Showing posts with label ಸಂಗ್ರಹ. Show all posts
Showing posts with label ಸಂಗ್ರಹ. Show all posts

Tuesday, November 4, 2025

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ


ಗಳಗನಾಥರು


ಗಳಗನಾಥರು

ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರಸ್ವತಿಯನ್ನು ಹೊತ್ತು ತಂದಿರುವೆ.  ಲಕ್ಷ್ಮಿಯೊಂದಿಗೆ ಸರಸ್ವತಿಯನ್ನು ಮನೆ ತುಂಬಿಸಿಕೊಳ್ಳಿ ಎಂದು ಹೇಳುತ್ತಾ, ರಾತ್ರಿ ದೇವಸ್ಥಾನದ ಅಂಗಳದಲ್ಲಿ ಮಲಗಿ, ಮಾರನೆಯ ದಿನ ಊರ ಕೆರೆ ಕಟ್ಟೆಗಳಲ್ಲಿ ಸ್ನಾನ ಮಾಡಿ, ಬೆಲ್ಲ ಕೊಬರಿ ತಿಂದುಕೊಂಡು ಊರೂರಿಗೆ ತಲೆಯ ಮೇಲೆ ಪುಸ್ತಕ ಹೊತ್ತು ಕನ್ನಡ ಸಾರಸ್ವತ ಲೋಕವನ್ನು ಮನೆ ಮನಗಳಿಗೆ ಹಂಚಿದವರು ನಮ್ಮ ಗಳಗನಾಥರು.  ಅವರು ಸತ್ತಮೇಲೆ ಅಂತ್ಯಸಂಸ್ಕಾರ ಮಾಡಲೂ ಇವರ ಮನೆಯವರ ಬಳಿ ಹಣವಿರಲಿಲ್ಲ. ಪುಸ್ತಕಗಳಿಂದಲೇ ಇವರ ಅಂತ್ಯಸಂಸ್ಕಾರ  ಮಾಡಬೇಕಷ್ಟೇಯೆಂದು ಅವರ ಮನೆಯವರು ಅ ಸಂದರ್ಭದಲ್ಲಿ ನೊಂದುಕೊಂಡು ನುಡಿದಿದ್ದರು.



ವಿ.ಸೀತಾರಾಮಯ್ಯ

ಇವರು ದಿನಾ ಬೆಳಿಗ್ಗೆ ಹೊಟೇಲಿನಿಂದ ಹತ್ತು ಇಡ್ಲಿ ತರಿಸುತ್ತಿದ್ದರಂತೆ.ಅದರಲ್ಲಿ ಒಂದು ಇಡ್ಲಿಯನ್ನಷ್ಟೇ ತಾವು ತಿಂದು ಉಳಿದ ಒಂಬತ್ತು ಇಡ್ಲಿಯನ್ನು ಪ್ರಾಣಿ ಪಕ್ಷಿಗಳಿಗೆ ತಿನ್ನಿಸುತ್ತಿದ್ದರು.  ಇದನ್ನು ಅವರು ತಮ್ಮ ಬದುಕಿನುದ್ದಕ್ಕೂ ದಿನಚರಿಯಂತೆ ಪಾಲಿಸುತ್ತಿದ್ದರು.  ತಾವೂ ಬದುಕುತ್ತಾ ಎಲ್ಲವನ್ನೂ ಬದುಕಿಸಬೇಕೆಂಬ ಅವರ ನಿರ್ಮಲ ಹೃದಯ ನಮಗೆ ದಾರಿದೀಪ. 


ದ.ರಾ.ಬೇಂದ್ರೆ:-🙏🏻 ಇವರೊಮ್ಮೆ ದಾರಿಯಲ್ಲಿ ನಡೆದುಕೊಂಡು ಬರಬೇಕಾದರೆ ಚಪ್ಪಲಿ ಕಿತ್ತುಹೋಗುತ್ತದೆ.  ಚಪ್ಪಲಿಯನ್ನು ಕೈಯಲ್ಲಿ ಹಿಡಿದು ಸ್ವಲ್ಪ ದೂರ ನಡೆದುಕೊಂಡು ಬಂದಮೇಲೆ, ದಾರಿಪಕ್ಕ ಕೂತಿದ್ದ ಚಮ್ಮಾರ ಸಿಗುತ್ತಾನೆ.  ಬಿರುಬಿಸಿಲು ಆಗಿದ್ದರಿಂದ ಬೇಂದ್ರೆ ಅಜ್ಜ ಛತ್ರಿಬಿಡಿಸಿಕೊಂಡಿದ್ದರು.  ಚಮ್ಮಾರ ತಮ್ಮ  ಚಪ್ಪಲಿಯನ್ನು ರಿಪೇರಿ ಮಾಡುವಾಗ ಅವರು ತಮ್ಮ ಛತ್ರಿಯನ್ನು ಬಿಸಿಲಲ್ಲಿದ್ದ ಚಮ್ಮಾರನಿಗೆ ಹಿಡಿದಿದ್ದರು..! ಇದರಿಂದ ಮುಜುಗರಗೊಂಡ ಚಮ್ಮಾರ, ನಾನು ದಿನಾ ಬಿಸಿಲಲ್ಲೇ ಕೂತು ಕೆಲಸ ಮಾಡುವವನು ನನಗಿದೆಲ್ಲ ಬೇಡ ಅಂದಿದ್ದಕ್ಜೆ ಬೇಂದ್ರೆ ಅಜ್ಜ ನೀನಿಗ ನಿನ್ನ ಕೆಲಸ ಮಾಡುತ್ತಿದ್ದೀಯ, ನಾನೀಗ ನನ್ನ ಕೆಲಸ ಮಾಡುತ್ತಿದ್ದೇನೆ ಅಂದರಂತೆ...!.   ಸರ್ವ ಸಮತಾ ಭಾವದ ವ್ಯಕ್ತಿತ್ವ ಅವರದಾಗಿತ್ತು. 



ಡಿವಿಜಿ:-🙏🏻



ಡಿವಿಜಿಯವರು ತಮ್ಮ ಹೆಂಡತಿಯನ್ನು ಆಪ್ತರೊಬ್ಬರ ಮದುವೆಗೆ ಹೋಗಲು ಹೇಳಿ ತಾವು ಬೇರೊಂದು ಕಾರ್ಯಕ್ರಮಕ್ಕೆ ಹೋಗಿದ್ದರು.ಕಾರ್ಯಕ್ರಮ ಮುಗಿಸಿ ಮನೆಗೆ ಬಂದಾಗ ಹೆಂಡತಿ ಮನೆಯಲ್ಲಿರೋದನ್ನು ನೋಡಿ ಸಿಟ್ಟಾದ ಡಿವಿಜಿ, ಮದುವೆಗೆ ಯಾಕೆ ಹೋಗಲಿಲ್ಲವೆಂದು ಹೆಂಡತಿಯನ್ನು ಪ್ರಶ್ನಿಸಿದರು.  ಅವರ ಪತ್ನಿ, ಮಗನನ್ನು ಕಳಿಸಿದ್ದೇನೆ ಅಂದರು.  ಡಿವಿಜಿ ಬಹಳ ಆತ್ಮೀಯರ ಮದುವೆ ಎಂದು ಹೇಳಿದ್ದೆನ್ನಲ್ಲ ನೀನೇ ಹೋಗಬೇಕಿತ್ತು ಎಂದು ಮತ್ತೊಮ್ಮೆ ಏರಿದ ಧ್ವನಿಯಲ್ಲಿ ಹೇಳಿದರು.  ಆಗ ಅವರ ಪತ್ನಿ,'ನನ್ನತ್ರ ಇರೋದು ಒಂದೇ ಸೀರೆ.  ಅದು ಕೂಡ ಅಲ್ಲಿ ಇಲ್ಲಿ ಹರಿದಿದೆ.ಅದನ್ನು ಉಟ್ಕೊಂಡು ಮದ್ವೆಗೆ ಹೋದ್ರೆ ನನ್ ಯಜಮಾನ್ರ ಮಾನ ಹೋಗುತ್ತೆ. ಅದ್ಕೆ ಮಗನನ್ನು ಕಳಿಸಿದೆ ಅಂದರಂತೆ.  ಈ ಮಾತನ್ನು ಕೇಳಿದ ಡಿವಿಜಿಯವರಿಗೆ ಮರು ಮಾತನಾಡಲು ಅವಕಾಶವೇ ಇರಲಿಲ್ಲ.

ತಿರುಕ ನೀನು ಈ ಬ್ರಹ್ಮಪುರಿಯೊಳಗೆ, 

ಸಿರಿಯಿದ್ದೊಡೇನು, ಪರಿಜನರಿದ್ದೋಡೇನು ? ಎನ್ನುವ ಮನಸ್ಸು ಅವರದಾಗಿತ್ತು.  


ಮಾಸ್ತಿ:-🙏🏻 ಜಿಲ್ಲಾಧಿಕಾರಿಯಾಗಿದ್ದ ಮಾಸ್ತಿಯವರು ಒಮ್ಮೆ ಊರಭೇಟಿಗೆ ತೆರಳಿರುತ್ತಾರೆ.  ದಾರಿ ಮಧ್ಯೆ ಬಾಯಾರಿಕೆ ಆದ್ದರಿಂದ ಸಾರ್ವಜನಿಕ ಬಾವಿಯಿಂದ ನೀರು ಸೇದುತ್ತಿದ್ದ ವ್ಯಕ್ತಿಯ ಬಳಿ ಒಂದು ಬೊಗಸೆ ಕುಡಿಯಲು ನೀರು ಕೇಳುತ್ತಾರೆ.  ಅವನು ನೀರನ್ನು ಸೇದಿ ಮಾಸ್ತಿಯವರಿಗೆ ಕೊಡುವ ಬದಲು ಪಕ್ಕದಲ್ಲಿರುವ ಟ್ಯಾಂಕಿಗೆ ಸುರಿಯುತ್ತಾನೆ.ಮಾಸ್ತಿಯವರಿಗೆ ಅವನು ನೀರು ಕೊಡದ್ದು ನೋಡಿ ಮುಜುಗರವಾಗುತ್ತದೆ.  ಮತ್ತೆ ಅವನು ಕೊಡವನ್ನು ಬಾವಿಗಿಳಿಸಿ ನೀರು ಸೇದುತ್ತಾನೆ.  ಈ ಬಾರಿ ಮಾಸ್ತಿಯವರನ್ನು ಕರೆದು ಬೊಗಸೆ ಹಿಡಿಯುವಂತೆ ಹೇಳಿ ನೀರು ಸುರಿಯುತ್ತಾನೆ.  ಮಾಸ್ತಿಯವರು ಆಶ್ಚರ್ಯದಿಂದ ಕೇಳುತ್ತಾರೆ ಆಗಲೆ ಯಾಕೆ ನೀನು ನನಗೆ ನೀರು ಕೊಡಲಿಲ್ಲ ಎಂದು.  ಅದಕ್ಕವನು ಸ್ವಾಮಿ ಈ ಬಾವಿ ತೋಡಿಸುವ ಮೊದಲು ಡಿಸಿಯವರು, ಯಾರೇ ನೀರು ಸೇದಿದರು ಮೊದಲ ಕೊಡವನ್ನು ಪಕ್ಕದಲ್ಲಿರುವ ಟ್ಯಾಂಕಿಗೆ ಸುರಿಯಬೇಕು, ಅ ನೀರು ಪ್ರಾಣಿಪಕ್ಷಿಗಳಿಗೆ ಕುಡಿಯೋಕೆ ಉಪಯೋಗವಾಗಬೇಕು ಎಂದಿದ್ದರು.ಹೀಗಾಗಿ ಈ ಊರಿನವರು ಅವರ ಅ ಮಾತನ್ನು ಪಾಲಿಸುತ್ತಿದ್ದೇವೆ ಎಂದ.  ಅಂದಹಾಗೆ ಹಾಗೆ ಆದೇಶ ಮಾಡಿದ್ದ ಡಿಸಿ ಮಾಸ್ತಿಯವರೇ ಆಗಿದ್ದರು...!  ಊರಿನವರ ಪ್ರಾಮಾಣಿಕತೆಯನ್ನು ನೋಡಿ ಮಾಸ್ತಿಯವರ ಕಣ್ಣುಗಳು ಒದ್ದೆಯಾಗಿದ್ದವು..!

ಸ್ವಾರ್ಥವಿಲ್ಲದಾ ಬದುಕು ಸರ್ವಕಾಲಕ್ಕೂ ಶ್ರೇಷ್ಠ ಎಂಬುದನ್ನು ತೋರಿಸಿಕೊಟ್ಟವರಿವರು.  


ದೇವುಡು ನರಸಿಂಹಶಾಸ್ತ್ರಿ

ದೇವುಡು ನರಸಿಂಹಶಾಸ್ತ್ರಿ


ಮಯೂರ ವರ್ಮನ ಬಗ್ಗೆ ಬೆಳಕು ಚೆಲ್ಲಿ ಐತಿಹಾಸಿಕ ಕಾದಂಬರ ಬರೆದರಿವರು.  ಅವರ ಕಾಲು ಗ್ಯಾಂಗರೀನ್ ಗೆ ಒಳಗಾದಾಗ ಅವರನ್ನು ಯಾವುದೋ ಒಂದು ಸಮಾರಂಭಕ್ಕೆ ನಾಲ್ಕು ಜನ ಎತ್ತಿಕೊಂಡು ಹೋಗುವಾಗ *ನೋಡ್ರಯಯ ನಾನೆಷ್ಟು ಅದೃಷ್ಠವಂತ, ಎಲ್ಲರೂ ಸತ್ತಾಗ ಅವರನ್ನು ನಾಲ್ಕು ಜನ ಹೊತ್ತೊಯ್ದರೆ ನಾನು ಬದುಕಿದ್ದಾಗಲೇ ನಾಲ್ಕು ಜನರ ಮೇಲೆ ಹೋಗುವ ಅದೃಷ್ಠಶಾಲಿ ಎಂದು ವಾಸ್ತವತೆಯನ್ನು ಅರುಹಿದ್ದವರು.  ದೇವರು ನನ್ನ ಕಾಲು ಕಿತ್ತುಕೊಂಡ ಆದರೆ ಕನ್ನಡ ಕಟ್ಟುವ ನನ್ನ ಕೈಂಕರ್ಯವನ್ನ ಅವನು ಕಿತ್ತುಕೊಳ್ಳಲಾರ ಎಂದು ಅಭಿಮಾನದಿಂದ ಹೇಳುತ್ತಿದ್ದವರು.  

ಇಂಥಃ ಮಹನೀಯರಿಂದಲೇ ಕನ್ನಡ ಉಳಿದು ಬೆಳಿದಿದ್ದು.  


ಟಿ ಎಸ್ ವೆಂಕಣ್ಣಯ್ಯ

ಟಿ ಎಸ್ ವೆಂಕಣ್ಣಯ್ಯ


ಮನೆಯಲ್ಲಿಯೇ ಕವಿಗೋಷ್ಠಿ ನಡೆಸಿ ಕನ್ನಡ ಕಟ್ಟಿದವರು.  ಒಮ್ಮೆ ಹೀಗೆ ಕವಿಗೋಷ್ಠಿ ಮನೆಯ ಮಹಡಿಯಲ್ಲಿ ನಡೆಯುತ್ತಿತ್ತು.  ಅವರ ಪುತ್ರ ಮರಣಿಸಿದ ಸುದ್ದಿಯನ್ನು ಅವರ ಶ್ರೀಮತಿ ಅವರ ಕಿವಿಯಲ್ಲಿ ಉಸುರಿಸಿದರು.   ಕವಿಗೋಷ್ಠಿಗೆ ಧಕ್ಕೆ ಬರಬಾರದೆಂದು ಮನಸ್ಸನ್ನು ಕಲ್ಲು ಮಾಡಿಕಂಡು ಕವಿಗೋಷ್ಠಿ ನಡೆಸಿ,  ಅದು ಮುಗಿದ ನಂತರ ಅವರ ಕಣ್ಣಾಲೆಗಳಲ್ಲಿ ಕಣ್ಣೀರು ಧುಮ್ಇಕ್ಕಿತ್ತು.   ಆಗ ಇತರರು ಇದಕ್ಕೆ ಕಾರಣ ಕೇಳಿದಾಗ ನಡೆದ ವಿಷಯವನ್ನು ಸಭೆಗೆ ಆಗ ತಿಳಿಸಿದರು.   ಆಗ ಅವರೆಲ್ಲರೂ ಹೀಗೇಕೆ ಮಾಡಿದಿರಿ ? ಎಂದು ಪ್ರಶ್ನಿಸಿದಾಗ ಕನ್ನಡ ಕಟ್ಟುವ ಕೆಲಸ ನಿಲ್ಲಬಾರದೆಂದೂ ಈ ರೀತಿ ಮಾಡಿದೆ ಎಂದು ಎಲ್ಲಕ್ಕೂ ಕನ್ನಡವೇ ಮಿಗಿಲು ಎಂದು ತೋರಿಸಿದ ಮಹಾತ್ಮರೀತ.  

ಕನ್ನಡ ಉಳಿದಿದ್ದೇ ಇಂಥಹವರ ಕೊಡುಗೆಯಿಂದ 


ಈ ಮೇರು ಸಾಹಿತಿಗಳು ನಮ್ಮ ನಾಡಿಗೆ ಆಸ್ತಿ |  ಸಿರಿಗನ್ನಡಂ ಗೆಲ್ಗೆ  

Krupe : Whatsapp / ಸಂಗ್ರಹ

Monday, December 11, 2023

ಆನೆಗಳ ಸಭೆಯ ತೀರ್ಮಾನದಂತೆ ಮುಖ್ಯಮಂತ್ರಿಗಳಿಗೆ ಬರೆದ ಪತ್ರ. - ಗುರುಮೂರ್ತಿ ಜೋಗಿಬೈಲು.

ಗೆ,

ಮಾನ್ಯ  ಮುಖ್ಯಮಂತ್ರಿಗಳು

ಕರ್ನಾಟಕ   ಸರ್ಕಾರ.

 ಮಾನ್ಯ   ಅರಣ್ಯ  ಸಚಿವರು

ಕರ್ನಾಟಕ  ಸರ್ಕಾರ .

ಮತ್ತು

ಹಿರಿಯ ಅರಣ್ಯ   ಅಧಿಕಾರಿಗಳು.

ಕರ್ನಾಟಕ   ಸರ್ಕಾರ .

 

ಯಿಂದಾ,

ಕಾಡಿನ   ಆನೆಗಳು.

 

ಮಾನ್ಯರೆ,

ಇತ್ತೀಚೆಗೆ   ನಮ್ಮ   ಗುಂಪಿನ  ಆನೆಯೊಂದನ್ನು   ಸೆರೆ  ಹಿಡಿಯುವ   ಕಾರ್ಯಾಚರಣೆಯಲ್ಲಿ  ಆನೆ  ಮರಣಿಸಿರುವುದು   ತಮ್ಮ  ಗಮನಕ್ಕೆ  ಬಂದಿದೆ   ಎಂದು  ಭಾವಿಸುತ್ತೇವೆ.   ಅಂತಹುದೇ   ಕಾರ್ಯಾಚರಣೆಯಲ್ಲಿ  ಮನುಷ್ಯರು   ಸೆರೆ  ಹಿಡಿದು   ಹಿಂಸಿಸಿ   ಸಾಕಿಕೊಂಡು  "ಅರ್ಜುನ"   ಎಂದು ಹೆಸರಿಟ್ಟುಕೊಂಡಿದ್ದ  ಆನೆಯೂ  ಮರಣಿಸಿದೆಯಷ್ಟೆ.

ಅದಕ್ಕಾಗಿ   ತಾವು ಸಂತಾಪ  ವ್ಯಕ್ತಪಡಿಸಿರುವ   ಸಂಗತಿ ತಿಳಿಯಿತು.  ತಮ್ಮ  ಸೂಕ್ಷ್ಮತೆಗೆ  ಅಭಾರಿಗಳಾಗಿದ್ದೇವೆ.

 ಮನುಷ್ಯ  ಲೋಕದ ತಾರತಮ್ಯದ ರೂಡಿಯಂತೆ  ಎರಡೂ  ಆನೆಗಳ   ಸಾವಿನ  ಬಗ್ಗೆಯೂ  ತಾರತಮ್ಯ ದಿಂದ  ಪ್ರತಿಕ್ರಿಯಿಸಿರುವುದು   ವಿಷಾದನೀಯ.

 ಕಾಡಿನ  ಆನೆಗಳಾದ   ನಮ್ಮ  ಬದುಕು   ಇಂದು   ಅತ್ಯಂತ  ಸಂಕಷ್ಟದಲ್ಲಿದೆ.   ನಾವು  ಒಡಾಡಿಕೊಂಡಿದ್ದ  ಬಹಳಷ್ಟು   ಪ್ರದೇಶಗಳು   ಕೃಷಿಗಾಗಿ,   ರಸ್ತೆಗಳ   ನಿರ್ಮಾಣಕ್ಕಾಗಿ,   ವಿವಿಧ   ಅಭಿವೃದ್ಧಿ  ಹೆಸರಿನ  ಯೋಜನೆಗಳಿಗಾಗಿ  ಬಳಸಲ್ಪಟ್ಟಿವೆ.   ನಾವು  ಓಡಾಡುತ್ತಿದ್ದ

ದಾರಿಗಳಲ್ಲಿ   ಬೇಲಿಗಳು   ನಿರ್ಮಾಣವಾಗಿವೆ.  ನಮ್ಮ  ಕಾಡಿನ  ಪ್ರದೇಶವು   ನಿರಂತರವಾಗಿ  ಕಡಿಮೆಯಾಗುತ್ತಿರುವುದರಿಂದ    ನಮ್ಮ   ಗುಂಪುಗಳು   ಅನಿವಾರ್ಯವಾಗಿ   ಆಹಾರ ಹುಡುಕುತ್ತಾ   ಕೃಷಿ  ಪ್ರದೇಶಗಳಿಗೆ  ಬರುವಂತಾಗುತ್ತಿದೆ.   ಇದು   ಅಲ್ಲಿ ವಾಸಮಾಡುತ್ತಿರುವ  ಮನುಷ್ಯರು   ಮತ್ತು  ನಮ್ಮ  ನಡುವಿನ ಸಂಘರ್ಷಕ್ಕೆ   ಕಾರಣವಾಗುತ್ತಿದೆ.  ಇದು  ನಮ್ಮವರ  ಮತ್ತು   ಮನುಷ್ಯರ  ಜೀವನಷ್ಟಕ್ಕೆ   ಕಾರಣವಾಗುತ್ತಿದೆ.

 

ಮನುಷ್ಯರಂತೆಯೇನಾವು  ಆನೆಗಳೂ  ಮತ್ತು   ಎಲ್ಲಾ  ಜೀವಿಗಳಿಗೂ  ಕೂಡ    ಭೂಮಿಯ ಮೇಲೆ ಬದುಕುವ  ಹಕ್ಕು   ಇದೆ ಎಂಬುದನ್ನು  ತಾವುಗಳು   ಒಪ್ಪುತ್ತೀರಿ    ಎಂದು   ಭಾವಿಸುತ್ತೇವೆ.

ಅಂತೆಯೇ   ಕಾಡಿನಲ್ಲಿ  ಸ್ವಾತಂತ್ರ್ಯವಾಗಿ  ಬದುಕಿರುವ   ನಮ್ಮನ್ನು  ಬಲಾತ್ಕಾರವಾಗಿ  ಬಂಧಿಸಿ    ಹಿಂಸಿಸಿ   ಪಳಗಿಸಿಕೊಂಡು  ನಿಮ್ಮ   ಕೆಲಸಗಳಿಗಾಗಿ  ಆಡಂಬರದ  ಮೆರವಣಿಗೆಗಳಿಗಾಗಿ   ಬಳಸಿಕೊಳ್ಳುವುದು   ನಮ್ಮ   ಬದುಕುವ   ಹಕ್ಕಿನ  ಸ್ಪಷ್ಟ   ಉಲ್ಲಂಗನೆಯಾಗಿದೆ.

 

  ಎಲ್ಲಾ   ಸಮಸ್ಯೆಗಳಿಗೂ   ಶಾಶ್ವತ   ಪರಿಹಾರ   ರೂಪಿಸಬೇಕೆಂದು  ಮೂಲಕ   ವಿನಂತಿಸುತ್ತಿದ್ದೇವೆ.

 

ನಮ್ಮ   ಹಕ್ಕೊತ್ತಾಯಗಳು. 

*  ಕಾಡಿನಲ್ಲಿ   ನಾವು ವಾಸಿಸುತ್ತಿರುವ   ಪ್ರದೇಶಗಳನ್ನು  ನಮಗಾಗಿ  ಮತ್ತು ಇತರ   ಕಾಡಿನ ಜೀವಿಗಳಿಗಾಗಿ  ಬಿಟ್ಟುಕೊಡಬೇಕು. 

*ನಾವು  ವಾಸಿಸುವ   ಮತ್ತು  ಆಹಾರಕ್ಕಾಗಿ  ಓಡಾಡುವ    ದಾರಿಗಳನ್ನು   ಗುರುತಿಸಿ,      ಪ್ರದೇಶದಲ್ಲಿ   ಕೃಷಿ   ಮಾಡಿಕೊಂಡು   ಬದುಕುತ್ತಿರುವ  ರೈತ    ಜಮೀನುಗಳನ್ನು    ಸೂಕ್ತ   ಬೆಲೆ  ನೀಡಿ   ಕೊಂಡುಕೊಂಡು  ಕಾಡಿಗೆ  ಸೇರಿಸಬೇಕು.

 *ನಾವು   ವಾಸಿಸುತ್ತಿರುವ   ಪ್ರದೇಶದಲ್ಲಿ   ಯಾವುದೇ  ಅಭಿವೃದ್ಧಿ  ಯೋಜನೆಗಳನ್ನು   ಕೈಗೊಳ್ಳುವುದನ್ನು   ನಿಲ್ಲಿಸಬೇಕು.

 *   ನಾವು  ವಾಸಿಸುವ   ಆಸುಪಾಸಿನಲ್ಲಿ  ಇರುವ   ಜನರಿಗೂ   ನಮಗೂ  ಸಂಘರ್ಷ ವಾಗದಂತೆ  ಸೂಕ್ತ   ಮುನ್ನೆಚ್ಚರಿಕೆ   ಕ್ರಮಗಳನ್ನು  ಕೈಗೊಳ್ಳಬೇಕು

*  ನಮ್ಮನ್ನು  ಸೆರೆಹಿಡಿದು   ಹಿಂಸಿಸಿ   ಪಳಗಿಸುವ  ಪರಿಪಾಟವನ್ನು  ಸೂಕ್ತ  ಕಾನೂನು   ರೂಪಿಸುವ   ಮೂಲಕ  ತಡೆಗಟ್ಟಿ    ನಮ್ಮ   ಬದುಕುವ   ಹಕ್ಕನ್ನು   ಖಾತರಿಗೊಳಿಸಬೇಕು

*ನಮ್ಮನ್ನು   ಕೆಲಸಕ್ಕಾಗಿ,   ಮೆರವಣಿಗೆಗಳಿಗಾಗಿ   ಮತ್ತು   ಮನರಂಜನೆಗಾಗಿ   ಬಳಸುವುದನ್ನು   ನಿಷೇಧಿಸಬೇಕು.

 ಪರಿಸರ  ಪ್ರವಾಸೋದ್ಯಮದ  ಹೆಸರಲ್ಲಿ  ನಮ್ಮ   ಪ್ರದೇಶಕ್ಕೆ  ಬಂದು   ತೊಂದರೆ ನೀಡುವುದನ್ನು  ನಿಲ್ಲಿಸಬೇಕು.   ನಮಗೂ  ಸ್ವತಂತ್ರ್ಯ ವಾಗಿ   ಬದುಕುವ  ಹಕ್ಕು   ಇದೆ   ಎಂಬುದನ್ನ   ಗೌರವಿಸಬೇಕು

  ನಮ್ಮ      ಎಲ್ಲಾ   ಹಕ್ಕೊತ್ತಾಯಗಳನ್ನು    ಪರಿಗಣಿಸಿ    ಸೂಕ್ತ   ಕ್ರಮ  ಕೈಗೊಳ್ಳಬೇಕೆಂದು      ಮೂಲಕ  ಒತ್ತಾಯಿಸುತ್ತಿದ್ದೇವೆ.

 

ಇಂತಿ   ತಮ್ಮ  ಸಹಜೀವಿಗಳಾದ

ಕಾಡಿನ  ಆನೆಗಳು.

 

(   ನಮ್ಮ   ಮನವಿಯನ್ನು  ಸರ್ಕಾರಕ್ಕೂ   ಮತ್ತು   ನಮ್ಮ   ಪರವಾಗಿ ಚಿಂತಿಸುವವರ  ಗಮನಕ್ಕೂ  ತರಬೇಕಾಗಿ  ವಿನಂತಿ.

  ಬೆರಳಚ್ಚಿಸಿದವರು.  - ಗುರುಮೂರ್ತಿ  ಜೋಗಿಬೈಲು. )


ರಾಜನ ಮೂರು ಪ್ರಶ್ನೆಗಳು... ⁉ ( ಸಂಗ್ರಹ)

 - ರಾಜನ ಮೂರು ಪ್ರಶ್ನೆಗಳು... ⁉

ಪ್ರತಿದಿನವೂ ಶ್ರದ್ಧೆಯಿಂದ ಭಗವಂತನನ್ನು ಪೂಜಿಸುವವರೂ ಕೂಡಾ ಭಗವಂತ ನೆಂದರೆ ಏನು? ಯಾರು? ಎನ್ನುವ ಪ್ರಶ್ನೆಗೆ ಉತ್ತರಿಸಲಾರರು(ಬಹುಶಃ ಈ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು)

ಈ ಕಥೆಯನ್ನು ಕೇಳಿ --

ಒಬ್ಬ ರಾಜನಿಗೆ ಮೂರು ಅರ್ಥವಾಗದ ಪ್ರಶ್ನೆಗಳು ಬಹುವಾಗಿ ಕಾಡುತ್ತಿದ್ದವು --

೧  - ದೇವರು ಯಾವ ಕಡೆ ನೋಡುತ್ತಾನೆ?

೨  - ದೇವರು ಎಲ್ಲಿರುತ್ತಾನೆ?

೩  - ದೇವರು ಏನು ಮಾಡುತ್ತಾನೆ?

ಈ ಮೂರು ಪ್ರಶ್ನೆಗಳಿಗೆ ಎಷ್ಟು ಯೋಚಿಸಿದರು ಸರಿಯಾದ ಉತ್ತರ ದೊರಕಲಿಲ್ಲ ದರ್ಬಾರಿನಲ್ಲಿ ರಾಜನು ಎಲ್ಲರೊಡನೆ  ಸಮಾವೇಶಗೊಂಡು ಅಲ್ಲಿ ಹಾಜರಿದ್ದ ಎಲ್ಲ ಪಂಡಿತರು ಮೇಧಾವಿಗಳನ್ನುದ್ದೇಷಿಸಿ ಈ ಎಲ್ಲಾ ಪ್ರಶ್ನೆಗಳಿಗೆ

ಸರಿಯಾದ ಉತ್ತರ ಕೊಟ್ಟವರಿಗೆ ಸೂಕ್ತವಾದ ಬಹುಮತಿಯನ್ನು ಕೊಡುವುದಾಗಿಯೂ ತಪ್ಪಿದರೆ/ ತಪ್ಪಿದ್ದಲ್ಲಿ ಉಗ್ರವಾದ ಶಿಕ್ಷೆಯನ್ನು ನೀಡುವುದಾಗಿಯೂ ತಿಳಿಸುತ್ತಾನೆ.ರಾಜನ ಶಿಕ್ಷೆಯ  ಭಯದಿಂದ ಉತ್ತರ ಕೊಡಲು ಯಾರು ಮುಂದೆ ಬರಲಿಲ್ಲ.ಇದೇ ವಿಷಯವಾಗಿ ರಾಜ್ಯದಲ್ಲೆಲ್ಲಾ ಡಂಗುರ ಸಾರಿಸಲಾಯಿತು.ಇದನ್ನು ಕೇಳಿಸಿಕೊಂಡ ದನಗಾಹಿ ಒಬ್ಬನು ಉತ್ತರ ಕೊಡುವುದಾಗಿ ಒಪ್ಪಿ

ಮುಂದೆ ಬಂದನು ಅವನನ್ನು ರಾಜನ ಆಸ್ಥಾನಕ್ಕೆ ಕರೆಸಲಾಯಿತು ಅವನು ಉತ್ತರಿಸುವ ಮೊದಲು ರಾಜನಿಗೆ ಒಂದು ವಿಷಯವನ್ನು ಹೇಳುತ್ತಾನೆ-- 

"ಹೇಳುವವನು ಗುರು ಅವನು ಮೇಲಿರಬೇಕು ಅದರಂತೆ ಕೇಳುವವನು ಶಿಷ್ಯ ಅವನು ಕೆಳಗಿರಬೇಕು"

-- ಅದಕ್ಕೆ ರಾಜನು ಸಮ್ಮತಿಸಿ ಸಿಂಹಾಸನದಿಂದ ಕೆಳಗಿಳಿದು ಕುಳಿತನು ದನಗಾಹಿ ಸಿಂಹಾಸನದ ಮೇಲೆ ಕೂರುತ್ತಾನೆ.

ನಂತರ ದನಗಾಹಿ ರಾಜನಿಗೆ ಪ್ರಶ್ನೆಗಳನ್ನು ಕೇಳಲು ಸೂಚಿಸುತ್ತಾನೆ* 


(1) - ಮೊದಲನೇ ಪ್ರಶ್ನೆ -ದೇವರು ಯಾವ ಕಡೆ ನೋಡುತ್ತಾನೆ?

- ಕೂಡಲೇ ದನಗಾಹಿ ಒಂದು ಉರಿಯುತ್ತಿರುವ ದೀಪವನ್ನು ತರಿಸಲು ಹೇಳುತ್ತಾನೆ ಅದರಂತೆ ಸಭೆಯ ಮಧ್ಯದಲ್ಲಿ ಉರಿಯುತ್ತಿರುವ ದೀಪವನ್ನು ತಂದಿಡಲಾಗುತ್ತದೆ. ರಾಜರೇ ಹೇಳಿ -ಈ ದೀಪ ಯಾವ ಕಡೆಗೆ ನೋಡುತ್ತಿದೆ- ನನ್ನ ಕಡೆಗೋ,

ನಿಮ್ಮ ಕಡೆಗೋ, ಮೇಲೆಯೋ, ಕೆಳಗಡೆಯೋ, ಪೂರ್ವಕ್ಕೋ , ಪಶ್ಚಿಮಕ್ಕೋ ಎನ್ನುತ್ತಾನೆ*

ಆಗ ರಾಜನು  - "ಎಲ್ಲ ಕಡೆಗೂ" ಎಂದು ಉತ್ತರಿಸುತ್ತಾನೆ ಆಗ ದನಗಾಹಿ ಇಷ್ಟು ಸಣ್ಣ ಜ್ಯೋತಿ ಎಲ್ಲಾ ಕಡೆಗೂ ನೋಡುತ್ತಿದೆಯಾದರೆ ಪರಂಜ್ಯೋತಿ ಸ್ವರೂಪನಾದ ಭಗವಂತನು ಎಲ್ಲ ಕಡೆಗೂ ನೋಡಲಾರನಾ, ಸಮಸ್ತ ಜೀವಿಗಳ ಕಣ್ಣಲ್ಲಿ ಬೆಳಕಾಗಿರುವ ಪರಂಜ್ಯೋತಿಯೇ ಪರಮಾತ್ಮ...!!🪔🙏

 (2) - ಎರಡನೇ ಪ್ರಶ್ನೆ "ದೇವರು ಎಲ್ಲಿರುವನು?"

ಆಗ ದನಗಾಹಿ ಒಂದು ಪಾತ್ರೆಯಲ್ಲಿ ಹಾಲನ್ನು ತರುವಂತೆ ಹೇಳುತ್ತಾನೆ ಹಾಲನ್ನು ತಂದಿರಿಸಿದಾಗ ರಾಜರೇ ಈ ಹಾಲಿನಲ್ಲಿ ತುಪ್ಪ ಎಲ್ಲಿರುವುದು ತೋರಿಸುವಿರಾ ಎನ್ನುವನು ಆಗ ರಾಜನು ಹಾಲನ್ನು ಕುದಿಸಿ, ಹೆಪ್ಪಿಟ್ಟು ಅದು ಮೊಸರಾದ ನಂತರ ಅದನ್ನು ಚೆನ್ನಾಗಿ ಕಡೆದರೆ ಬೆಣ್ಣೆ ಸಿಗುತ್ತೆ ನಂತರ ಅದನ್ನು ಹದವಾಗಿ ಕಾಯಿಸಿದಾಗ ತುಪ್ಪ ಸಿಗುತ್ತದೆ.

ಆಗ ದನಗಾಹಿ - ಸರಿಯಾಗಿ ಹೇಳಿದಿರಿ ರಾಜರೇ- ಅದೇ ರೀತಿ ಹೃದಯವೆಂಬ "ಹಾಲ"ನ್ನು "ಗುರು" ಎನ್ನುವ "ಬೆಂಕಿ"ಯಿಂದ ಚೆನ್ನಾಗಿ ಕಾಯಿಸಿ "ಮನಸ್ಸು" ಎನ್ನುವ ಹೆಪ್ಪನ್ನಿಟ್ಟು ಬರುವ ಮೊಸರನ್ನು "ಸಾಧನೆ" ಎಂಬ ಕಡಗೋಲಿನಿಂದ ಚೆನ್ನಾಗಿ ಕಡೆದರೆ "ಜ್ಞಾನ" ಎನ್ನುವ ಬೆಣ್ಣೆ ಸಿಗುತ್ತದೆ...!

ಆ ಬೆಣ್ಣೆಯನ್ನು "ಅಂತರಾತ್ಮ" ಎನ್ನುವ ಬೆಂಕಿಯಿಂದ ಹದವಾಗಿ ಕಾಯಿಸಿದರೆ "ಪರಮಾತ್ಮ' ಎನ್ನುವ ತುಪ್ಪ ಸಿಗುತ್ತದೆ*

(3) - ಮೂರನೇ ಪ್ರಶ್ನೆ- ದೇವರು ಏನು ಮಾಡುತ್ತಾನೆ?

ಆಗ ದನಗಾಹಿ ನಾನೊಬ್ಬ ದನಗಾಹಿ, ನೀವು ಈ ರಾಜ್ಯದ ಮಹಾರಾಜರು- ಕೆಳಗಿದ್ದ ನನ್ನನ್ನು ಸಿಂಹಾಸನದ ಮೇಲೆ ಕೂಡಿಸಿ,  ಸಿಂಹಾಸನದಲ್ಲಿದ್ದ

ನಿಮ್ಮನ್ನು ಕೆಳಗಿಳಿಸಿದ್ದು..!, ಇದೇ ಪರಮಾತ್ಮನ ಲೀಲೆ, ಸತ್ಕರ್ಮಗಳನ್ನು ಮಾಡುವ ಜೀವಿಗಳಿಗೆ ಮುಂದಿನ  ಜನ್ಮದಲ್ಲಿ ಉತ್ತಮ ಜನ್ಮವನ್ನು ನೀಡುವ,  ದುಷ್ಕರ್ಮ ಮಾಡುವವರಿಗೆ ಮುಂದಿನ ಜನ್ಮದಲ್ಲಿ ದುಸ್ತರ ಜೀವನ ನೀಡುವುದು ಪರಮಾತ್ಮನ ಕೆಲಸ...!🙏

ಈ ಉತ್ತರಗಳನ್ನು ಕೇಳುತ್ತಿದ್ದಂತೆ ಇಡೀ ಸಭೆಯು ಅಲ್ಲಿ ನೆರದಿದ್ದವರ ಕರತಾಡನದಿಂದ ಮಾರ್ಮೊಳಗಿತು

🕉 ಸರ್ವೇ ಜನಾಃ ಸುಖಿನೋ ಭವಂತು🕉


Wednesday, November 3, 2021

ಸಂಗ್ರಹ

ಇದು ನನಗೆ ವ್ಯಾಟ್ಸಪ್ ಬಂದ ಮೆಸೇಜ್, ಎಷ್ಟು ಚೆನ್ನಾಗಿ ಬರೆದಿದ್ದಾರೆ ,
ಓದಿದ ನನಗೆ ನಮ್ಮ ಮನೆಯ ಹಳೇ ದೀಪಾವಳಿ ಕಣ್ಣಮುಂದೆ ಬಂದಂತಾಯಿತು 👌👌👌

*ಪ್ಲವನಾಮ ಸಂವತ್ಸರದ* *ದೀಪಾವಳಿ ಹಬ್ಬದ ಆರಂಭದ ದಿನ* ಎಲ್ಲರಿಗೂ ಜಗತ್ತಿಗೂ‌‌‌ ಶುಭವನ್ನು‌ ಹಾರೈಸುತ್ತಾ....
 *ಇಂದು ನೀರು ತುಂಬುವ ಹಬ್ಬ* ಹೌದೇ??  ಹೌದು.
ಆದರೆ ನೀರು ತುಂಬಲು
*ಹಂಡೆ ಇಲ್ಲ. ಕೊಡವಿಲ್ಲ. ಬೋಸಿ ಇಲ್ಲವೇ ಇಲ್ಲ*
ಸುಣ್ಣದ ಪಟ್ಟೆ ಕೆಮ್ಮಣ್ಣು ಇಲ್ಲ. 
*ಹಂಡೆಯ ಸುತ್ತ ಸುತ್ತಲು ಮಾಲಿಂಗನ ಬಳ್ಳಿ* ಇಲ್ಲ. 

ನರಕ ಚತುರ್ದಶಿಯಂದು ಅಭ್ಯಂಗ ಸ್ನಾನಕ್ಕಾಗಿ ಧಗಧಗಿಸುವ ನೀರೊಲೆ ಇಲ್ಲ.
ಸೆಗಣಿ ಕದಡಿದ ನೀರು ಹಾಕಿ ಅಂಗಳ‌ ಸಾರಿಸಿ  ದೊಡ್ಡ ದೊಡ್ಡ ರಂಗೋಲಿ ಇಡುವ ಪೈಪೋಟಿ ಇಲ್ಲ. 
ಅಕ್ಕಿ ನೆನೆಸಿ, ನುಣ್ಣಗೆ ಒರಳಿನಲ್ಲಿ‌ ತಿರುವಿ,  ಹತ್ತಿಯ ತುಂಡಿನ ಸಹಾಯದಿಂದ ಹೊಸ್ತಿಲು, ಮೆಟ್ಟಿಲು ದೇವರ ಮುಂದೆ, ನಡುಮನೆ, ಕೋಣೆ ಕೋಣೆಗಳ ಗೋಡೆ ನೆಲದ ಅಂಚಿನಲ್ಲಿ ..  ಬೆರಳಿನಲ್ಲಿ ಇಡುತ್ತಿದ್ದ ಅಕ್ಕಿಹಿಟ್ಟಿನ ರಂಗೋಲಿ ಇಲ್ಲ...
ಸೆಗಣಿಯಿಂದ ಕೆರಕನನ್ನು ಮಾಡಿ, ಗುಂಡನೆಯ ಚೆಂಡು ಹೂ ಸಿಕ್ಕಿಸಿ, ಮನೆಯ ಪ್ರತಿ ಬಾಗಿಲಿನ ಹೊಸ್ತಿಲಿನ ಅಂಚಿನಲ್ಲಿ ಇಡಲು ಎಷ್ಟೊಮನೆಗಳಿಗೆ ಹೊಸ್ತಿಲೇ ಇಲ್ಲ

ಬೆಳಗಿನ ಜಾವ ಮೂರು ನಾಲ್ಕುಗಂಟೆಗೇ  ಎಣ್ಣೆ ನೀರಿಗಾಗಿ ಎಬ್ಬಿಸುತ್ತಿದ್ದ ಅಮ್ಮ, ನಡು ಮನೆ ಸಾರಿಸಿ ರಂಗೋಲಿ ಇಟ್ಟು ಮಣೆ ಹಾಕಿ ಮಕ್ಕಳನ್ನೆಲ್ಲಾ  ಸಾಲಾಗಿ  ಕೂರಿಸಿ, ಹಣೆಗೆ ಕುಂಕುಮವಿಟ್ಟು, ಬೆಳ್ಳಿಯ ಬಟ್ಟಲಲ್ಲಿ ಎಣ್ಣೆ ತಂದು‌, ಹೂವಿನಿಂದ ನೆತ್ತಿಗೆ ಮೂರುಬಾರಿ ಎಣ್ಣೆ ಇಟ್ಟು, ನಂತರ ತಲೆಗೆಲ್ಲಾ ಎಣ್ಣೆ ಹಚ್ಚಿ ಟಪ ಟಪ  ಬಡಿದು, ಕೈ ಕಾಲ್ಗಳಿಗೂ ಹಚ್ಚಿ   ಎರಡೂ ಕೆನ್ನೆ, ಕೈ ಕಾಲ್ಗಳಿಗೂ ಎಣ್ಣೆಯ ಬೊಟ್ಟಿಟ್ಟು ಆರತಿ ಮಾಡುತ್ತಿದ್ದ... *ಹಬ್ಬದ ನೀರು ಇಬ್ಬರಿಗೆ ಒಂದು ಚೊಂಬು*  ಎಂಬ ಗಾದೆಯಂತೆ  ಶೇಖರಿಸಿಡಲು ಸಾಧ್ಯವಾಗುತ್ತಿದ್ದ ಮಿತ ಪ್ರಮಾಣದ ನೀರಿನಲ್ಲೇ ಎಲ್ಲರಿಗೂ ಸ್ವತಃ ಕೈಯಾರೆ, ಸೌದೆ ಉರಿಯಿಂದ ಕಾಯುತ್ತಿದ್ದ ಹಂಡೆಯಿಂದ ಬೋಸಿಯಲ್ಲಿ ತುಂಬಿಕೊಂಡು ‌ನೀರು ಹಾಕುತ್ತಾ, *ಒಳ್ಳೆಯ ವಿದ್ಯಾಭ್ಯಾಸ ಪಡ್ದು, ಆಯಸ್ಸು ಆರೋಗ್ಯ, ಐಶ್ವರ್ಯ ಸುಖ ಶಾಂತಿಯಿಂದ ನೂರ್ಕಾಲ ಬಾಳು ಮಗು*  ಎಂದು ಪ್ರತಿಯೊಬ್ಬರಿಗೂ ಆಶೀರ್ವದಿಸುತ್ತಿದ್ದ *ಅಮ್ಮ...., *ಪೈಪೋಟಿಯ ಮೇಲೆ  *ನನಗೆ‌ ಮೊದಲು ನೀರು, ನನಗೆ ಮೊದಲು ನೀರು* ಎಂದು ಜಗಳ ಕಾಯುತ್ತಿದ್ದ ನಾವು ಒಡಹುಟ್ಟಿದವರು.....

*ಈಗಿನಂತೆ ೩೬೫ ದಿನವೂ ಯಾವ ಹೊತ್ತಿನಲ್ಲಿ ಬೇಕಾದರೂ ತಂದು ತಿನ್ನ ಬಹುದಾದ, ಒಬ್ಬಟ್ಟು  ಆಂಬೊಡೆ ಕರಿಗಡುಬು ಚಕ್ಕುಲಿ,ಮುಚ್ಚೊರೆ ಕೋಡುಬಳೆ, ಅತ್ರಾಸ, ಎರೆಯಪ್ಪ ಇತ್ಯಾದಿ ಇತ್ಯಾದಿ ಇತ್ಯಾದಿ ...ಊಹೂಂ ....ಅಂದು ಹಬ್ಬದ ದಿನಗಳಲ್ಲಿ ಮಾತ್ರ ಮಾಡುತ್ತಿದ್ದುದರಿಂದ ಹಬ್ಬದ ಪ್ರಮುಖ  ಆಕರ್ಷಣೆಗಳಲ್ಲೊಂದು ವಿಶೇಷ ಭಕ್ಷ್ಯಗಳೂ ಆಗಿದ್ದವಲ್ಲವೇ??,*

*ಧೀಮಂತ ವ್ಯಕ್ತಿತ್ವದ ಆಜಾನುಬಾಹು ಅಪ್ಪ ತಮ್ಮ ಕಂಚಿನ ಕಂಠದಿಂದ ಮಂತ್ರಗಳನ್ನು ಹೇಳುತ್ತಿದ್ದರೆ ಒಂದು ಅಲೌಕಿಕ ವಾತಾವರಣ ಸೃಷ್ಟಿಯಾಗುತ್ತಿತ್ತು*
ನಾವು ಮಕ್ಕಳು ಚಿನುಕುರುಳಿ ಚಟಚಟ ಗುಟ್ಟಿಸುತ್ತಾ ಮತಾಪು ಹಚ್ಚಿ  ಹಿಗ್ಗುತ್ತಿದ್ದೆವು. 
ಸಾಂಗವಾಗಿ, ಸಾವಕಾಶವಾಗಿ ಅಭಿಷೇಕ ಪೂಜೆ ನಡೆದು, ಮಾಡಿದ ಎಲ್ಲಾ ಅಡುಗೆಯ ಸ್ವಲ್ಪ ಭಾಗವನ್ನು ಅಮ್ಮ, ಕುಡಿ ಬಾಳೆ ಎಲೆಯಲ್ಲಿ  ಪಾಂಗಿತವಾಗಿ ಬಡಿಸಿಟ್ಟು ತಂದರೆ, ಅಪ್ಪ ಮಂಡಲ 
ಮಾಡಿ ಎಲ್ಲವನ್ನೂ ಹಣ್ಣು ಕಾಯಿ ತಾಂಬೂಲದ ಜೊತೆ ನೈವೇದ್ಯ ಮಾಡಿ....

ಚಟಪಟ ಪಟಾಕಿಯ ಆಟದಲ್ಲಿ ಮಗ್ನರಾಗಿದ್ದರೂ‌ ಅಡುಗೆ ಮನೆಯಿಂದ ಹೊಮ್ಮುತ್ತಿದ್ದ ತರೆಹಾವರಿ ಭಕ್ಷ್ಯ ಭೋಜ್ಯಗಳ ಸುವಾಸನೆ ಮೂಗೊಡೆಯುತ್ತಿತ್ತು.....

*ಮಂಗಳಾರತಿಗೆ ಬನ್ನಿ* ಎಂಬ ಕರೆಗೇ ಕಾಯುತ್ತಿದ್ದ‌ ನಾವೆಲ್ಲ ಒಳಗೆ ದುಡದುಡನೆ ಧಾವಿಸಿ ಬಂದು ..... *ಅಪ್ಪನ ಉಚ್ಚ ಕಂಠದಿಂದ ಹೊಮ್ಮುತ್ತಿದ್ದ ಮಂತ್ರದೊಂದಿಗೆ ಮಂಗಳಾರತಿ ಮುಗಿದು*.... ನಾವೆಲ್ಲ ಮಂಗಳಾರತಿ ತೆಗೆದುಕೊಂಡು.... ಅಪ್ಪ ದೀರ್ಘದಂಡ ನಮಸ್ಕರಿಸಿದ ಮೇಲೆ.... ನಾವು  ಅಕ್ಕತಂಗಿಯರು, ಅಮ್ಮ,  ತಮ್ಮನೂ ದನಿಗೂಡಿಸಿ ಒಂದಿಷ್ಟು ದೇವರ ನಾಮವನ್ನು ಹಾಡಿ....  ಅಕ್ಷತೆ ಹೂವು ಹಾಕಿ ನಮಸ್ಕರಿಸಿಯಾದ ಮೇಲೆ... ಅಪ್ಪ ಪ್ರಸಾದದ ಹೂ ಕೊಟ್ಟು ಆಶೀರ್ವದಿಸಿ.. ತೀರ್ಥ ಕೊಡುತ್ತಿದ್ದರು.,   ನಾವು ಕಣ್ಣಿಗೊತ್ತಿಕೊಂಡು ತೀರ್ಥ ಸೇವಿಸಿದ ತಕ್ಷಣ,  ಅಮ್ಮ ಮಾಡಿಟ್ಟಿದ್ದ ಆಂಬೊಡೆಯನ್ನೊ ಬೋಂಡವನ್ನೊ  ಒಂದೆರಡನ್ನು ಲಪಟಾಯಿಸಿ ಗಬಕ್ಕೆಂದು ಬಾಯಿಗೆ ಹಾಕಿಕೊಂಡರೆ..... ಆಹಾ!!!! ಆಹಾ!!!!...

 ಕೋಸಂಬರಿ ಪ್ರಿಯರಾದ ನಾನು ಮತ್ತು ನನ್ನ ಅಕ್ಕ ಯಥಾಶಕ್ತಿ ಕೋಸಂಬರಿ ಸೇವೆಯನ್ನೂ ಮಾಡಿಕೊಳ್ಳುತ್ತಿದ್ದೆವು....

ಸಾಲಾಗಿ ಕುಡಿ ಬಾಳೆ ಎಲೆ ಹಾಕಿ,  ಊಟದ ಚಾಪೆ ಹಾಕಿ ... ಅಭಿಗ್ಯಾರ ಮಾಡಿ... ಶಾತ್ರೊಕ್ತವಾಗಿ ಒಂದೊಂದೇ ವ್ಯಂಜನಗಳನ್ನು ಎಲೆಯ ಮೇಲೆ ಅವುಗಳ ನಿಯತ ಜಾಗದಲ್ಲೆ ಬಡಿಸಿ ಕಡೆಯಲ್ಲಿ ತೊವ್ವೆ ತುಪ್ಪ ಹಾಕಿ..... ಅಪ್ಪ  ಪರಿಶಂಚನೆ ಮಾಡಿ, ಅನ್ನ ಬ್ರಹ್ಮನಿಗೆ‌ ನಮಸ್ಕರಿಸಿ ಊಟ ಆರಂಭಿಸಿದ ನಂತರವೇ ನಮ್ಮ ಉದರಾಗ್ನಿ‌ ಶಾಂತಿಯ, ರುಚಿ ರುಚಿ‌ ಪಾಕದ ಸಂತೃಪ್ತ ಭೋಜನದ ರಸಮಯ ಆರಂಭ.... 

ಸಂಜೆ  ದೀಪ ಬೆಳಗಿಸುವ ಸಂಭ್ರಮ.

ಬಲಿಪಾಡ್ಯಮಿಯ ದಿನ  ಮರದ ಮಣೆಯ ಮೇಲೆ, ಸಗಣಿಯಲ್ಲಿ ಬಲೀಂದ್ರನ ಕೋಟೆಯ ವಿನ್ಯಾಸ ರಚಿಸಿ, ಚೆಂಡು ಹೂವು ಸೆಕ್ಕಿಸಿ, ಕೆರಕನನ್ನೂ ಸುತ್ತ ಯಥೇಚ್ಛವಾಗಿ ದೀಪಗಳನ್ನೂ ಇಟ್ಟು, ಬಲೀಂದ್ರನನ್ನು ಆವಾಹಿಸಿ, ಪೂಜಿಸಿ *ಹಾಲು ಹಳ್ಳವಾಗಿ, ಬೆಣ್ಣೆ ಬೆಟ್ಟವಾಗಿ ಬಲಿಚಕ್ರವರ್ತಿಯ ರಾಜ್ಯ ಮೂರು ಲೋಕದಲ್ಲೂ ಹರಡಲಿ* ಎಂದು ಹೇಳಿ‌ ನಮಸ್ಕರಿಸಿ ನಂತರ, ಬಲೀಂದ್ರನ ಎದುರಿಗೇ ಸುರುಸುರು ಬತ್ತಿ ಹಚ್ಚಿದ ನಂತರವೇ ಬೇರೆ ಢಮ್ ಢಮ್ ಢಮಾರ್ ಆಟಂ ಬಾಂಬ್, ಲಕ್ಷ್ಮೀ ಬಾಂಬ್, ಇತ್ಯಾದಿ ಪಟಾಕಿಗಳ, ಹೂವಿನ ಕುಂಡ, ಭೂಚಕ್ರ, ವಿಷ್ಣುಚಕ್ರಗಳ‌ನ್ನು ಹಚ್ಚಿ ಕುಣಿಯುವ ಸಂಭ್ರಮ

ಮನೆಯ ಒಂಭತ್ತು ಜನಕ್ಕೆ ಹೊಸ ಬಟ್ಟೆ ತರಲು ಸಾಧ್ಯವಾಗದಿದ್ದರೂ ಅದೊಂದು ಕೊರತೆ ಎಂದು‌ ಯಾರಿಗೂ ಯಾವತ್ತೂ‌ ಅನಿಸುತ್ತಿರಲಿಲ್ಲ.

🌟 *ಹಬ್ಬ* 🌟  *ಎಂಬ ಪದದಲ್ಲೇ ಸಂಭ್ರಮ ಸಡಗರ ಸಂತೋಷ ತುಂಬಿ ತುಂಬಿ ತುಳುಕುತ್ತಿತ್ತಾಗಿ ಆಗೆಲ್ಲ ನಮಗೆ ಕೊರತೆಗಳ ನಡುವೆಯೂ ಹಬ್ಬ ಹಬ್ಬವೇ ಆಗಿ ಸಂತೋಷ,  ಸಡಗರ ಸಂಭ್ರಮಗಳನ್ನೇ ಉಡುತ್ತಿದ್ದೆವು.*ತೊಡುತ್ತಿದ್ದೆವು*.

*ಒಳಗೂ ಹೊರಗೂ ಹಬ್ಬವನ್ನೇ ತುಂಬಿಕೊಂಡು ನಲಿಯುತ್ತಿದ್ದೆವು....*

*ಇಂದು......???  ಕಾಲಾಯ ತಸ್ಮೈ ನಮಃ... ಅಷ್ಟೇ*
✍🏼ಸಂಗ್ರಹ: HNS 

ಇದನ್ನು ಓದಿ ನನ್ನ ಮನಃಪಟಲದ
ಹಳೆಯ ನೆನಪುಗಳ ಸುರಿಮಳೆ. ಮನಸ್ಸಿಗೆ ಸಿಂಚನವಾಯ್ತು 
ಬರಹ ಚೇತೊಹಾರಿ ಇಂದಿನವರಿಗೆ ಇದೆಲ್ಲದರ ಅನುಭವ ಗೋವಿಂದ 
*ಆಂದಿನವರಿಗೆ ಆನಂದವೊ *ಅನಂದ.*

Friday, October 12, 2018

ಸಂಗ್ರಹ

ಯಾರೋ ಪುಣ್ಯಾತ್ಮರು ಬಹಳ ಸುಂದರವಾಗಿ ಬರೆದಿದ್ದಾರೆ ತಪ್ಪದೇ ಓದಿ

ನಾನು ಜೀವನದಲ್ಲಿ ಗೆದ್ದೇ ಗೆಲ್ಲುವೇ ಎನ್ನುವವರು ದಯವಿಟ್ಟು ಓದಿ.
ಸಾಧಿಸುವ ಛಲ ಇದ್ದರೆ ಜಗತ್ತನ್ನೇ ಗೆಲ್ಲಬಹುದು.

ಒಂದು ಯುದ್ಧದಿಂದಾಗಿ  ತಿಮ್ಮಪ್ಪ ನಾಯಕ ಕನಕದಾಸ ನಾಗಿ ಬದಲಾದ.

ನಾರದ ನ  ಭೇಟಿಯಿಂದ ಕ್ರೂರನಾಗಿದ್ದ ವ್ಯಕ್ತಿ   ವಾಲ್ಮೀಕಿ ಯಾದ.

ಎಂಟನೆಯ ವಯಸ್ಸಿಗೆ ಉಪನಯನವನ್ನು ತಿರಸ್ಕರಿಸಿ
 ಬಸವಣ್ಣ ಜಗಜ್ಯೋತಿ ಯಾದ.

ಸತತ ಪ್ರಯತ್ನ ಪ್ರಾಮಾಣಿಕ ಪರಿಶ್ರಮದಿಂದ ಡಾ.ಬಿ.ಆರ್ ಅಂಬೇಡ್ಕರ್ ಸಂವಿಧಾನ ಶಿಲ್ಪಿ ಯಾದ.

ತನ್ನ ಅದ್ಬುತ ವಿಚಾರಧಾರೆಗಳಿಂದ ಜಗತ್ತನ್ನು ಗೆದ್ದ ನರೇಂದ್ರ ವಿವೇಕಾನಂದ ನಾದ.

ತನ್ನ ಮಗನಿಗೆ ಊಟ ಹಾಕಲಾಗದೆ ತನ್ನ ಮಗನನ್ನೇ ವಿಷ ಹಾಕಿ ಕೊಲ್ಲಲು ತಾಯಿ ನಿರ್ಧರಿಸಿದ್ದಳು.
ಅಂದು ಅಚಾನಕ್ ಬದುಕುಳಿದ ವ್ಯಕ್ತಿ ಇಂದು ಕನ್ನಡದ ಸೂಪರ್ ಸ್ಟಾರ್ ಉಪೇಂದ್ರ ನಾದ.

ತನ್ನ ಬಡತನ ಹಸಿವುಗಳನ್ನು ಮೆಟ್ಟಿ ನಿಂತು ಸತತ ಅಬ್ಯಾಸದಿಂದ ರವಿ ಡಿ ಚನ್ನಣ್ಣನವರ್ ಇಂದು ಐಪಿಎಸ್ ಅಧಿಕಾರಿಯಾದ.

ಅಧಿಕಾರದ ವ್ಯಾಮೋಹಕ್ಕೆ ಬಲಿಯಾಗದೆ ಎಸ್.ಆರ್.ಕಂಠಿ ಯವರು ಮುಖ್ಯಮಂತ್ರಿಯ ಸ್ಥಾನ ಬಿಟ್ಟು ಕೊಟ್ಟು ರಾಜಕೀಯದ "ಭರತ" ನಾದ.

ಇಳಿವಯಸ್ಸಿನಲ್ಲಿಯೂ ಸರ್ಕಾರದ ತಪ್ಪು ನಿರ್ಧಾರ,  ಭ್ರಷ್ಟಾಚಾರದ ವಿರುದ್ಧ ಚಾಟಿ ಬೀಸಿ ಸತ್ಯಾಗ್ರಹ ನಡೆಸಿದ ಅಣ್ಣಾ ಹಜಾರೆ ಆಧುನಿಕ ಗಾಂಧಿ ಯಾದರು.

ಬೀದಿ ದೀಪದಲ್ಲಿ ಓದಿದ ವಿಶ್ವೇಶ್ವರಯ್ಯ ಭಾರತ ರತ್ನ ನಾದ.

ಎಂಟನೇ ತರಗತಿ ಫೇಲ್ ಆದ ಸಚಿನ್ ಇಂದು ಕ್ರಿಕೆಟ್ ಲೋಕದ ದೇವರಾದ.

ಪೆಟ್ರೋಲ್ ಹಾಕುತ್ತಿದ್ದ ಅಂಬಾನಿ ಇಂದು ಭಾರತದ ನಂಬರ್ ಒನ್ ಶ್ರೀಮಂತನಾದ.

ಗೋಪಾಲ್ ಕೃಷ್ಣ ರೋಲಂಕಿ ಎಂಬ ಆಂಧ್ರದ ಯುವಕ ಇಂಗ್ಲಿಷ್ ಮತ್ತು
 ಹಿಂದಿ ಬರದಿದ್ದರೂ ಐಎಎಸ್ ಪರೀಕ್ಷೆಯಲ್ಲಿ ಮೂರನೇ Rank ಬಂದ.

ಚಪ್ಪಲಿ ಹೋಲಿಯುತ್ತಿದ್ದ ಕುಟುಂಬದಿಂದ ಬಂದ ಅಬ್ರಹಾಂ ಲಿಂಕನ್ ಸತತ ಸೋಲು ಕಂಡರು ಕೊನೆಗೆ ಅಮೆರಿಕದ ಅಧ್ಯಕ್ಷ ನಾದ.

ಎನ್. ಅಂಬಿಕಾ ಎಂಬ ಕಾನ್ಸ್ಟೇಬಲ್ ನ ಹೆಂಡತಿ ತನ್ನ ಗಂಡ ಐಪಿಎಸ್ ಅಧಿಕಾರಿಗೆ ಕೊಡುವ ಗೌರವವನ್ನು ಕಂಡು ತಾನು ಹಾಗೆಯೇ ಅಧಿಕಾರಿಯಾಗಬೇಕೆಂದು ಛಲಬಿಡದೆ ಗೆದ್ದ ಮಹಿಳೆ (ಈಕೆಯ ಬದುಕು ತುಂಬಾ ರೋಚಕವಾಗಿದೆ ಮಿಸ್ ಮಾಡದೆ ತಿಳಿದುಕೊಳ್ಳಿ).

ನಮ್ಮ ಜಿಲ್ಲೆಯವನೊಬ್ಬ
ಐಎಎಸ್ ಅಧಿಕಾರಿಯಾದ.
ನಮ್ಮ ತಾಲೂಕಿನವನೊಬ್ಬ
ಕೆ.ಎ.ಎಸ್ ಅಧಿಕಾರಿಯಾದ.
ನಮ್ಮ ಊರಿನವನೊಬ್ಬ
ಪಿ.ಎಸ್.ಐ. ಆದ.
ನಮ್ಮ ಓಣಿಯವನೊಬ್ಬ
ಎಫ್.ಡಿ.ಎ. ಆದ.
ನಮ್ಮ ಮನೆಯ ಪಕ್ಕದವನೊಬ್ಬ
ಎಸ್.ಡಿ.ಎ ಆದ.

ಇದೆಲ್ಲವನ್ನು ನೋಡಿದರೂ ನಾವು ಏನು ಆಗಲಿಲ್ಲ...? ಏಕೆಂದರೆ ನಮ್ಮಲ್ಲಿ ಸಾಧಿಸುವ ಛಲವೇ ಸತ್ತು ಹೋಗಿರಬಹುದೇನೋ ಅನ್ನಿಸುತ್ತಿದೆ ಮತ್ತೆ ಇನ್ನು ಮುಂದಾದರು ನಾವು ಓದಬೇಕೆನ್ನಿಸುತ್ತದೆ.

ಕಷ್ಟ ಯಾರಿಗಿಲ್ಲಾ...?
ಅವಮಾನ ಯಾರಿಗಾಗಿಲ್ಲ...??
ಸೋಲನ್ನ ಯಾರು ನೋಡಿಲ್ಲ...??

ಕಷ್ಟ ಗಳನ್ನ ಮನುಷ್ಯ ಮೌನ ವಾಗಿ ದಾಟಬೇಕು.
ಪರಿಶ್ರಮ ಸದ್ದಿಲ್ಲದೆ ಸಾಗುತ್ತಿರಬೇಕು.
ಆಗ ಸಿಗುವ ಯಶಸ್ಸಿನ ಫಲ ಜಗತ್ತಿಗೆ ಕೇಳಿಸುವಷ್ಟು ಜೊರಾಗಿರುತ್ತದೆ.
ಜಗತ್ತಿನಲ್ಲಿ ಯಾವುದು ಬೇಕಾದರು ಮೋಸ ಮಾಡಬಹುದು.
ಆದರೆ ಪುಸ್ತಕ ಎಂದಿಗೂ ಮಾಡಲಾರದು.

ಎದೆಗೆ ಬಿದ್ದ ಅಕ್ಷರ..
ಭೂಮಿಗೆ ಬಿದ್ದ ಬೀಜ.. ಮುಂದೊಂದು ದಿನ ಫಲ ಕೊಡುವುದು ಎಂಬುವುದುಂಟು.

ಪುಸ್ತಕ ಗಳನ್ನ ಪ್ರೀತಿಸುವವನಿಗೆ ಸ್ನೇಹಿತರ ಅಗತ್ಯವಿಲ್ಲ.

ಕಠಿಣ ಪರಿಶ್ರಮ,ದೃಢ ಸಂಕಲ್ಪ,ತಾಳ್ಮೆ ಯೊಂದಿದ್ದರೆ ಏನನ್ನಾದರೂ ಸಾದಿಸಬಹುದು.

ಇಂತಹ ಸಂದೇಶಗಳು ಹಲವರಿಗೆ ಸ್ಫೂರ್ತಿ ಯಾಗಬಹುದು.
ಕೆಲವರಿಗೆ ಅಸಡ್ಡೆಯಾಗಿ ಕಾಣಬಹುದು..!!
ಆದರೆ.
ಸಾಧನೆ ಮಾಡುವವನಿಗೆ ಸಾಧಿಸುವ ಛಲ ಬೇಕು ಅಷ್ಟೇ.

ಭವಿಷ್ಯದ ಬಗ್ಗೆ ಚಿಂತಿಸದ್ದರೆ ನಿಮಗೆ ಭವಿಷ್ಯವೇ ಇರುವುದಿಲ್ಲ ಎಂದು  ಗಾರ್ಲ ವರ್ದಿ ರವರು ಹೇಳುತ್ತಾರೆ.

ಯೋಚಿಸಿ ನಿರ್ಧರಿಸಿ.
ಯಾಕಂದ್ರೆ ಕಳೆದು ಹೋದ ಸಮಯ ಮತ್ತೆ ಬರುವುದಿಲ್ಲ

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...