಕೊಡುವೆ
ಬನ್ನಿ ನನ್ನ ಹೃದಯಕೆ
ಶೃತಿಯಿಲ್ಲದ ವಾದ್ಯದಲ್ಲಿ
ಗತಿಯಿಲ್ಲದ ಸ್ವರಗಳೆ
ಬಿರುಗಾಳಿಗೆ ಗರಿವುದುರಿದ
ಹೊಂಗನಸಿನ ಮರಿಗಳೆ
ಉಸಿರನ್ನಿಡುವೆ ಹೆಸರ ಕೊಡುವೆ
ಬನ್ನಿ ನನ್ನ ಹೃದಯಕೆ
-ಡಾ.ಜಿ. ಎಸ್. ಶಿವರುದ್ರಪ್ಪ...
Thursday, June 23, 2011
ಮಬ್ಬು ಕವಿದರೇನು
ಮಬ್ಬು ಕವಿದರೇನು
ನಿನ್ನ ಹಬ್ಬಿದಿರುಳ ದಾರಿಗೆ
ನಡೆ ಮುಂದಕೆ ಧೈರ್ಯದಿಂದ
ಅರುಣೋದಯ ತೀರಕೆ
ಹಳೆ ನೆನಪುಗಳುದುರಲಿ ಬಿಡು
ಬೀಸುವ ಚಳಿ ಗಾಳಿಗೆ
ತರಗೆಲೆಗಳ ಚಿತೆಯುರಿಯಲಿ
ಚೈತ್ರೋದಯ ಜ್ವಾಲೆಗೆ
ಹೊಸ ಭರವಸೆ ಚಿಗುರುತಲಿವೆ
ಎಲೆ ಉದುರಿದ ಕೊಂಬೆಗೆ
ಅರಳಿ ನಗುವ ಹೂಗಳಲ್ಲಿ
ಪುಟಿಯುತಲಿವೆ ನಂಬಿಕೆ
ಹಗಲಿರುಳಿನ ಕುದುರೆಗಳನು
ಹೂಡಿದ ರಥ ಸಾಗಿದೆ
ಯುಗ ಯುಗಗಳ ಹಾದಿಯಲ್ಲಿ
ಋತು ಚಕ್ರಗಳುರುಳಿವೆ
Wednesday, June 8, 2011
ಎದೆ ತುಂಬಿ ಹಾಡಿದೆನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು
ಇಂದು ನಾ ಹಾಡಿದರೂ ಅಂದಿನಂತೆಯೆ ಕುಳಿತು
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ
ಹಾಡು ಹಕ್ಕಿಗೆ ಬೇಕೆ ಬಿರುದು ಸನ್ಮಾನ
ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ
ಕೇಳುವವರಿಹರೆಂದು ನಾ ಬಲ್ಲೆ ಅದರಿಂದ
ಹಾಡುವೆನು ಮೈ ದುಂಬಿ ಎಂದಿನಂತೆ
ಯಾರು ಕಿವಿ ಮುಚ್ಚಿದರು ಎನಗಿಲ್ಲ ಚಿಂತೆ
-- ಜಿ.ಎಸ್.ಶಿವರುದ್ರಪ್ಪ
ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ
ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
-
Krupe : http://azsmarane.blogspot.in/2012/01/blog-post_21.html ಕನ್ನಡ ಪುಸ್ತಕ ಪ್ರೀತಿಯುಳ್ಳ ಮಿತ್ರರೆಲ್ಲರಿಗೂ... ಇಲ್ಲಿದೆ ಕನ್ನಡ ಕಾದಂಬರಿ ಹಾ...