ಹೇಳಿ ಹೋಗು ಕಾರಣ ಹೋಗುವ ಮೊದಲು
ನನ್ನ ಬಾಳಿನಿಂದ ದೂರಾಗುವ ಮೊದಲು
ಒಲವೆಂಬ ಹಣತೆ ಎದೆಯಲ್ಲಿ ಬೆಳಗಿ
ಬೆಳಕಾದೆ ಬಾಳಿಗೆ
ಇಂದೇಕೆ ಹೀಗೆ ಬೆಳಕನ್ನು ತೊರೆದು
ನೀ ಸರಿದೆ ನೆರಳಿಗೆ ?
ಇಂದ್ಯಾವ ಬಂಧ ತೊಡರಿದೆ
ನಿನ್ನ ಕಾಲಿಗೆ ?
ಸುಡುಬೆಂಕಿ ಬೆಳಕು ಉಳಿಯಿತೆ
ನನ್ನ ಪಾಲಿಗೆ ?
ಸವಿಭಾವಗಳಿಗೆ ನೀ ನಾದ ನೀಡಿ
ಜೊತೆಗೂಡಿ ಹಾಡಿದೆ
ಇಂದ್ಯಾವ ಅಳಲು ? ಸೆರೆಯುಬ್ಬಿ ಕೊರಳು
ನೀ ಮೌನ ತಾಳಿದೆ
ನೀ ನೆಟ್ಟು ಬೆಳೆಸಿದ ಈ ಮರ
ಫಲ ತೊಟ್ಟ ವೇಳೆಗೆ
ಹೀಗೇಕೆ ಮುರಿದು ಉರುಳಿದೆ
ಯಾವ ದಾಳಿಗೆ ?
-- ಬಿ.ಆರ್. ಲಕ್ಷ್ಮಣರಾವ್
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Showing posts with label ಬಿ.ಆರ್. ಲಕ್ಷ್ಮಣರಾವ್. Show all posts
Showing posts with label ಬಿ.ಆರ್. ಲಕ್ಷ್ಮಣರಾವ್. Show all posts
Thursday, June 16, 2011
ಅಮ್ಮ, ನಿನ್ನ ಎದೆಯಾಳದಲ್ಲಿ
ಅಮ್ಮ, ನಿನ್ನ ಎದೆಯಾಳದಲ್ಲಿ
ಗಾಳಕ್ಕೆ ಸಿಕ್ಕ ಮೀನು
ಮಿಡುಕಾಡುತಿರುವೆ ನಾನು ....
ಕಡಿಯಲೋಲ್ಲೆ ನೀ ಕರುಳಬಳ್ಳಿ
ಒಲವೂಡುತಿರುವ ತಾಯೆ,
ಬಿಡದ ಬುವಿಯ ಮಾಯೆ ....
ನಿನ್ನ ರಕ್ಷೆಗೂಡಲ್ಲಿ ಬೆಚ್ಚಗೆ
ಆಡಗಲಿ ಎಷ್ಟು ದಿನ ?
ದೂಡು ಹೊರಗೆ ನನ್ನ ...
ಓಟ ಕಲಿವೆ, ಒಳನೋಟ ಕಲಿವೆ, ನಾ
ಕಲಿವೆ ಊರ್ಧ್ವ ಗಮನ,
ಓ ಆಗಾಧ ಗಗನ ...
ಮೇಲೆ ಹಾರಿ, ನಿನ್ನ ಸೆಳೆತ ಮೀರಿ,
ನಿರ್ಭಾರಸ್ಥಿತಿಗೆ ತಲುಪಿ
ಬ್ರಹ್ಮಾಂಡವನ್ನೇ ಬೆದಕಿ
ಇಂಧನ ತೀರಲು, ಬಂದೇ ಬರುವೆನು
ಮತ್ತೆ ನಿನ್ನ ತೊಡೆಗೆ
ಮೂರ್ತ ಪ್ರೇಮದೆಡೆಗೆ...
Subscribe to:
Posts (Atom)
ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ
ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
-
Krupe : http://azsmarane.blogspot.in/2012/01/blog-post_21.html ಕನ್ನಡ ಪುಸ್ತಕ ಪ್ರೀತಿಯುಳ್ಳ ಮಿತ್ರರೆಲ್ಲರಿಗೂ... ಇಲ್ಲಿದೆ ಕನ್ನಡ ಕಾದಂಬರಿ ಹಾ...