Showing posts with label ನಾಕು ತಂತಿ. Show all posts
Showing posts with label ನಾಕು ತಂತಿ. Show all posts

Saturday, April 2, 2016

ನಾಕು ತಂತಿ - - ದ. ರಾ. ಬೇಂದ್ರೆ

..

ಆವು ಈವಿನ ನಾವು ನೀವಿಗೆ ಆನು ತಾನಾದ ತನ ನನಾ
ನಾನು ನೀನಿನ ಈನಿ ನಾನಿಗೆ ಬೇನೆ ಏನೋ? ಜಾಣೆ ನಾ
ಚಾರು ತಂತ್ರಿಯ ಚರಣ ಚರಣದ ಘನಘನಿತ ಚತುರಸ್ವನಾ
ಹತವೊ ಹಿತವೋ ಆ ಅನಾಹತಾ ಮಿತಿಮಿತಿಗೆ ಇತಿ ನನ ನನಾ
ಬೆನ್ನಿನಾನಿಕೆ ಜನನ ಜಾನಿಕೆ ಮನನವೇ ಸಹಿತಸ್ತನಾ

ಗೋವಿನ ಕೊಡುಗೆಯ ಹದಗದ ಹುಡಿಗಿ ಬೆಡಗಿಲೆ ಬಂದಳು ನಡುನಡುಗಿ
ಸಲಿಗೆಯ ಸುಲಿಗೆಯ ಬಯಕೆಯ ಒಲುಮೆ ಬಯಲಿನ ನೆಯ್ಯಾಯ ಸಿರಿಯುಡುಗಿ
ನಾಡಿಯ ನಡಿಗೆಯ ನಲುವಿನ ನಾಲಿಗೆ ನೆನೆದಿರೆ ಸೋಲುವ ಸೊಲ್ಲಿನಲಿ
ಮುಟ್ಟದ ಮಾಟದ ಹುಟ್ಟದ ಹುಟ್ಟಿಗೆ ಜೇನಿನ ಥಳಿಮಳಿ ಸನಿಹ ಹನಿ
ಬೆಚ್ಚಿದ ವೆಚ್ಚವು ಬಸರಿನ ಮೊಳಕೆ ಬಚ್ಚಿದ್ಯಾವುದೋ ನಾ ತಿಳಿಯೆ
ಭೂತದ ಭಾವ ಉದ್ಬವ ಜಾವ ಮೊಲೆ ಊಡಿಸುವಳು ಪ್ರತಿಭೆ ನವ

ಚಿತ್ತಿಮಳಿ ತತ್ತಿ ಹಾಕತಿತ್ತು ಸ್ವಾತಿ ಮುತ್ತಿನೊಳಗ
ಸತ್ತ್ಯೋ ಮಗನ ಅಂತ ಕೂಗಿದರು ಸಾವೀ ಮಗಳು ಭಾವಿ ಮಗಳು ಕೂಡಿ
ಈ ಜಗ ಅಪ್ಯಾ ಅಮ್ಮನ ಮಗ ಅಮ್ಮನೊಳಗ ಅಪ್ಯನ ಮೊಗ
ಅಪ್ಯನ ಕತ್ತಿಗೆ ಅಮ್ಮನ ನೊಗ ನಾ ಅವರ ಕಂದ ಶ್ರೀ ಗುರುದತ್ತ ಅಂದ

"ನಾನು" "ನೀನು" "ಆನು" "ತಾನು" ನಾಕು ನಾಕೆ ತಂತಿ
ಸೊಲ್ಲಿಸಿದರು ನಿಲ್ಲಿಸಿದರು ಓಂ ಓಂ ದಂತಿ
ಗಣನಾಯಕ ಮೈ ಮಾಯಕ ಸಾಯಿ ಸಾಯಕ ಮಾಡಿ
ಗುರಿಯ ತುಂಬಿ ಕುರಿಯ ಕಣ್ಣು ಧಾತು ಮಾತು ಕೂಡಿ


ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...