ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Showing posts with label ದ ರಾ ಬೇಂದ್ರೆ. Show all posts
Showing posts with label ದ ರಾ ಬೇಂದ್ರೆ. Show all posts
Monday, July 11, 2016
Monday, June 27, 2016
Saturday, April 2, 2016
ನಾಕು ತಂತಿ - - ದ. ರಾ. ಬೇಂದ್ರೆ
..
ಆವು ಈವಿನ ನಾವು ನೀವಿಗೆ ಆನು ತಾನಾದ ತನ ನನಾ
ನಾನು ನೀನಿನ ಈನಿ ನಾನಿಗೆ ಬೇನೆ ಏನೋ? ಜಾಣೆ ನಾ
ಚಾರು ತಂತ್ರಿಯ ಚರಣ ಚರಣದ ಘನಘನಿತ ಚತುರಸ್ವನಾ
ಹತವೊ ಹಿತವೋ ಆ ಅನಾಹತಾ ಮಿತಿಮಿತಿಗೆ ಇತಿ ನನ ನನಾ
ಬೆನ್ನಿನಾನಿಕೆ ಜನನ ಜಾನಿಕೆ ಮನನವೇ ಸಹಿತಸ್ತನಾ
ಗೋವಿನ ಕೊಡುಗೆಯ ಹದಗದ ಹುಡಿಗಿ ಬೆಡಗಿಲೆ ಬಂದಳು ನಡುನಡುಗಿ
ಸಲಿಗೆಯ ಸುಲಿಗೆಯ ಬಯಕೆಯ ಒಲುಮೆ ಬಯಲಿನ ನೆಯ್ಯಾಯ ಸಿರಿಯುಡುಗಿ
ನಾಡಿಯ ನಡಿಗೆಯ ನಲುವಿನ ನಾಲಿಗೆ ನೆನೆದಿರೆ ಸೋಲುವ ಸೊಲ್ಲಿನಲಿ
ಮುಟ್ಟದ ಮಾಟದ ಹುಟ್ಟದ ಹುಟ್ಟಿಗೆ ಜೇನಿನ ಥಳಿಮಳಿ ಸನಿಹ ಹನಿ
ಬೆಚ್ಚಿದ ವೆಚ್ಚವು ಬಸರಿನ ಮೊಳಕೆ ಬಚ್ಚಿದ್ಯಾವುದೋ ನಾ ತಿಳಿಯೆ
ಭೂತದ ಭಾವ ಉದ್ಬವ ಜಾವ ಮೊಲೆ ಊಡಿಸುವಳು ಪ್ರತಿಭೆ ನವ
ಚಿತ್ತಿಮಳಿ ತತ್ತಿ ಹಾಕತಿತ್ತು ಸ್ವಾತಿ ಮುತ್ತಿನೊಳಗ
ಸತ್ತ್ಯೋ ಮಗನ ಅಂತ ಕೂಗಿದರು ಸಾವೀ ಮಗಳು ಭಾವಿ ಮಗಳು ಕೂಡಿ
ಈ ಜಗ ಅಪ್ಯಾ ಅಮ್ಮನ ಮಗ ಅಮ್ಮನೊಳಗ ಅಪ್ಯನ ಮೊಗ
ಅಪ್ಯನ ಕತ್ತಿಗೆ ಅಮ್ಮನ ನೊಗ ನಾ ಅವರ ಕಂದ ಶ್ರೀ ಗುರುದತ್ತ ಅಂದ
"ನಾನು" "ನೀನು" "ಆನು" "ತಾನು" ನಾಕು ನಾಕೆ ತಂತಿ
ಸೊಲ್ಲಿಸಿದರು ನಿಲ್ಲಿಸಿದರು ಓಂ ಓಂ ದಂತಿ
ಗಣನಾಯಕ ಮೈ ಮಾಯಕ ಸಾಯಿ ಸಾಯಕ ಮಾಡಿ
ಗುರಿಯ ತುಂಬಿ ಕುರಿಯ ಕಣ್ಣು ಧಾತು ಮಾತು ಕೂಡಿ
ಆವು ಈವಿನ ನಾವು ನೀವಿಗೆ ಆನು ತಾನಾದ ತನ ನನಾ
ನಾನು ನೀನಿನ ಈನಿ ನಾನಿಗೆ ಬೇನೆ ಏನೋ? ಜಾಣೆ ನಾ
ಚಾರು ತಂತ್ರಿಯ ಚರಣ ಚರಣದ ಘನಘನಿತ ಚತುರಸ್ವನಾ
ಹತವೊ ಹಿತವೋ ಆ ಅನಾಹತಾ ಮಿತಿಮಿತಿಗೆ ಇತಿ ನನ ನನಾ
ಬೆನ್ನಿನಾನಿಕೆ ಜನನ ಜಾನಿಕೆ ಮನನವೇ ಸಹಿತಸ್ತನಾ
ಗೋವಿನ ಕೊಡುಗೆಯ ಹದಗದ ಹುಡಿಗಿ ಬೆಡಗಿಲೆ ಬಂದಳು ನಡುನಡುಗಿ
ಸಲಿಗೆಯ ಸುಲಿಗೆಯ ಬಯಕೆಯ ಒಲುಮೆ ಬಯಲಿನ ನೆಯ್ಯಾಯ ಸಿರಿಯುಡುಗಿ
ನಾಡಿಯ ನಡಿಗೆಯ ನಲುವಿನ ನಾಲಿಗೆ ನೆನೆದಿರೆ ಸೋಲುವ ಸೊಲ್ಲಿನಲಿ
ಮುಟ್ಟದ ಮಾಟದ ಹುಟ್ಟದ ಹುಟ್ಟಿಗೆ ಜೇನಿನ ಥಳಿಮಳಿ ಸನಿಹ ಹನಿ
ಬೆಚ್ಚಿದ ವೆಚ್ಚವು ಬಸರಿನ ಮೊಳಕೆ ಬಚ್ಚಿದ್ಯಾವುದೋ ನಾ ತಿಳಿಯೆ
ಭೂತದ ಭಾವ ಉದ್ಬವ ಜಾವ ಮೊಲೆ ಊಡಿಸುವಳು ಪ್ರತಿಭೆ ನವ
ಚಿತ್ತಿಮಳಿ ತತ್ತಿ ಹಾಕತಿತ್ತು ಸ್ವಾತಿ ಮುತ್ತಿನೊಳಗ
ಸತ್ತ್ಯೋ ಮಗನ ಅಂತ ಕೂಗಿದರು ಸಾವೀ ಮಗಳು ಭಾವಿ ಮಗಳು ಕೂಡಿ
ಈ ಜಗ ಅಪ್ಯಾ ಅಮ್ಮನ ಮಗ ಅಮ್ಮನೊಳಗ ಅಪ್ಯನ ಮೊಗ
ಅಪ್ಯನ ಕತ್ತಿಗೆ ಅಮ್ಮನ ನೊಗ ನಾ ಅವರ ಕಂದ ಶ್ರೀ ಗುರುದತ್ತ ಅಂದ
"ನಾನು" "ನೀನು" "ಆನು" "ತಾನು" ನಾಕು ನಾಕೆ ತಂತಿ
ಸೊಲ್ಲಿಸಿದರು ನಿಲ್ಲಿಸಿದರು ಓಂ ಓಂ ದಂತಿ
ಗಣನಾಯಕ ಮೈ ಮಾಯಕ ಸಾಯಿ ಸಾಯಕ ಮಾಡಿ
ಗುರಿಯ ತುಂಬಿ ಕುರಿಯ ಕಣ್ಣು ಧಾತು ಮಾತು ಕೂಡಿ
Wednesday, March 2, 2016
ನೀ ಹೀಂಗ ನೋಡಬ್ಯಾಡ ನನ್ನ - ದ ರಾ ಬೇಂದ್ರೆ
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರ ನನ್ನ,
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ?
ಸಂಸಾರಸಾಗರದಾಗ, ಲೆಕ್ಕವಿರದಷ್ಟು ದುಃಖದ ಬಂಡಿ
ನಾ ಬಲ್ಲೆ ನನಗ ಗೊತ್ತಿಲ್ಲದಿದ್ದರು ಎಲ್ಲಿ ಆಚೆಯಾ ದಂಡಿ
ಮಲಗಿರುವ ಕೂಸು ಮಲಗಿರಲಿ ಅಲ್ಲಿ, ಮುಂದಿನದು ದೇವರ ಚಿತ್ತ
ನಾ ತಡೀಲಾರೆ ಅದು, ಯಾಕ ನೋಡತೀ ಮತ್ತ ಮತ್ತ ನೀ ಇತ್ತ?
ತಂಬಲs ಹಾಕದs ತುಂಬ ಕೆಂಪು ಗಿಣಿಗಡಕ ಹಣ್ಣಿನ ಹಾಂಗ
ಇದ್ದಂಥ ತುಟಿಯ ಬಣ್ಣೆತ್ತ ಹಾರಿತು ? ಯಾವ ಗಾಳಿಗೆ ಹೀಂಗ
ಈ ಗದ್ದ, ಗಲ್ಲ, ಹಣಿ, ಕಣ್ಣು, ಕಂಡು ಮಾರೀಗೆ ಮಾರಿsಯಾ ರೀತಿ
ಸಾವನs ತನ್ನ ಕೈ ಸವರಿತಿಲ್ಲಿ, ಬಂತೆನಗ ಇಲ್ಲದ ಭೀತಿ.
ದಾರೀಲೆ ನೆನೆದ ಕೈ ಹಿಡಿದೆ ನೀನು, ತಣ್ಣsಗ ಅಂತನ ತಿಳಿದು
ಬಿಡಲೊಲ್ಲಿ ಇನ್ನುನೂ, ಬೂದಿ ಮುಚ್ಚಿದ ಕೆಂಡ ಇದಂತ ಹೊಳೆದು
ಮುಗಿಲsನ ಕಪ್ಪರಿಸಿ ನೆಲಕ ಬಿದ್ದರ ನೆಲಕ ನೆಲಿ ಎಲ್ಲಿನ್ನs
ಆ ಗಾದಿ ಮಾತು ನಂಬಿ, ನಾನು ದೇವರಂತ ತಿಳಿದಿಯೇನ ನೀ ನನ್ನ?
ಇಬ್ಬನ್ನಿ ತೊಳೆದರೂ ಹಾಲು ಮೆತ್ತಿದಾ ಕವಳಿಕಂಟಿಯಾ ಹಣ್ಣು
ಹೊಳೆಹೊಳೆವ ಹಾಂಗ ಕಣ್ಣಿರುವ ಹೆಣ್ಣ, ಹೇಳು ನಿನ್ನವೇನ ಈ ಕಣ್ಣು?
ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡ ಒಮ್ಮಿಗಿಲs
ಹುಣ್ಣವೀ ಚಂದಿರನ ಹೆಣಾ ಬಂತೊ ಮುಗಿಲಾಗ ತೇಲತs ಹಗಲ!
ನಿನ ಕಣ್ಣಿನ್ಯಾಗ ಕಾಲೂರಿ ಮಳೆಯು, ನಡನಡಕ ಹುಚ್ಚನಗಿ ಯಾಕ
ಹನಿ ಒಡೆಯಲಿಕ್ಕೆ ಬಂದಂಥ ಮೋಡ ತಡಧಾಂಗ ಗಾಳಿಯ ನೆವಕ
ಅತ್ತಾರೆ ಅತ್ತು ಬಿಡು, ಹೊನಲು ಬರಲಿ, ನಕ್ಕ್ಯಾಕ ಮರಸತೀ ದುಕ್ಕ?
ಎವೆ ಬಡಸಿ ಕೆಡವು, ಬಿರಿಗಣ್ಣು ಬ್ಯಾಡ, ತುಟಿಕಚ್ಚಿ ಹಿಡಿಯದಿರು ಬಿಕ್ಕ.
- ದ ರಾ ಬೇಂದ್ರೆ
('ನಾದಲೀಲೆ' ಕವನ ಸಂಕಲನದಿಂದ)
ನೀ ಹೀಂಗ ನೋಡಿದರ ನನ್ನ,
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ?
ಸಂಸಾರಸಾಗರದಾಗ, ಲೆಕ್ಕವಿರದಷ್ಟು ದುಃಖದ ಬಂಡಿ
ನಾ ಬಲ್ಲೆ ನನಗ ಗೊತ್ತಿಲ್ಲದಿದ್ದರು ಎಲ್ಲಿ ಆಚೆಯಾ ದಂಡಿ
ಮಲಗಿರುವ ಕೂಸು ಮಲಗಿರಲಿ ಅಲ್ಲಿ, ಮುಂದಿನದು ದೇವರ ಚಿತ್ತ
ನಾ ತಡೀಲಾರೆ ಅದು, ಯಾಕ ನೋಡತೀ ಮತ್ತ ಮತ್ತ ನೀ ಇತ್ತ?
ತಂಬಲs ಹಾಕದs ತುಂಬ ಕೆಂಪು ಗಿಣಿಗಡಕ ಹಣ್ಣಿನ ಹಾಂಗ
ಇದ್ದಂಥ ತುಟಿಯ ಬಣ್ಣೆತ್ತ ಹಾರಿತು ? ಯಾವ ಗಾಳಿಗೆ ಹೀಂಗ
ಈ ಗದ್ದ, ಗಲ್ಲ, ಹಣಿ, ಕಣ್ಣು, ಕಂಡು ಮಾರೀಗೆ ಮಾರಿsಯಾ ರೀತಿ
ಸಾವನs ತನ್ನ ಕೈ ಸವರಿತಿಲ್ಲಿ, ಬಂತೆನಗ ಇಲ್ಲದ ಭೀತಿ.
ದಾರೀಲೆ ನೆನೆದ ಕೈ ಹಿಡಿದೆ ನೀನು, ತಣ್ಣsಗ ಅಂತನ ತಿಳಿದು
ಬಿಡಲೊಲ್ಲಿ ಇನ್ನುನೂ, ಬೂದಿ ಮುಚ್ಚಿದ ಕೆಂಡ ಇದಂತ ಹೊಳೆದು
ಮುಗಿಲsನ ಕಪ್ಪರಿಸಿ ನೆಲಕ ಬಿದ್ದರ ನೆಲಕ ನೆಲಿ ಎಲ್ಲಿನ್ನs
ಆ ಗಾದಿ ಮಾತು ನಂಬಿ, ನಾನು ದೇವರಂತ ತಿಳಿದಿಯೇನ ನೀ ನನ್ನ?
ಇಬ್ಬನ್ನಿ ತೊಳೆದರೂ ಹಾಲು ಮೆತ್ತಿದಾ ಕವಳಿಕಂಟಿಯಾ ಹಣ್ಣು
ಹೊಳೆಹೊಳೆವ ಹಾಂಗ ಕಣ್ಣಿರುವ ಹೆಣ್ಣ, ಹೇಳು ನಿನ್ನವೇನ ಈ ಕಣ್ಣು?
ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡ ಒಮ್ಮಿಗಿಲs
ಹುಣ್ಣವೀ ಚಂದಿರನ ಹೆಣಾ ಬಂತೊ ಮುಗಿಲಾಗ ತೇಲತs ಹಗಲ!
ನಿನ ಕಣ್ಣಿನ್ಯಾಗ ಕಾಲೂರಿ ಮಳೆಯು, ನಡನಡಕ ಹುಚ್ಚನಗಿ ಯಾಕ
ಹನಿ ಒಡೆಯಲಿಕ್ಕೆ ಬಂದಂಥ ಮೋಡ ತಡಧಾಂಗ ಗಾಳಿಯ ನೆವಕ
ಅತ್ತಾರೆ ಅತ್ತು ಬಿಡು, ಹೊನಲು ಬರಲಿ, ನಕ್ಕ್ಯಾಕ ಮರಸತೀ ದುಕ್ಕ?
ಎವೆ ಬಡಸಿ ಕೆಡವು, ಬಿರಿಗಣ್ಣು ಬ್ಯಾಡ, ತುಟಿಕಚ್ಚಿ ಹಿಡಿಯದಿರು ಬಿಕ್ಕ.
- ದ ರಾ ಬೇಂದ್ರೆ
('ನಾದಲೀಲೆ' ಕವನ ಸಂಕಲನದಿಂದ)
Wednesday, July 22, 2015
ಹಕ್ಕಿ ಹಾರುತಿದೆ ನೋಡಿದಿರಾ? - ದ ರಾ ಬೇಂದ್ರೆ,
![]() |
| ದ ರಾ ಬೇಂದ್ರೆ, |
ಇರುಳಿರುಳಳಿದು ದಿನ ದಿನ ಬೆಳಗೆ
ಸುತ್ತುಮುತ್ತಲೂ ಮೇಲಕೆ ಕೆಳಗೆ
ಗಾವುದ ಗಾವುದ ಗಾವುದ ಮುಂದೆ
ಎವೆತೆರೆದಿಕ್ಕುವ ಹೊತ್ತಿನ ಒಳಗೆ
ಹಕ್ಕಿ ಹಾರುತಿದೆ ನೋಡಿದಿರಾ?
ಕರಿನರೆ ಬಣ್ಣದ ಪುಚ್ಚಗಳುಂಟು
ಬಿಳಿ-ಹೊಳೆ ಬಣ್ಣದ ಗರಿ -ಗರಿಯುಂಟು
ಕೆನ್ನನ ಹೊನ್ನನ ಬಣ್ಣ-ಬಣ್ಣಗಳ
ರೆಕ್ಕೆಗಳೆರಡೂ ಪಕ್ಕದೊಲುಂಟು
ಹಕ್ಕಿ ಹಾರುತಿದೆ ನೋಡಿದಿರಾ?
ನೀಲಮೇಘಮಂಡಲ-ಸಮ ಬಣ್ಣ
ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ
ಚಿಕ್ಕಿಯ ಮಾಲೆಯ ಸೆಕ್ಕಿಸಿಕೊಂಡು
ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ
ಹಕ್ಕಿ ಹಾರುತಿದೆ ನೋಡಿದಿರಾ?
ರಾಜ್ಯದ ಸಾಮ್ರಾಜ್ಯದ ತೆನೆ ಒಕ್ಕಿ
ಮಂಡಲ-ಗಿಂಡಲಗಳ ಗಡ ಮುಕ್ಕಿ
ತೇಲಿಸಿ ಮುಳುಗಿಸಿ ಖಂಡ-ಖಂಡಗಳ
ಸಾರ್ವಭೌಮರಾ ನೆತ್ತಿಯ ಕುಕ್ಕಿ
ಹಕ್ಕಿ ಹಾರುತಿದೆ ನೋಡಿದಿರಾ?
ಯುಗ-ಯುಗಗಳ ಹಣೆ ಬರಹವ ಒರಸಿ
ಮನ್ವಂತರಗಳ ಭಾಗ್ಯವ ತರೆಸಿ
ರೆಕ್ಕೆಯ ಬೀಸುತ ಚೇತನಗೊಳಿಸಿ
ಹೊಸಗಾಲದ ಹಸುಮಕ್ಕಳ ಹರಸಿ
ಹಕ್ಕಿ ಹಾರುತಿದೆ ನೋಡಿದಿರಾ?
ಬೆಳ್ಳಿಯ ಹಳ್ಳಿಯ ಮೇರೆಯ ಮೀರಿ
ತಿಂಗಳೂರಿನ ನೀರನು ಹೀರಿ
ಆಡಲು ಹಾಡಲು ತಾ ಹಾರಾಡಲು
ಮಂಗಳಲೋಕದ ಅಂಗಳಕೇರಿ
ಹಕ್ಕಿ ಹಾರುತಿದೆ ನೋಡಿದಿರಾ?
ಮುಟ್ಟಿದೆ ದಿಗ್ಮಂಡಲ ಅಂಚ
ಆಚಿಗೆ ಚಾಚಿದೆ ತನ್ನಯ ಕುಂಚ
ಬ್ರಹ್ಮಾಂಡಲಗಳ ಒಡೆಯಲು ಎಂದೊ
ಬಲ್ಲರು ಯಾರಾ ಹಾಕಿದ ಹೊಂಚ!
ಹಕ್ಕಿ ಹಾರುತಿದೆ ನೋಡಿದಿರಾ?
ನಾದಲೀಲೆ - ಕುರುಡು ಕಾಂಚಾಣ
ದ.ರಾ. ಬೇಂದ್ರೆ (ಅಂಬಿಕಾತನಯದತ್ತ) | ನಾದಲೀಲೆ
ಕುರುಡು ಕಾಂಚಾಣ ಕುಣಿಯುತಲಿತ್ತು
ಕಾಲಿಗೆ ಬಿದ್ದವರ ತುಳಿಯುತಲಿತ್ತೊs
ಕುರುಡು ಕಾಂಚಾಣ || ಪಲ್ಲವಿ ||
ಬಾಣಂತಿಯೆಂಬಾ ಸಾ-
ಬಾಣದ ಬಿಳುಪಿನಾ
ಕಾಣದ ಕಿರುಗೆಜ್ಜೆ ಕಾಲಾಗೆ ಇತ್ತೋ
ಸಣ್ಣ ಕಂದಮ್ಮಗಳ
ಕಣ್ಣೀನ ಕವಡಿಯ
ತಣ್ಣನ್ನ ಜೋಮಾಲೆ ಕೊರಳೊಳಗಿತ್ತೋ;
ಬಡವರ ಒಲವಿನ
ಬಡಬಾsನಲದಲ್ಲಿ
ಸುಡು ಸುಡು ಪಂಜವು ಕೈಯೊಳಗಿತ್ತೊ;
ಕಂಬನಿ ಕುಡಿಯುವ
ಹುಂಬ ಬಾಯಿಲೆ ಮೈ-
ದುಂಬಿದಂತಧೊ ಉಧೊ ಎನ್ನುತ್ತಲಿತ್ತೊ;
ಕೂಲಿ ಕಂಬಳಿಯವರ
ಪಾಲಿನ ಮೈದೊಗಲ
ಧೂಳಿಯ ಭಂಡಾರ ಹಣೆಯೊಳಗಿತ್ತೊ;
ಗುಡಿಯೊಳಗೆ ಗಣಣ ಮಾ-
ಹಡಿಯೊಳಗೆ ತನನ ಅಂ-
ಗಡಿಯೊಳಗ ಝಣಣ ನುಡಿಗೊಡುತ್ತಿತ್ತೋ;
ಹ್ಯಾಂಗಾರೆ ಕುಣಿಕುಣಿದು
ಮಂಗಾಟ ನಡೆದಾಗ
ಅಂಗಾತ ಬಿತ್ತೋ, ಹೆಗಲಿ ಎತ್ತೋ.
(ಅಂಬಿಕಾತನಯದತ್ತ) | ಭಾವಗೀತೆ | ಶ್ರಾವಣ
ಮುಗಿಲ ಮಾರಿಗೆ ರಾಗರತಿಯಾ....
ಮುಗಿಲ ಮಾರಿಗೆ ರಾಗರತಿಯಾ....
ನಂಜ ಏರಿತ್ತ, ಆಗ ಸಂಜೆ ಆಗಿತ್ತ
ಆಗ ಸಂಜೆ ಆಗಿತ್ತ
ಮುಗಿಲ ಮಾರಿಗೆ ರಾಗರತಿಯಾ....
ನಂಜ ಏರಿತ್ತ, ಆಗ ಸಂಜೆ ಆಗಿತ್ತ
ಆಗ ಸಂಜೆ ಆಗಿತ್ತ
ನೆಲದ ಅಂಚಿಗೆ ಮಂಜಿನ ಮುಸುಕೂ
ಹ್ಯಾಂಗೋ ಬಿದ್ದಿತ್ತಾ, ಗಾಳಿಗೆ ಮೇಲಕ್ಕೆದ್ದಿತ್ತ
ಗಾಳಿಗೆ ಮೇಲಕ್ಕೆದ್ದಿತ್ತ
ಮುಗಿಲ ಮಾರಿಗೆ ರಾಗರತಿಯಾ....
ನಂಜ ಏರಿತ್ತ, ಆಗ ಸಂಜೆ ಆಗಿತ್ತ
ಆಗ ಸಂಜೆ ಆಗಿತ್ತ
ಬಿದಿಗಿ ಚಂದ್ರನ ಚೊಗಚಿ ನಗಿವು
ಮೆಲ್ಲಗ ಓಡಿತ್ತ, ಮ್ಯಾಲಕ ಬೆಳ್ಳಿನ ಕೂಡಿತ್ತ
ಬಿದಿಗಿ ಚಂದ್ರನ ಚೊಗಚಿ ನಗಿವು
ಮೆಲ್ಲಗ ಓಡಿತ್ತ, ಮ್ಯಾಲಕ ಬೆಳ್ಳಿನ ಕೂಡಿತ್ತ
ಇರುಳ ಹರಳಿನ ಅರಳ ಮಲ್ಲಿಗೆ
ಜಾವಿಗೆ ಹಾಂಗಿತ್ತ, ಸೂಸ್ಯಾವ ಚಿಕ್ಕೆ ಹತ್ತಿತ್ತ
ಮುಗಿಲ ಮಾರಿಗೆ ರಾಗರತಿಯಾ....
ನಂಜ ಏರಿತ್ತ, ಆಗ ಸಂಜೆ ಆಗಿತ್ತ
ಆಗ ಸಂಜೆ ಆಗಿತ್ತ
ಬೊಗಸೆಗಣ್ಣಿನ ಬಯಕೆ ಹೆಣ್ಣು
ನೀರಿಗೆ ಹೋಗಿತ್ತ.. ತಿರುಗಿ ಮನೆಗೆ ಸಾಗಿತ್ತ..
ಬೊಗಸೆಗಣ್ಣಿನ ಬಯಕೆ ಹೆಣ್ಣು
ನೀರಿಗೆ ಹೋಗಿತ್ತ.. ತಿರುಗಿ ಮನೆಗೆ ಸಾಗಿತ್ತ..
ಕಾಮಿ ಬೆಚ್ಚಿಹಾಂಗ ಭಾವಿಹಾದಿ
ಕಾಲಾಗ ಸುಳಿದಿತ್ತ.. ಎರಗಿ ಹಿಂದಕ್ಕುಳಿದಿತ್ತ..
ಮುಗಿಲ ಮಾರಿಗೆ ರಾಗರತಿಯಾ....
ನಂಜ ಏರಿತ್ತ, ಆಗ ಸಂಜೆ ಆಗಿತ್ತ
ಆಗ ಸಂಜೆ ಆಗಿತ್ತ
ಮಳ್ಳ ಗಾಳಿ ಸುಳಿದಳ್ಳ ಕೈಲೆ
ಸೆರಗನು ಹಿಡಿದಿತ್ತ.. ಮತ್ತ ಮತ್ತ ಬೆರಗಿಲೆ ಬಿಡತಿತ್ತ..
ಮಳ್ಳ ಗಾಳಿ ಸುಳಿದಳ್ಳ ಕೈಲೆ
ಸೆರಗನು ಹಿಡಿದಿತ್ತ.. ಮತ್ತ ಮತ್ತ ಬೆರಗಿಲೆ ಬಿಡತಿತ್ತ..
ಒಂದು ಮನದ ಗಿಳಿ ಹಿಂದ ನೆಳ್ಳಿಗೆ
ಹುಣ್ಣಿವೆ ಬರಲಿತ್ತ.. ತನ್ನಾ ಮೈಮನ ಮರೆತಿತ್ತ..
ಮುಗಿಲ ಮಾರಿಗೆ ರಾಗರತಿಯಾ....
ನಂಜ ಏರಿತ್ತ, ಆಗ ಸಂಜೆ ಆಗಿತ್ತ
ಆಗ ಸಂಜೆ ಆಗಿತ್ತ
ನೆಲದ ಅಂಚಿಗೆ ಮಂಜಿನ ಮುಸುಕೂ
ಹ್ಯಾಂಗೋ ಬಿದ್ದಿತ್ತಾ, ಗಾಳಿಗೆ ಮೇಲಕ್ಕೆದ್ದಿತ್ತ
ಗಾಳಿಗೆ ಮೇಲಕ್ಕೆದ್ದಿತ್ತ
ಮುಗಿಲ ಮಾರಿಗೆ ರಾಗರತಿಯಾ....ನಾನು ಬಡವಿ, ಆತ ಬಡವ
ಒಲವೆ ನಮ್ಮ ಬದುಕು
ಬಳಸಿಕೊಂಡೆವದನೆ ನಾವು
ಅದಕು ಇದಕು ಎದಕು ||ಪ ||
ಹತ್ತಿರಿರಲಿ ದೂರವಿರಲಿ
ಅವನೆ ರಂಗಸಾಲೆ
ಕಣ್ಣು ಕಟ್ಟುವಂತ ಮೂರ್ತಿ
ಕಿವಿಗೆ ಮೆಚ್ಚಿನೋಲೆ
ಚಳಿಗೆ ಬಿಸಿಲಿಗೊಂದೆ ಹದನ
ಅವನ ಮೈಯ ಮುತ್ತೆ
ಅದೇ ಗಳಿಗೆ ಮೈಯ ತುಂಬ
ನನಗೆ ನವಿರು ಬತ್ತೆ
ಆತ ಕೊಟ್ಟ ವಸ್ತು ಒಡವೆ
ನನಗೆ ಅವಗೆ ಗೊತ್ತು
ತೋಳುಗಳಿಗೆ ತೋಳ ಬಂಧಿ
ಕೆನ್ನೆ ತುಂಬ ಮುತ್ತು
ಕುಂದು ಕೊರತೆ ತೋರಲಿಲ್ಲ
ಬೇಕು ಹೆಚ್ಚಿಗೇನು?
ಹೊಟ್ಟೆಗಿತ್ತ ಜೀವಫಲವ
ತುಟಿಗೆ ಹಾಲು ಜೇನು
ದ ರಾ ಬೇಂದ್ರೆ,
Wednesday, July 9, 2014
ಇಳಿದು ಬಾ ತಾಯಿ ಇಳಿದು ಬಾ - ದ ರಾ ಬೇಂದ್ರೆ,
ಇಳಿದು ಬಾ ತಾಯಿ ಇಳಿದು ಬಾ || ಪ ||
ಹರನ ಜಡೆಯಿಂದ ಹರಿಯ ಅಡಿಯಿಂದ
ಋಷಿಯ ತೊಡೆಯಿಂದ ನುಸುಳಿ ಬಾ;
ದೇವದೇವರನು ತಣಿಸಿ ಬಾ
ದಿಗ್ದಿಗಂತದಲಿ ಹಣಿಸಿ ಬಾ
ಚರಾಚರಗಳಿಗೆ ಉಣಿಸಿ ಬಾ
ಇಳಿದು ಬಾ ತಾಯಿ ಇಳಿದು ಬಾ.
ನಿನಗೆ ಪೊಡಮಡುವೆ ನಿನ್ನನುಡುತೊಡುವೆ
ಏಕೆ ಎಡೆತಡೆವೆ ಸುರಿದು ಬಾ
ಸ್ವರ್ಗ ತೊರೆದು ಬಾ
ಬಯಲ ಜರೆದು ಬಾ
ನೆಲದಿ ಹರಿದು ಬಾ
ಬಾರೆ ಬಾ, ತಾಯಿ ಇಳಿದು ಬಾ
ಇಳಿದು ಬಾ, ತಾಯೇ ಇಳಿದು ಬಾ.
ನನ್ನ ತಲೆಯೊಳಗೆ
ನನ್ನ ಬೆಂಬಳಿಗೆ
ನನ್ನ ಒಳಕೆಳಗೆ ನುಗ್ಗಿ ಬಾ,
ಕಣ್ಣ ಕಣ ತೊಳಿಸಿ
ಉಸಿರ ಎಳೆ ಎಳಿಸಿ
ನುಡಿಯ ಸಸಿ ಮೊಳಸಿ ಹಿಗ್ಗಿ ಬಾ;
ಎದೆಯ ನೆಲೆಯಲ್ಲಿ ನೆಲೆಸಿ ಬಾ
ಜೀವ ಜಲದಲ್ಲಿ ಚಲಿಸಿ ಬಾ
ಮೂಲ ಹೊಲದಲ್ಲಿ ನೆಲೆಸಿ ಬಾ
ಇಳಿದು ಬಾ ತಾಯೇ ಇಳಿದು ಬಾ.
ಕಂಚು ಮಿಂಚಾಗಿ ತೆರಳಿ ಬಾ
ನೀರು ನೀರಾಗಿ ಉರುಳಿ ಬಾ
ಮತ್ತೆ ಹೊಡೆಮರಳಿ ಹೊರಳಿ ಬಾ,
ದಯೆಯಿರದ ದೀನ
ಹರೆಯಳಿದ ಹೀನ
ನೀರಿರದ ಮೀನ ಕರೆಕರೆವ ಬಾ
ಇಳಿದು ಬಾ ತಾಯೇ ಇಳಿದು ಬಾ.
ಕರು ಕಂಡ ಕರುಳೆ
ಮನ ಉಂಡ ಮರುಳೆ
ಉದ್ದಂಡ ಅರುಳೆ
ಸುಳಿಸುಳಿದು ಬಾ;
ಶಿವಶುಭ್ರ ಕರುಣೆ
ಅತಿಕಿಂಚದರುಣೆ
ವಾತ್ಸಲ್ಯವರಣೆ
ಇಳಿ ಇಳಿದು ಬಾ
ಇಳಿದು ಬಾ ತಾಯೇ ಇಳಿದು ಬಾ.
ಕೊಳೆಯ ತೊಳೆವವರು ಇಲ್ಲ ಬಾ
ಬೇರೆ ಶಕ್ತಿಗಳ ಹೊಲ್ಲ ಬಾ
ಹೀಗೆ ಮಾಡಿದರು ಅಲ್ಲ ಬಾ
ನಾಡ ನಾಡಿಯನು ತುತ್ತ ಬಾ
ನಮ್ಮ ನಾಡನ್ನೆ ಸುತ್ತ ಬಾ
ಸತ್ತ ಜನರನು ಎತ್ತ ಬಾ.
ಸುರ ಸ್ವಪ್ನವಿದ್ದ ಪ್ರತಿಬಿಂಬ ಬಿದ್ದ ಉದ್ಬುದ್ಧ ಶುದ್ಧ ನೀರೆ!
ಎಚ್ಚೆತ್ತು ಎದ್ದ ಆಕಾಶದುದ್ದ ಧರೆಗಿಳಿಯಲಿದ್ದ ಧೀರೆ!
ಸಿರಿವಾರಿಜಾತ ವರಪಾರಿಜಾತ ತಾರಾ-ಕುಸುಮದಿಂದೆ
ವೃಂದಾರವಂದ್ಯೆ ಮಂದಾರಗಂಧೆ ನೀನೇ ತಾಯಿ ತಂದೆ
ರಸಪೂರಜನ್ಯೆ ನೀನಲ್ಲ ಅನ್ಯೆ ಸಚ್ಚಿದಾನಂದ ಕನ್ಯೆ!
ಬಂದಾರೆ ಬಾರೆ ಒಂದಾರೆ ಸಾರೆ ಕಣ್ಧಾರೆ ತಡೆವರೇನೆ?
ಅವತಾರವೆಂದೆ ಎಂದಾರೆ ತಾಯಿ, ಈ ಅಧಃಪಾತವನ್ನೆ?
ಹರಕೆ ಸಂದಂತೆ
ಮಮತೆ ಮಿಂದಂತೆ
ತುಂಬಿ ಬಂದಂತೆ
ದುಮ್ ದುಮ್ ಎಂದಂತೆ ದುಡುಕಿ ಬಾ
ನಿನ್ನ ಕಂದನ್ನ ಹುಡುಕಿ ಬಾ
ಹುಡುಕಿ ಬಾ ತಾಯೆ ದುಡುಕಿ ಬಾ ಇಳಿದು ಬಾ ತಾಯಿ ಇಳಿದು ಬಾ
ಹರಣ ಹೊಸದಾಗಿ ಹೊಳೆದು ಬಾ
ಬಾಳುಬೆಳಕಾಗೆ ಬೆಳೆದು ಬಾ
ಕೈ ತೊಳೆದು ಬಾ
ಮೈ ತಳೆದು ಬಾ
ಇಳೆಗಿಳಿದು ಬಾ ತಾಯಿ ಇಳಿದು ಬಾ
ಇಳಿದು ಬಾ ತಾಯೇ ಇಳಿದು ಬಾ.
ಶಂಭು ಶಿವಹರನ ಚಿತ್ತೆ ಬಾ
ದತ್ತ ನರಹರಿಯ ಮುತ್ತೆ ಬಾ
ಅಂಬಿಕಾತನಯನತ್ತೆ ಬಾ
ಇಳಿದು ಬಾ ತಾಯಿ ಇಳಿದು ಬಾ
ಹರನ ಜಡೆಯಿಂದ ಹರಿಯ ಅಡಿಯಿಂದ
ಋಷಿಯ ತೊಡೆಯಿಂದ ನುಸುಳಿ ಬಾ;
ದೇವದೇವರನು ತಣಿಸಿ ಬಾ
ದಿಗ್ದಿಗಂತದಲಿ ಹಣಿಸಿ ಬಾ
ಚರಾಚರಗಳಿಗೆ ಉಣಿಸಿ ಬಾ
ಇಳಿದು ಬಾ ತಾಯಿ ಇಳಿದು ಬಾ.
ನಿನಗೆ ಪೊಡಮಡುವೆ ನಿನ್ನನುಡುತೊಡುವೆ
ಏಕೆ ಎಡೆತಡೆವೆ ಸುರಿದು ಬಾ
ಸ್ವರ್ಗ ತೊರೆದು ಬಾ
ಬಯಲ ಜರೆದು ಬಾ
ನೆಲದಿ ಹರಿದು ಬಾ
ಬಾರೆ ಬಾ, ತಾಯಿ ಇಳಿದು ಬಾ
ಇಳಿದು ಬಾ, ತಾಯೇ ಇಳಿದು ಬಾ.
ನನ್ನ ತಲೆಯೊಳಗೆ
ನನ್ನ ಬೆಂಬಳಿಗೆ
ನನ್ನ ಒಳಕೆಳಗೆ ನುಗ್ಗಿ ಬಾ,
ಕಣ್ಣ ಕಣ ತೊಳಿಸಿ
ಉಸಿರ ಎಳೆ ಎಳಿಸಿ
ನುಡಿಯ ಸಸಿ ಮೊಳಸಿ ಹಿಗ್ಗಿ ಬಾ;
ಎದೆಯ ನೆಲೆಯಲ್ಲಿ ನೆಲೆಸಿ ಬಾ
ಜೀವ ಜಲದಲ್ಲಿ ಚಲಿಸಿ ಬಾ
ಮೂಲ ಹೊಲದಲ್ಲಿ ನೆಲೆಸಿ ಬಾ
ಇಳಿದು ಬಾ ತಾಯೇ ಇಳಿದು ಬಾ.
ಕಂಚು ಮಿಂಚಾಗಿ ತೆರಳಿ ಬಾ
ನೀರು ನೀರಾಗಿ ಉರುಳಿ ಬಾ
ಮತ್ತೆ ಹೊಡೆಮರಳಿ ಹೊರಳಿ ಬಾ,
ದಯೆಯಿರದ ದೀನ
ಹರೆಯಳಿದ ಹೀನ
ನೀರಿರದ ಮೀನ ಕರೆಕರೆವ ಬಾ
ಇಳಿದು ಬಾ ತಾಯೇ ಇಳಿದು ಬಾ.
ಕರು ಕಂಡ ಕರುಳೆ
ಮನ ಉಂಡ ಮರುಳೆ
ಉದ್ದಂಡ ಅರುಳೆ
ಸುಳಿಸುಳಿದು ಬಾ;
ಶಿವಶುಭ್ರ ಕರುಣೆ
ಅತಿಕಿಂಚದರುಣೆ
ವಾತ್ಸಲ್ಯವರಣೆ
ಇಳಿ ಇಳಿದು ಬಾ
ಇಳಿದು ಬಾ ತಾಯೇ ಇಳಿದು ಬಾ.
ಕೊಳೆಯ ತೊಳೆವವರು ಇಲ್ಲ ಬಾ
ಬೇರೆ ಶಕ್ತಿಗಳ ಹೊಲ್ಲ ಬಾ
ಹೀಗೆ ಮಾಡಿದರು ಅಲ್ಲ ಬಾ
ನಾಡ ನಾಡಿಯನು ತುತ್ತ ಬಾ
ನಮ್ಮ ನಾಡನ್ನೆ ಸುತ್ತ ಬಾ
ಸತ್ತ ಜನರನು ಎತ್ತ ಬಾ.
ಸುರ ಸ್ವಪ್ನವಿದ್ದ ಪ್ರತಿಬಿಂಬ ಬಿದ್ದ ಉದ್ಬುದ್ಧ ಶುದ್ಧ ನೀರೆ!
ಎಚ್ಚೆತ್ತು ಎದ್ದ ಆಕಾಶದುದ್ದ ಧರೆಗಿಳಿಯಲಿದ್ದ ಧೀರೆ!
ಸಿರಿವಾರಿಜಾತ ವರಪಾರಿಜಾತ ತಾರಾ-ಕುಸುಮದಿಂದೆ
ವೃಂದಾರವಂದ್ಯೆ ಮಂದಾರಗಂಧೆ ನೀನೇ ತಾಯಿ ತಂದೆ
ರಸಪೂರಜನ್ಯೆ ನೀನಲ್ಲ ಅನ್ಯೆ ಸಚ್ಚಿದಾನಂದ ಕನ್ಯೆ!
ಬಂದಾರೆ ಬಾರೆ ಒಂದಾರೆ ಸಾರೆ ಕಣ್ಧಾರೆ ತಡೆವರೇನೆ?
ಅವತಾರವೆಂದೆ ಎಂದಾರೆ ತಾಯಿ, ಈ ಅಧಃಪಾತವನ್ನೆ?
ಹರಕೆ ಸಂದಂತೆ
ಮಮತೆ ಮಿಂದಂತೆ
ತುಂಬಿ ಬಂದಂತೆ
ದುಮ್ ದುಮ್ ಎಂದಂತೆ ದುಡುಕಿ ಬಾ
ನಿನ್ನ ಕಂದನ್ನ ಹುಡುಕಿ ಬಾ
ಹುಡುಕಿ ಬಾ ತಾಯೆ ದುಡುಕಿ ಬಾ ಇಳಿದು ಬಾ ತಾಯಿ ಇಳಿದು ಬಾ
ಹರಣ ಹೊಸದಾಗಿ ಹೊಳೆದು ಬಾ
ಬಾಳುಬೆಳಕಾಗೆ ಬೆಳೆದು ಬಾ
ಕೈ ತೊಳೆದು ಬಾ
ಮೈ ತಳೆದು ಬಾ
ಇಳೆಗಿಳಿದು ಬಾ ತಾಯಿ ಇಳಿದು ಬಾ
ಇಳಿದು ಬಾ ತಾಯೇ ಇಳಿದು ಬಾ.
ಶಂಭು ಶಿವಹರನ ಚಿತ್ತೆ ಬಾ
ದತ್ತ ನರಹರಿಯ ಮುತ್ತೆ ಬಾ
ಅಂಬಿಕಾತನಯನತ್ತೆ ಬಾ
ಇಳಿದು ಬಾ ತಾಯಿ ಇಳಿದು ಬಾ
Thursday, April 4, 2013
ದ.ರಾ.ಬೇಂದ್ರೆ
ವರಕವಿ ಬೇಂದ್ರೆಯವರು ತಮ್ಮದೇ ಒಂದು ಕವನವನ್ನು ಅಭಿನಯಸಹಿತ ವಾಚಿಸುತ್ತಿರುವ ಅಪೂರ್ವ ದೃಶ್ಯಾವಳಿ! - Krupe _ Youtube
Sunday, March 17, 2013
ಬದುಕು ಮಾಯೆಯ ಮಾಟ - ದ ರಾ ಬೇಂದ್ರೆ
ಬದುಕು ಮಾಯೆಯ ಮಾಟ -
ಮಾತು ನೊರೆ-ತೆರೆಯಾಟ
ಜೀವ ಮೌನದ ತುಂಬ ಗುಂಭ ಮುನ್ನೀರು
ಕರುಣೋದಯದ ಕೂಡ
ಅರುಣೋದಯವು ಇರಲು
ಎದೆಯ ತುಂಬುತ್ತಲಿದೆ ಹೊಚ್ಚ ಹೊನ್ನೀರು!
ನಿಜದಲ್ಲೆ ಒಲವಿರಲಿ
ಚೆಲುವಿನಲೆ ನಲಿವಿರಲಿ
ಒಳಿತಿನಲೆ ಬಲವಿರಲಿ ಜೀವಕೆಳೆಯಾ!
ದೇವ ಜೀವನ ಕೇಂದ್ರ
ಒಬ್ಬೊಬ್ಬನು ಇಂದ್ರ
ಏನಿದ್ದರು ಎಲ್ಲ ಎಲ್ಲೆ ತಿಳಿಯಾ.
ಆತನಾಕೆಯೆ ನಮ್ಮ
ಜೀವನೌಕೆಯ ತಮ್ಮ
ಧ್ರುವ ಮರೆಯದಂತೆ ನಡೆಸುತ್ತಲಿರಲಿ
ಈ ನಾನು ಆ ನೀನು
ಒಂದೆ ತಾನಿನ ತಾನು
ತಾಳಲಯ ರಾಗಗಳು ಸಹಜ ಬರಲಿ
ಸಾಹಿತ್ಯ – ದ ರಾ ಬೇಂದ್ರೆ
ಸಂಗೀತ / ಗಾಯನ – ಸಿ ಅಶ್ವಥ್
Thursday, July 28, 2011
ಜನುಮದ ಜಾತ್ರಿ .............ದ.ರಾ.ಬೇಂದ್ರೆ
ನೇತ್ರಪಲ್ಲವಿಯಿಂದ ಸೂತ್ರಗೊಂಬೀ ಹಾಂಗ
ಪಾತ್ರ ಕುಣಿಸ್ಯಾನ ಒಲುಮೀಗೆ | ದಿನದಿನ
ಜಾತ್ರಿಯೆನಿಸಿತ್ತ ಜನುಮವು. ||೧||
‘ಅಬ್ಬ’ ಎನಬೇಡs ನನ ಗೆಣತಿ | ಸಾವಿರಕ
ಒಬ್ಬ ನೋಡವ್ವ ನನ ನಲ್ಲ. ||೨||
ಕಣ್ಣೆವಿ ಎತ್ತಿದರ ಹುಣ್ಣೀವಿ ತೆರಧ್ಹಾಂಗ
ಕಣ್ಣು ಏನಂತ ಬಣ್ಣಿಸಲೆ | ಚಿತ್ತಕ್ಕ
ಕಣ್ಣು ಬರೆಧ್ಹಾಂಗ ಕಂಡಿತ್ತು. ||೩||
ಹೇಸಿರಲು ಈ ಜೀವ ಆಸಿ ಹುಟ್ಟಿಸುತಿತ್ತು
ಮೀಸಿ ಮೇಲೆಳೆದ ಕಿರಿಬೆರಳು | ಕೆಂಗಯ್ಯ
ಬೀಸಿ ಕರೆದಾನ ನನಗಂತ. ||೪||
ತಂಬುಲತುಟಿ ನಗಿ ಹೊಂಬಿಸಲೆಂಬಂತೆ
ಬಿಂಬಿಸಿತವ್ವಾ ಎದಿಯಾಗ | ನಂಬೀಸಿರಂಬೀಸಿತವ್ವಾ ಜೀವವ. ||೫||
-- ದ.ರಾ.ಬೇಂದ್ರೆ
ಕೃಪೆ: ಸುನಾಥ್
ಮೂಲ ಲೇಖನ: http://sallaap.blogspot.com/2011/07/blog-post.html
Friday, July 1, 2011
ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು
ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು
ಬಳಸಿಕೊಂಡೆವದನೆ ನಾವು ಅದಕು ಇದಕು ಎದಕು || ನಾನು ||
ಹತ್ತಿರಿರಲಿ ದೂರವಿರಲಿ ಅವನೇ ರಂಗಸಾಲೆ
ಕಣ್ಣು ಕಟ್ಟುವಂಥ ಮೂರ್ತಿ ಕಿವಿಗೆ ಮೆಚ್ಚಿನೋಲೆ || ನಾನು ||
ಆತ ಕೊಟ್ಟ ವಸ್ತು ಒಡವೆ ನನಗೆ ಅವಗೆ ಗೊತ್ತು
ತೋಳುಗಳಿಗೆ ತೋಳಬಂಧಿ ಕೆನ್ನೆತುಂಬ ಮುತ್ತು || ನಾನು ||
ಕುಂದು ಕೊರತೆ ತೋರಲಿಲ್ಲ ಬೇಕು ಹೆಚ್ಚಿಗೇನು
ಹೊಟ್ಟೆಗಿತ್ತ ಜೀವಫಲವ ತುಟಿಗೆ ಹಾಲು ಜೇನು || ನಾನು ||
ಬಳಸಿಕೊಂಡೆವದನೆ ನಾವು ಅದಕು ಇದಕು ಎದಕು || ನಾನು ||
ಹತ್ತಿರಿರಲಿ ದೂರವಿರಲಿ ಅವನೇ ರಂಗಸಾಲೆ
ಕಣ್ಣು ಕಟ್ಟುವಂಥ ಮೂರ್ತಿ ಕಿವಿಗೆ ಮೆಚ್ಚಿನೋಲೆ || ನಾನು ||
ಆತ ಕೊಟ್ಟ ವಸ್ತು ಒಡವೆ ನನಗೆ ಅವಗೆ ಗೊತ್ತು
ತೋಳುಗಳಿಗೆ ತೋಳಬಂಧಿ ಕೆನ್ನೆತುಂಬ ಮುತ್ತು || ನಾನು ||
ಕುಂದು ಕೊರತೆ ತೋರಲಿಲ್ಲ ಬೇಕು ಹೆಚ್ಚಿಗೇನು
ಹೊಟ್ಟೆಗಿತ್ತ ಜೀವಫಲವ ತುಟಿಗೆ ಹಾಲು ಜೇನು || ನಾನು ||
Friday, April 29, 2011
ಅನಂತ ಪ್ರಣಯ - ದ ರಾ ಬೇಂದ್ರ
ಉತ್ತರದ್ರುವದಿಂ ದಕ್ಷಿಣದ್ರುವಕೂ
ಚುಂಬಕ ಗಾಳಿಯು ಬೀಸುತಿದೆಸೂರ್ಯನ ಬಿಂಬಕೆ ಚಂದ್ರನ ಬಿಂಬವು
ರಂಜಿಸಿ ನಗೆಯಲಿ ಮೀಸುತಿದೆ.
ಭೂರಂಗಕೆ ಅಭಿಸಾರಕೆ ಕರೆಯುತ
ತಿಂಗಳು ತಿಂಗಳು ನವೆಯುತಿದೆ
ತುಂಬುತ ತುಳುಕುತ ತೀರುತ ತನ್ನೊಳು
ತಾನೇ ಸವಿಯನು ಸವಿಯುತಿದೆ.
ಭುವನ ಕುಸುಮಿಸಿ ಪುಲಕಿಸಿ ಮರಳಿಸಿ
ಕೋಟಿ ಕೋಟಿ ಸಲ ಹೊಸೆಯಿಸಿತು
ಮಿತ್ರನ ಮೈತ್ರಿಯ ಒಸಗೆ ಮಸಗದಿದೆ
ಮರುಕದ ದ್ಃಅರೆಯ ಮಸೆಯಿಸಿತು.
ಅಕ್ಷಿನಮೀಲನ ಮಾಡದೆ ನಕ್ಷ-
ತ್ರದ ಗಣ ಗಗನದಿ ಹಾರದಿದೆ
ಬಿದಿಗೆಯ ಬಿಂಬಾಧರದಲಿ ಇಂದಿಗು
ಮಿಲನದ ಚಿಹ್ನವು ತೋರದಿದೆ.
Thursday, April 28, 2011
ಅಂತರಂಗದ ಮೃದಂಗ
ಅಂತರಂಗದ ಮೃದಂಗ ಅಂತು ತೋಮ್-ತನಾನ
ಚಿತ್ತ ತಾಳ ಬಾರಿಸುತಲಿತ್ತು ಝಣ್-ಝಣಣಣಾಣ
ನೆನಹು ತಂತಿ ಮೀಟುತಿತ್ತು ತಮ್-ತನನತಾನ
ಹಲವು ಜನುಮದಿಂದ ಬಂದ ಯಾವುದೋನೋ ಧ್ಯಾನ
ಏಕ ನಾದದಂದನೊಂದು ತಾನದ ವಿತಾನ
ತನಗೆ ತಾನೇ ಸೋಲುತಿಹುದು ನೂಲುತಿಹುದು ಗಾನ
ಕಲ್ಪದಾದಿಯಲ್ಲೇ ನನ್ನ ನಿನ್ನ ವಿರಹವಾಗಿ
ಎಲ್ಲೋ ಏನೋ ನಿನ್ನ ಹುಡುಕಿ ಕಾಂಬ ಕಣ್ಣೇ ಹೋಗಿ
ಮರೆವೆಗೊಂಡು ಬಿದ್ದೆ ನಾನು ನೆಲದ ಮಣ್ಣು ತಾಗಿ
ಕತ್ತಲಲ್ಲೇ ಬೆಳಕು ಮಿಂಚಿ ಪಡೆದಿತೇಳು ಬಣ್ಣ
ಮೂಕ ಮೌನ ತೂಕ ಮೀರಿ ದನಿಯು ಹುಟ್ಟಿತಣ್ಣ
ಕಣ್ಣ ಮಣ್ಣ ಕೂಡಲಲ್ಲಿ ಹಾಡು ಕಟ್ಟಿತಣ್ಣ
ಚಿತ್ತ ತಾಳ ಬಾರಿಸುತಲಿತ್ತು ಝಣ್-ಝಣಣಣಾಣ
ನೆನಹು ತಂತಿ ಮೀಟುತಿತ್ತು ತಮ್-ತನನತಾನ
ಹಲವು ಜನುಮದಿಂದ ಬಂದ ಯಾವುದೋನೋ ಧ್ಯಾನ
ಏಕ ನಾದದಂದನೊಂದು ತಾನದ ವಿತಾನ
ತನಗೆ ತಾನೇ ಸೋಲುತಿಹುದು ನೂಲುತಿಹುದು ಗಾನ
ಕಲ್ಪದಾದಿಯಲ್ಲೇ ನನ್ನ ನಿನ್ನ ವಿರಹವಾಗಿ
ಎಲ್ಲೋ ಏನೋ ನಿನ್ನ ಹುಡುಕಿ ಕಾಂಬ ಕಣ್ಣೇ ಹೋಗಿ
ಮರೆವೆಗೊಂಡು ಬಿದ್ದೆ ನಾನು ನೆಲದ ಮಣ್ಣು ತಾಗಿ
ಕತ್ತಲಲ್ಲೇ ಬೆಳಕು ಮಿಂಚಿ ಪಡೆದಿತೇಳು ಬಣ್ಣ
ಮೂಕ ಮೌನ ತೂಕ ಮೀರಿ ದನಿಯು ಹುಟ್ಟಿತಣ್ಣ
ಕಣ್ಣ ಮಣ್ಣ ಕೂಡಲಲ್ಲಿ ಹಾಡು ಕಟ್ಟಿತಣ್ಣ
Sunday, April 24, 2011
ಆವು ಈವಿನ ನಾವು ನೀವಿಗೆ
ಆವು ಈವಿನ ನಾವು ನೀವಿಗೆ
ಆನು ತಾನಾದ ತನನನ
ನಾವು ನೀನಿನ ಈನೀನಾನಿಗೆ
ಬೇನೆ ಏನೋ? ಜಾಣೆ ನಾ
ಚಾರು ತಂತ್ರಿಯ ಚರಣ ಚರಣದ
ಘನಘನಿತ ಚತುರಸ್ವನಾ
ಹತವೊ ಹಿತವೊ ಆ ಅನಾಹತಾ
ಮಿತಿ ಮಿತಿಗೆ ಇತಿ ನನನನಾ
ಬೆನ್ನಿನಾನಿಕೆ ಜನನ ಜಾನಿಕೆ
ಮನನವೇ ಸಹಿತಸ್ತನಾ.
ಗೋವಿನ ಕೊಡುಗೆಯ ಹಡಗದ ಹುಡುಗಿ
ಬೆಡಗಿಲೆ ಬಂದಳು ನಡುನಡುಗಿ;
ಸಲಿಗೆಯ ಸುಲಿಗೆಯು ಬಯಕೆಯ ಒಲುಮೆ
ಬಯಲಿನ ನೆಯ್ಗೆಯ ಸಿರಿಯುಡುಗಿ;
ನಾಡಿಯ ನಡಿಗೆಯ ನಲುವಿನ ನಾಲಿಗೆ
ನೆನೆದಿರೆ ಸೋಲುವ ಸೊಲ್ಲಿನಲಿ;
ಮುಟ್ಟದ ಮಾಟದ ಹುಟ್ಟದ ಹುಟ್ಟಿಗೆ
ಜೇನಿನ ಥಳಿಮಳಿ ಸನಿಹ ಹನಿ;
ಬೆಚ್ಚಿದ ವೆಚ್ಚವು ಬಸುರಿನ ಮೊಳಕೆ
ಬಚ್ಚಿದ್ದಾವುದೊ ನಾ ತಿಳಿಯೆ
ಭೂತದ ಭಾವ ಉದ್ಬವ ಜಾವ
ಮೊಲೆ ಊಡಿಸುವಳು ಪ್ರತಿಭೆ ನವ.
ಚಿತ್ತೀಮಳಿ, ತತ್ತಿ ಹಾಕತ್ತಿತ್ತು ಸ್ವಾತಿಮುತ್ತೀನೊಳಗ
ಸತ್ತಿಯೋ ಮಗನ ಅಂತ ಕೂಗಿದರು
ಸಾವೀ ಮಗಳು, ಭಾವಿ ಮಗಳು ಕೂಡಿ
ಈ ಜಗ ಅಪ್ಪಾ ಅಮ್ಮನ ಮಗ
ಅಮ್ಮನೊಳಗ ಅಪ್ಪನ ಮೊಗ
ಅಪ್ಪನ ಕತ್ತಿಗೆ ಅಮ್ಮನ ನೊಗ
ನಾ ಅವರ ಕಂದ ಶ್ರೀ ಗುರುದತ್ತ ಅಂದ
'ನಾನು' 'ನೀನು' 'ಆನು' 'ತಾನು'
ನಾಕು ನಾಕೇ ತಂತಿ.
ಸೊಲ್ಲಿಸಿದರು ನಿಲ್ಲಿಸಿದರು
ಓಂ ದಂತಿ!
ಗಣನಾಯಕ ಮೈ ಮಾಯಕ
ಸೈ ಸಾಯಕ ಮಾಡಿ
ಗುರಿಯ ತುಂಬಿ ಕುರಿಯ ಕಣ್ಣು
ಧಾತು ಮಾತು ಕೂಡಿ.
ಆನು ತಾನಾದ ತನನನ
ನಾವು ನೀನಿನ ಈನೀನಾನಿಗೆ
ಬೇನೆ ಏನೋ? ಜಾಣೆ ನಾ
ಚಾರು ತಂತ್ರಿಯ ಚರಣ ಚರಣದ
ಘನಘನಿತ ಚತುರಸ್ವನಾ
ಹತವೊ ಹಿತವೊ ಆ ಅನಾಹತಾ
ಮಿತಿ ಮಿತಿಗೆ ಇತಿ ನನನನಾ
ಬೆನ್ನಿನಾನಿಕೆ ಜನನ ಜಾನಿಕೆ
ಮನನವೇ ಸಹಿತಸ್ತನಾ.
ಗೋವಿನ ಕೊಡುಗೆಯ ಹಡಗದ ಹುಡುಗಿ
ಬೆಡಗಿಲೆ ಬಂದಳು ನಡುನಡುಗಿ;
ಸಲಿಗೆಯ ಸುಲಿಗೆಯು ಬಯಕೆಯ ಒಲುಮೆ
ಬಯಲಿನ ನೆಯ್ಗೆಯ ಸಿರಿಯುಡುಗಿ;
ನಾಡಿಯ ನಡಿಗೆಯ ನಲುವಿನ ನಾಲಿಗೆ
ನೆನೆದಿರೆ ಸೋಲುವ ಸೊಲ್ಲಿನಲಿ;
ಮುಟ್ಟದ ಮಾಟದ ಹುಟ್ಟದ ಹುಟ್ಟಿಗೆ
ಜೇನಿನ ಥಳಿಮಳಿ ಸನಿಹ ಹನಿ;
ಬೆಚ್ಚಿದ ವೆಚ್ಚವು ಬಸುರಿನ ಮೊಳಕೆ
ಬಚ್ಚಿದ್ದಾವುದೊ ನಾ ತಿಳಿಯೆ
ಭೂತದ ಭಾವ ಉದ್ಬವ ಜಾವ
ಮೊಲೆ ಊಡಿಸುವಳು ಪ್ರತಿಭೆ ನವ.
ಚಿತ್ತೀಮಳಿ, ತತ್ತಿ ಹಾಕತ್ತಿತ್ತು ಸ್ವಾತಿಮುತ್ತೀನೊಳಗ
ಸತ್ತಿಯೋ ಮಗನ ಅಂತ ಕೂಗಿದರು
ಸಾವೀ ಮಗಳು, ಭಾವಿ ಮಗಳು ಕೂಡಿ
ಈ ಜಗ ಅಪ್ಪಾ ಅಮ್ಮನ ಮಗ
ಅಮ್ಮನೊಳಗ ಅಪ್ಪನ ಮೊಗ
ಅಪ್ಪನ ಕತ್ತಿಗೆ ಅಮ್ಮನ ನೊಗ
ನಾ ಅವರ ಕಂದ ಶ್ರೀ ಗುರುದತ್ತ ಅಂದ
'ನಾನು' 'ನೀನು' 'ಆನು' 'ತಾನು'
ನಾಕು ನಾಕೇ ತಂತಿ.
ಸೊಲ್ಲಿಸಿದರು ನಿಲ್ಲಿಸಿದರು
ಓಂ ದಂತಿ!
ಗಣನಾಯಕ ಮೈ ಮಾಯಕ
ಸೈ ಸಾಯಕ ಮಾಡಿ
ಗುರಿಯ ತುಂಬಿ ಕುರಿಯ ಕಣ್ಣು
ಧಾತು ಮಾತು ಕೂಡಿ.
Saturday, April 9, 2011
ದ.ರಾ.ಬೇಂದ್ರೆ
ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ - ದ.ರಾ.ಬೇಂದ್ರೆ
ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ. ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ.
ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯವರು. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಮ್.ಎ. ಮಾಡಿಕೊಂಡು ಕೆಲಕಾಲ (೧೯೪೪ - ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು.
ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ "ಕೃಷ್ಣ ಕುಮಾರಿ"-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.
ಕವಿ, ದಾರ್ಶನಿಕ ಬೇಂದ್ರೆ ಈ ಯುಗದ ಒಬ್ಬ ಮಹಾಕವಿ. ೧೯೮೧ರ ಅಕ್ಟೋಬರ್ನಲ್ಲಿ ತೀರಿಕೊಂಡ ಅವರು ಕವಿಗಳಿಗೆ, ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆ. ಎಲ್ಲಾ ಕಾಲಕ್ಕೂ ಬಾಳುವಂತಹ ಕವನಗಳನ್ನು ರಚಿಸಿದ ಕೀರ್ತಿ ಅವರದು.
ಸಾಹಿತ್ಯ
ಬೇಂದ್ರೆ ಸ್ಮಾರಕ, ಧಾರವಾಡ
ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ "ಪ್ರಭಾತ" ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬ೦ದರು. "ಗರಿ", "ಕಾಮಕಸ್ತೂರಿ", "ಸೂರ್ಯಪಾನ", "ನಾದಲೀಲೆ", "ನಾಕುತಂತಿ" ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸ್ವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ "ಗೆಳೆಯರ ಗುಂಪು" ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು. ಆಗಿನ್ನೂ ಸ್ವಾತಂತ್ರ್ಯ ಚಳುವಳಿ ಬಿಸಿ ಮುಟ್ಟಿದ್ದ ಸಮಯ. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು.
ಉತ್ತಮ ವಾಗ್ಮಿಗಳಾಗಿದ್ದ ಬೇಂದ್ರೆಯವರ ಉಪನ್ಯಾಸಗಳೆಂದರೆ ಜನರಿಗೆ ಹಿಗ್ಗು. ಅವರ ಮಾತೆಲ್ಲ ಕವಿತೆಗಳೋಪಾದಿಯಲ್ಲಿ ಹೊರಹೊಮ್ಮುತ್ತಿದ್ದವು. ಕನ್ನಡದಲ್ಲಿಯೇ ಅಲ್ಲದೆ ಮರಾಠಿ ಭಾಷೆಯಲ್ಲೂ ಬೇಂದ್ರೆ ಕೆಲವು ಕೃತಿಗಳನ್ನು ರಚಿಸಿದರು.
ಆಧ್ಯಾತ್ಮದ ವಿಷಯದಲ್ಲಿ ಅವರು ಒಲವು ಬೆಳೆಸಿಕೊಂಡಿದ್ದರು. ಅರವಿಂದರ ವಿಚಾರಗಳಲ್ಲಿ ಆಸಕ್ತಿ ತೋರಿದ ಅವರು ಅರವಿಂದರ ಕೃತಿಯನ್ನು ಇಂಗ್ಲೀಷಿನಿಂದ ಭಾಷಾಂತರ ಮಾಡಿಕೊಟ್ಟರು. ಜಾನಪದ ಧಾಟಿಯ ಅವರ ಎಷ್ಟೋ ಕವಿತೆಗಳನ್ನು ಗಾಯಕರು ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಕವಿತೆಗಳ ನಾದಮಾಧುರ್ಯ ಅಪಾರ.
krupe -http://kn.wikipedia.org/wiki/ದ.ರಾ.ಬೇಂದ್ರೆ
ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ. ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ.
ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯವರು. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಮ್.ಎ. ಮಾಡಿಕೊಂಡು ಕೆಲಕಾಲ (೧೯೪೪ - ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು.
ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ "ಕೃಷ್ಣ ಕುಮಾರಿ"-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.
ಕವಿ, ದಾರ್ಶನಿಕ ಬೇಂದ್ರೆ ಈ ಯುಗದ ಒಬ್ಬ ಮಹಾಕವಿ. ೧೯೮೧ರ ಅಕ್ಟೋಬರ್ನಲ್ಲಿ ತೀರಿಕೊಂಡ ಅವರು ಕವಿಗಳಿಗೆ, ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆ. ಎಲ್ಲಾ ಕಾಲಕ್ಕೂ ಬಾಳುವಂತಹ ಕವನಗಳನ್ನು ರಚಿಸಿದ ಕೀರ್ತಿ ಅವರದು.
ಸಾಹಿತ್ಯ
![]() |
| ಬೇಂದ್ರೆ ಸ್ಮಾರಕ |
ಬೇಂದ್ರೆ ಸ್ಮಾರಕ, ಧಾರವಾಡ
ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ "ಪ್ರಭಾತ" ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬ೦ದರು. "ಗರಿ", "ಕಾಮಕಸ್ತೂರಿ", "ಸೂರ್ಯಪಾನ", "ನಾದಲೀಲೆ", "ನಾಕುತಂತಿ" ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸ್ವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ "ಗೆಳೆಯರ ಗುಂಪು" ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು. ಆಗಿನ್ನೂ ಸ್ವಾತಂತ್ರ್ಯ ಚಳುವಳಿ ಬಿಸಿ ಮುಟ್ಟಿದ್ದ ಸಮಯ. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು.
ಉತ್ತಮ ವಾಗ್ಮಿಗಳಾಗಿದ್ದ ಬೇಂದ್ರೆಯವರ ಉಪನ್ಯಾಸಗಳೆಂದರೆ ಜನರಿಗೆ ಹಿಗ್ಗು. ಅವರ ಮಾತೆಲ್ಲ ಕವಿತೆಗಳೋಪಾದಿಯಲ್ಲಿ ಹೊರಹೊಮ್ಮುತ್ತಿದ್ದವು. ಕನ್ನಡದಲ್ಲಿಯೇ ಅಲ್ಲದೆ ಮರಾಠಿ ಭಾಷೆಯಲ್ಲೂ ಬೇಂದ್ರೆ ಕೆಲವು ಕೃತಿಗಳನ್ನು ರಚಿಸಿದರು.
ಆಧ್ಯಾತ್ಮದ ವಿಷಯದಲ್ಲಿ ಅವರು ಒಲವು ಬೆಳೆಸಿಕೊಂಡಿದ್ದರು. ಅರವಿಂದರ ವಿಚಾರಗಳಲ್ಲಿ ಆಸಕ್ತಿ ತೋರಿದ ಅವರು ಅರವಿಂದರ ಕೃತಿಯನ್ನು ಇಂಗ್ಲೀಷಿನಿಂದ ಭಾಷಾಂತರ ಮಾಡಿಕೊಟ್ಟರು. ಜಾನಪದ ಧಾಟಿಯ ಅವರ ಎಷ್ಟೋ ಕವಿತೆಗಳನ್ನು ಗಾಯಕರು ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಕವಿತೆಗಳ ನಾದಮಾಧುರ್ಯ ಅಪಾರ.
krupe -http://kn.wikipedia.org/wiki/ದ.ರಾ.ಬೇಂದ್ರೆ
Subscribe to:
Posts (Atom)
ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ
ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
-
Krupe : http://azsmarane.blogspot.in/2012/01/blog-post_21.html ಕನ್ನಡ ಪುಸ್ತಕ ಪ್ರೀತಿಯುಳ್ಳ ಮಿತ್ರರೆಲ್ಲರಿಗೂ... ಇಲ್ಲಿದೆ ಕನ್ನಡ ಕಾದಂಬರಿ ಹಾ...




